Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ – ಕುಸ್ತಿಪಟುಗಳ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ – ಕುಸ್ತಿಪಟುಗಳ ಸ್ಪಷ್ಟನೆ

Crime

ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ – ಕುಸ್ತಿಪಟುಗಳ ಸ್ಪಷ್ಟನೆ

Public TV
Last updated: June 18, 2023 10:11 am
Public TV
Share
3 Min Read
Wrestlers
SHARE

ನವದೆಹಲಿ: ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧವೂ ಅಲ್ಲ, ಬ್ರಿಜ್‌ ಭೂಷಣ್‌ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ (Wrestler Protest) ಎಂದು ಒಲಿಂಪಿಕ್ಸ್‌ (Olympic) ಪದಕ ವಿಜೇತೆ ಸಾಕ್ಷಿ ಮಲಿಕ್‌ ಹಾಗೂ ಪತಿ ಸತ್ಯವರ್ತ್‌ ಕಡಿಯಾನ್‌ ಹೇಳಿದ್ದಾರೆ.

The Truth.#WrestlersProtest pic.twitter.com/eWHRpOSwD9

— Sakshee Malikkh (@SakshiMalik) June 17, 2023

ರಾಜಕೀಯ ಪ್ರೇರಿತವೆಂಬ (Politically Motivated) ಟೀಕೆಗಳಿಗೆ ಗುರಿಯಾಗಿದ್ದ ತಮ್ಮ ಹೋರಾಟದ ಬಗ್ಗೆ ಕುಸ್ತಿಪಟುಗಳು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

Wrestlers

WFI ಮುಖ್ಯಸ್ಥ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ (Brij Bhushan Sharan Singh) ವಿರುದ್ಧ ಲೈಂಗಿಕ ಆರೋಪ ಹೊರಿಸಿ ಹಲವು ದಿನಗಳಿಂದ ಕುಸ್ತಿಪಟುಗಳು ಹೋರಾಟ ನಡೆಸುತ್ತಿದ್ದರು. ದೆಹಲಿ ಜಂತರ್‌ ಮಂತರ್‌ ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ, ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಸೇರಿದಂತೆ ಹಲವು ರಾಜಕೀಯ ನಾಯಕರು ಪ್ರತಿಭಟನೆಗೆ ಬೆಂಬಲ ನೀಡಿದ್ದರು. ಹಾಗಾಗಿ ಕುಸ್ತಿಪಟುಗಳ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಆರೋಪಿಸಲಾಗಿತ್ತು. ಈ ಕುರಿತು 11 ನಿಮಿಷಗಳ ಸುದೀರ್ಘ ವೀಡಿಯೋ ಹಂಚಿಕೊಂಡಿರುವ ಸಾಕ್ಷಿ ಮಲಿಕ್‌ ತಮ್ಮ ಹೋರಾಟದ ಕುರಿತು ಸ್ಪಷ್ಟನೆ ನೀಡಿದ್ದಾರೆ.

Wrestler

ನಮ್ಮ ಹೋರಾಟದ ಬಗ್ಗೆ ವದಂತಿಗಳನ್ನ ಹರಡಲಾಗುತ್ತಿದೆ, ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಕಳೆದ ಜನವರಿಯಲ್ಲಿ ನಾವು ಜಂತರ್‌ ಮಂತರ್‌ ನಲ್ಲಿ ಪ್ರತಿಭಟನೆಗೆ ಇಳಿದಾಗಿ ಇಬ್ಬರು ಬಿಜೆಪಿ ನಾಯಕರನ್ನೇ ಕೋರಿ ಪೊಲೀಸರಿಂದ ಅನುಮತಿ ಪಡೆದುಕೊಂಡಿದ್ದೆವು. ಕಳೆದ 10-12 ವರ್ಷಗಳಿಂದ ಕುಸ್ತಿಪಟುಗಳ ಮೇಲೆ ಕಿರುಕುಳ ನಡೆಯುತ್ತಲೇ ಬಂದಿದೆ. 90 ಪ್ರತಿಶಕ್ಕೂ ಹೆಚ್ಚು ಕುಸ್ತಿಪಟುಗಳಿಗೆ ತೊಂದರೆ ಅನುಭವಿಸುತ್ತಿರುವುದು ತಿಳಿದಿತ್ತು. ಆದರೆ ಒಗ್ಗಟ್ಟಿನ ಕೊರತೆಯಿಂದಾಗಿ ಸುಮ್ಮನಿದ್ದೆವು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

