ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ (92) ನಿಧನರಾಗಿದ್ದಾರೆ.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈದಿದ್ದ ಪಂಚಾಕ್ಷರಿ ಹಿರೇಮಠ ಅವರು ಮೂಲತಃ ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದವರು. ಧಾರವಾಡದಲ್ಲಿ ವಾಸವಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ನಿಧನರಾಗಿದ್ದಾರೆ. ಇಂದು ಸಂಜೆ ಬಿಸರಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈಯ್ಯುವ ಜೊತೆಗೆ ಸಾಹಿತ್ಯ, ಪ್ರಬಂಧ, ವಿಮರ್ಶೆ, ಅನುವಾದ, ಕಾವ್ಯ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕನ್ನಡ ಭಾಷೆಯನ್ನು… pic.twitter.com/gc6kLjYgFU
— CM of Karnataka (@CMofKarnataka) March 14, 2025
ಪಂಚಾಕ್ಷರಿ (Panchakshari Hiremath) ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ, ಬಹುಭಾಷಾ ಪಂಡಿತ ಡಾ. ಪಂಚಾಕ್ಷರಿ ಹಿರೇಮಠ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ದೇಶಸೇವೆಗೈಯ್ಯುವ ಜೊತೆಗೆ ಸಾಹಿತ್ಯ, ಪ್ರಬಂಧ, ವಿಮರ್ಶೆ, ಅನುವಾದ, ಕಾವ್ಯ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದವರು. ಪಂಚಾಕ್ಷರಿ ಅವರ ಅಗಲಿಕೆಯಿಂದ ನಾಡಿನ ಸಾರಸ್ವತ ಲೋಕ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ನಲ್ಲಿ ಸಿಎಂ ಪೋಸ್ಟ್ ಹಾಕಿದ್ದಾರೆ.