Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

Bengaluru City

ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

Public TV
Last updated: December 5, 2021 10:50 am
Public TV
Share
2 Min Read
BC PATIL 768x491 1
SHARE

-ಮಣ್ಣು ಅಳಿದರೆ ಮಾನವ ಅಳಿದಂತೆ

-ಡಿಸೆಂಬರ್ 5 ಅಂತರಾಷ್ಟ್ರೀಯ ಮಣ್ಣು ದಿನ

ಬೆಂಗಳೂರು: ಮಣ್ಣಿನಿಂದ ಜೀವ, ಮಣ್ಣಿನಿಂದ ಕಾಯ, ಮಣ್ಣು ಅಳಿದರೆ ಮಾನವ ಅಳಿದಂತೆ. ಮಣ್ಣು ಒಮ್ಮೆ ನಾಶವಾದರೆ, ಪುನಃ ಪಡೆಯಲಾಗದ ಅಮೂಲ್ಯ ಸಂಪತ್ತಾಗಿರುವುದರಿಂದ ಇದನ್ನು ಉಳಿಸಲೇಬೇಕಾದ ಮಹತ್ತರ ಜವಾಬ್ದಾರಿ ಹಾಗೂ ಕರ್ತವ್ಯ ಪ್ರತಿಯೊಬ್ಬರದ್ದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

Contents
  • -ಮಣ್ಣು ಅಳಿದರೆ ಮಾನವ ಅಳಿದಂತೆ
  • -ಡಿಸೆಂಬರ್ 5 ಅಂತರಾಷ್ಟ್ರೀಯ ಮಣ್ಣು ದಿನ

SOIL

ಮಣ್ಣು ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ವರ್ಷ ಧ್ಯೇಯವಾಕ್ಯದೊಂದಿಗೆ ಈ ದಿನ ಆಚರಣೆಗೊಳ್ಳುತ್ತದೆ. ವಿಶ್ವ ಮಣ್ಣು ದಿನ-5 ಡಿಸೆಂಬರ್ 2021ರ ಧ್ಯೇಯ ‘ಮಣ್ಣಿನ ಸವುಳಾಗುವಿಕೆಯನ್ನು ತಡೆಗಟ್ಟಿ, ಮಣ್ಣಿನ ಉತ್ಪಾದಕತೆ ಹೆಚ್ಚಿಸಿ’ ಎಂದು ಘೋಷಿಸಿದೆ. ಮಣ್ಣು ಪ್ರಕೃತಿಯ ಒಂದು ಅಮೂಲ್ಯ ಕೊಡುಗೆ. ಮನುಷ್ಯ , ಪ್ರಾಣಿ, ಜೀವಿಗಳು, ಸಸ್ಯಗಳಿಗೆ ಆಧಾರವೇ ಮಣ್ಣು. ಮಣ್ಣಿನಿಂದ ಜೀವ, ಮಣ್ಣಿನಿಂದ ಕಾಯ, ಮಣ್ಣು ಅಳಿದರೆ ಮಾನವ ಅಳಿದಂತೆ ಎಂದು ತಿಳಿಸಿದ ಪುರಂದರದಾಸರ ಮಾರ್ಮಿಕ ನಿಲುವು ನಿತ್ಯ ಸತ್ಯವಾಗಿದೆ. ಇದನ್ನೂ ಓದಿ: ಇಂಡೋನೇಷ್ಯಾ: ಜ್ವಾಲಾಮುಖಿ ಸ್ಫೋಟದಿಂದ 13 ಮಂದಿ ಸಾವು

ಜಗತ್ತಿನ ಶೇ. 95 ರಷ್ಟು ಆಹಾರ ಮಣ್ಣಿನಿಂದಲೇ ದೊರಕುವುದು. ಈಗಾಗಲೇ ಶೇ.33 ರಷ್ಟು ಮಣ್ಣು ತನ್ನ ಫಲವತ್ತತೆಯನ್ನು ಕಳೆದುಕೊಡಿರುವುದು ಕಂಡುಬಂದಿರುವುದರಿಂದ ಉತ್ಪಾದಕತೆಯಲ್ಲಿ ಶೇ.17 ರಷ್ಟು ಕಡಿಮೆಯಾಗಿದೆ. ಮಣ್ಣು ಒಮ್ಮೆ ನಾಶವಾದರೆ, ಪುನಃ ಪಡೆಯಲಾಗದ ಅಮೂಲ್ಯ ಸಂಪತ್ತು. ಸಸ್ಯ ಸೇರಿದಂತೆ ಸಕಲ ಜೀವಿಗಳಿಗೆ ಜೀವವಾಗಿದೆ. ಮಣ್ಣಿನ ಫಲವತ್ತತೆ ಪೋಷಕಾಂಶಗಳು ಮಾತ್ರವಲ್ಲ, ಅನುಕೂಲಕರ ಜೀವಿಗಳು, ನೀರು ಹಾಗೂ ಗಾಳಿಯ ಸಂಬಂದಗಳನ್ನು ಒಳಗೊಂಡಿದೆ. ಸಜೀವ ಮಣ್ಣು ಸಕಲ ಜೀವಿಗಳಿಗೆ ಆಹಾರ, ಮೇವು, ವಸತಿ, ಇಂಧನ ಇತ್ಯಾದಿ ಒದಗಿಸುತ್ತಿದೆ. ಮಳೆ ನೀರನ್ನು ಸಂಗ್ರಹಿಸಿ ಶುದ್ಧ ಮಾಡುತ್ತದೆ. ಸಾವಯವ ವಸ್ತುವನ್ನು ಪೋಷಕಾಂಶಗಳಾಗಿ ಬದಲಿಸುತ್ತದೆ. ಪ್ರವಾಹಗಳನ್ನು ಹಾಗೂ ಹವಾಮಾನ ಏರುಪೇರನ್ನು ತಡೆಯುತ್ತದೆ. ಭೂಮಿ ಮೇಲಿನ ಜೀವ ಜಂತುಗಳಿಗೆ ಆಶ್ರಯ ನೀಡುತ್ತದೆ. ಆದ್ದರಿಂದ ಮಣ್ಣಿನ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಬಿ.ಸಿ.ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: ತಮಿಳುನಾಡಲ್ಲಿ ಸರ್ಕಾರಿ ನೌಕರಿಗೆ ತಮಿಳು ಕಡ್ಡಾಯ