Wrestlers 5

ಸಂಸತ್‌ ಮುತ್ತಿಗೆ ನಿರ್ಧಾರ ನಮ್ಮದಲ್ಲ:
ನೂತನ ಸಂಸತ್‌ ಭವನಕ್ಕೆ ಮುತ್ತಿಗೆ ಹಾಕುವ ನಿರ್ಧಾರ ನಮ್ಮದಾಗಿರಲಿಲ್ಲ. ʻಮಹಿಳಾ ಪಂಚಾಯತ್‌ʼನಡೆಸಲು ಉದ್ದೇಶಿಸಿದ್ದು ನಾವಲ್ಲ ಎಂದು ಸ್ಪಷ್ಟಪಡಿಸಿದ ಸತ್ಯವರ್ತ್‌, ಮಹಿಳಾ ಸಮ್ಮಾನ್‌ ಪಂಚಾಯತ್‌ ನಡೆಸಲು ಕೆಲ ಪಂಚಾಯುತ್‌ ಸದಸ್ಯರು ನಿರ್ಧರಿಸಿದ್ದರು. ನಾವು ಅವರ ನಿರ್ಧಾರದಂತೆ ನಡೆದುಕೊಂಡೆವು, ಆದ್ರೆ ಅದು ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿತು, ಹೋರಾಟದಲ್ಲಿ ನಮ್ಮನ್ನ ಸಂಪೂರ್ಣ ಕುಗ್ಗುವಂತೆ ಮಾಡಿತು. ಇದನ್ನೂ ಓದಿ: ಬೇಕಂತಲೇ ಹೆಣ್ಮಕ್ಕಳ ಮೈ ಮುಟ್ಟುತ್ತಿದ್ದ, ಹಿಂಬಾಲಿಸುತ್ತಿದ್ದ – ಬ್ರಿಜ್‌ ಭೂಷಣ್‌ ವಿರುದ್ಧ 10 ಕಂಪ್ಲೆಂಟ್‌, 2 FIR

Wrestlers 1 1

ಕುತಂತ್ರ ಅರ್ಥ ಮಾಡಿಕೊಳ್ಳಲಿಲ್ಲ:
ಗಂಗಾ ನದಿಗೆ ಪದಕಗಳನ್ನ ಎಸೆಯಲು ಮುಂದಾದಾಗ ನಮ್ಮನ್ನ ತಡೆದರು. ಒಂದು ವೇಳೆ ಪದಕ ಎಸೆದಿದ್ದರೆ ಅದು ಹಿಂಸಾಚಾರಕ್ಕೆ ಕಾರಣವಾಗುತ್ತಿತ್ತು. ಅದಕ್ಕಾಗಿಯೇ ನಮ್ಮ ನಿರ್ಧಾರದಿಂದ ಹಿಂದೆ ಸರಿದೆವು. ನಾವು ಯಾರದ್ದೋ ಕುತಂತ್ರಕ್ಕೆ ಬಲಿಯಾಗುತ್ತಿದ್ದೇವೆ ಎಂಬುದನ್ನ ಅರ್ಥಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಒತ್ತಡದಿಂದಲೇ ತೀರ್ಮಾನ ಕೈಗೊಳ್ಳುತ್ತಿದ್ದೆವು. ಜೀವನಪೂರ್ತಿ ಕುಸ್ತಿ ಆಡಿದರೂ, ಕೆಲ ಸಂದರ್ಭಗಳನ್ನ ನಿಭಾಯಿಸಲು ಸಾಧ್ಯವಾಗಲಿಲ್ಲ. ಹರಿಧ್ವಾರದ ಘಟನೆಯ ಬಳಿಕ ನಮ್ಮ ಬೆಂಬಲಕ್ಕೆ ಇರುವವರು ಯಾರು, ಸರ್ಕಾರದ ಪರವಾಗಿ ಇರುವವರು ಯಾರು ಅನ್ನೋದು ತಿಳಿಯಿತು ಎಂದು ಹೇಳಿಕೊಂಡಿದ್ದಾರೆ.

ನಾವು ಏನಾದರೂ ತಪ್ಪು ಮಾಡಿದ್ರೆ ಕ್ಷಮೆ ಯಾಚಿಸುತ್ತೇವೆ. ನಮ್ಮ ಪ್ರತಿಭಟನೆಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ ಸತ್ಯವರ್ತ್‌, ಕೊನೆಯಲ್ಲಿ ಯಾವುದೇ ಸಂದರ್ಭದಲ್ಲಿ ನಾವು ಒಗ್ಗಟ್ಟಾಗಿ ಇಲ್ಲದಿದ್ದಾಗ ವ್ಯವಸ್ಥೆಯು ಅದರ ಪ್ರಯೋಜನ ಪಡೆದುಕೊಳ್ಳುತ್ತದೆ. ಆದ್ದರಿಂದ ಯಾವುದೇ ವ್ಯವಸ್ಥೆಯ ವಿರುದ್ಧ ಅನ್ಯಾಯ ಮೆಟ್ಟಿ ನಿಲ್ಲಬೇಕಾದರೆ ಮೊದಲು ಒಗ್ಗಟ್ಟಾಗಿರಿ ಎಂದು ಸಲಹೆ ನೀಡಿದ್ದಾರೆ.

TAGGED:Bajrang PuniaBrij Bhushan Sharan SinghDelhi PolicePOCSOSakshee MalikkhVinesh PhogatWFIWrestler Protestಕುಸ್ತಿಪಟುಗಳುಪ್ರತಿಭಟನೆಬ್ರಿಜ್‌ ಭೂಷಣ್‌ ಶರಣ್ ಸಿಂಗ್‌ವಿನೇಶ್ ಫೋಗಟ್ಸಾಕ್ಷಿ ಮಲಿಕ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
6 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
8 minutes ago
Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
20 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?