ಮಣ್ಣೇ ಹೊನ್ನು, ಸಕಲ ಜೀವರಾಶಿಗೂ ಮಣ್ಣೇ ಆಧಾರ.

ಅನ್ನದಾತರ ಜೀವನಾಡಿಯಾದ ಮಣ್ಣಿನ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ. #WorldSoilDaypic.twitter.com/oizxGh2k50

— B C Patil (@bcpatilkourava) December 5, 2021

ಅಂತರಾಷ್ಟ್ರೀಯ ಮಟ್ಟದಲ್ಲಿ ಮಣ್ಣಿನ ದಿನವನ್ನು ಆಚರಿಸುವಂತೆ ಅಂತಾರಾಷ್ಟ್ರೀಯ ಮಣ್ಣು ವಿಜ್ಞಾನ ಸಂಸ್ಥೆ 2002ರಲ್ಲೇ ಶಿಫಾರಸು ಮಾಡಿದ್ದು, ನಂತರ 5 ಡಿಸೆಂಬರ್ 2014 ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರಾಷ್ಟ್ರೀಯ ಮಣ್ಣು ದಿನವನ್ನು ಆಚರಿಸಲಾಯಿತು. ಮಣ್ಣಿನ ಸವಕಳಿ, ರಾಸಾಯನಿಕ ಗೊಬ್ಬರದ ಅಸಮತೋಲನ ಬಳಕೆಯಿಂದ ಮಣ್ಣಿನ ಭೌತಿಕ, ರಾಸಾಯನಿಕ ಮತ್ತು ಜೈವಿಕ ಲಕ್ಷಣಗಳು ನಾಶವಾಗುತ್ತಿದೆ. ಮಣ್ಣಿನಲ್ಲಿ ಸವುಳು, ಜವುಳು, ಆಮ್ಲ ಮತ್ತು ಕ್ಷಾರಮಯ ವಾಗಿ ಬೆಳೆಗಳ ಉತ್ಪಾದನೆ ಕುಂಠಿತವಾಗುತ್ತಿದೆ. ಕರಗುವ ಲವಣಗಳನ್ನು ಭೂಮಿಯಲ್ಲಿ ಉಳಿಸಿಕೊಂಡಾಗ ಮಣ್ಣಿನ ಸವುಳು ಸಂಭವಿಸುತ್ತದೆ. ಇದು ನೈಸರ್ಗಿಕವಾಗಿ ಅಥವಾ ಅನುಚಿತ ಮಾನವ ಚಟುವಟಿಕೆಗಳಿಂದ, ವಿಶೇಷವಾಗಿ ಕೃಷಿ ಪದ್ಧತಿಗಳಿಂದ ಸಂಭವಿಸುತ್ತದೆ. ಇದಲ್ಲದೆ, ಕಡಿಮೆ ಉಪ್ಪು ಕರಗುವಿಕೆಯಿಂದಾಗಿ ಕೆಲವು ಭೂಮಿಗಳು ಆರಂಭದಲ್ಲಿ ಚೌಳಾಗುತ್ತದೆ ಆದ್ದರಿಂದ ಕೃಷಿಕರು ಮಣ್ಣು ಸವುಳಾಗುವುದನ್ನು ತಪ್ಪಿಸುವುದನ್ನು ಗಮನದಲ್ಲಿಟ್ಟುಕೊಂಡೇ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಬೇಕು. ಮಣ್ಣು ಸವಕಳಿ ತಪ್ಪಿಸಲು ಕೃಷಿ ಇಲಾಖೆಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದಾಗಿದೆ ಎಂದು ಮಾಹಿತಿ ಹಂಚಿಕೊಂಡರು.

TAGGED:BC Patilfarmerssoilಬಿ.ಸಿ. ಪಾಟೀಲ್ಮಣ್ಣುರೈತರು
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
17 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
19 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
28 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
1 hour ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
1 hour ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?