Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್‌ ವಿವಾದದಿಂದ ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ; ಸಮವಸ್ತ್ರ ಆದೇಶ ಪರಿಷ್ಕರಿಸಿ – ಸಿಎಂಗೆ ಸಾಹಿತಿಗಳು, ಬರಹಗಾರರ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಜಬ್‌ ವಿವಾದದಿಂದ ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ; ಸಮವಸ್ತ್ರ ಆದೇಶ ಪರಿಷ್ಕರಿಸಿ – ಸಿಎಂಗೆ ಸಾಹಿತಿಗಳು, ಬರಹಗಾರರ ಪತ್ರ

Bengaluru City

ಹಿಜಬ್‌ ವಿವಾದದಿಂದ ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ; ಸಮವಸ್ತ್ರ ಆದೇಶ ಪರಿಷ್ಕರಿಸಿ – ಸಿಎಂಗೆ ಸಾಹಿತಿಗಳು, ಬರಹಗಾರರ ಪತ್ರ

Public TV
Last updated: May 29, 2023 8:57 pm
Public TV
Share
2 Min Read
hijab 1
SHARE

– ಎನ್‌ಇಪಿ ರದ್ದುಗೊಳಿಸಿ; ಮಕ್ಕಳಿಗೆ ಸೈಕಲ್‌ ಭಾಗ್ಯ ಮರು ಜಾರಿ ಮಾಡಿ
– ಸಿಂಡಿಕೇಟ್‌ಗಳಲ್ಲಿ ಬಿಜೆಪಿ ನೇಮಿಸಿರೋ ಕೋಮುವಾದಿ ಮನಸ್ಥಿತಿ ಸದಸ್ಯರನ್ನ ಬದಲಾಯಿಸಿ
– ಶಾಲೆಗಳಲ್ಲಿ ಬಿಸಿಯೂಟ ಮಾದರಿಯಲ್ಲಿ ಬೆಳಗಿನ ಉಪಾಹಾರ ಒದಗಿಸಿ

ಬೆಂಗಳೂರು: ಹಿಜಬ್‌ (Hijab) ವಿವಾದದಿಂದ ಸಾವಿರಾರು ಹೆಣ್ಣುಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಮವಸ್ತ್ರ ಕುರಿತು ಸರ್ಕಾರ ಆದೇಶವನ್ನು ಪರಿಷ್ಕರಿಸಬೇಕು ಎಂದು ಸಾಹಿತಿಗಳು, ಬರಹಗಾರರು ಹಾಗೂ ಜನಪರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಮನವಿ ಮಾಡಿದರು.

ಕನ್ನಡ ನಾಡಿನ ಹೆಸರಾಂತ ಸಾಹಿತಿ, ಬರಹಗಾರರು ಮತ್ತು ನಾನಾ ಜನಪರ ಸಂಘಟನೆಗಳ ಮುಖಂಡರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಚರ್ಚಿಸಿದರು. ಈ ವೇಳೆ ಮುಖ್ಯಮಂತ್ರಿಗಳ ಮುಂದೆ ಮನವಿ ಸಲ್ಲಿಸಲಾಯಿತು. ಇದನ್ನೂ ಓದಿ: ಗ್ಯಾರಂಟಿಗಳ ಬಗ್ಗೆ ಮಾತನಾಡೋರ ಬಾಯಿ ಮುಚ್ಚುವಂತೆ ಮಾಡ್ತೀವಿ: ಹೆಚ್‌ಕೆ ಪಾಟೀಲ್

writers siddu meeting

ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ NEET ವ್ಯವಸ್ಥೆಯಿಂದ ಹೊರ ಬರುವ ಅಗತ್ಯವಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿ ಅನುಷ್ಠಾನ ಸಮರ್ಪಕವಾಗಿ ಆಗಬೇಕು. ಹೆಣ್ಣುಮಕ್ಕಳ ದೌರ್ಜನ್ಯ ಅಧ್ಯಯನ ಸಮಿತಿಯ ವರದಿಯ ಶಿಫಾರಸುಗಳ ಜಾರಿಗೆ ಕ್ರಮ ಕೈಗೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆ ರಕ್ಷಣೆ ಮಾಡಲು ಮಸೂದೆ ಮಂಡಿಸಬೇಕು. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡುವ ಕುರಿತ ಸರ್ಕಾರಿ ಆದೇಶವನ್ನು ಹಿಂಪಡೆಯಬೇಕು. ಹಲವರು ಸಾಹಿತಿ, ಚಿಂತಕರಿಗೆ ನಿರಂತರವಾಗಿ ಬೆದರಿಕೆ ಪತ್ರಗಳು ಬರುತ್ತಿದ್ದು, ಭಯದ ವಾತಾವರಣ ನಿರ್ಮಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪಠ್ಯ ಪರಿಷ್ಕರಣೆ ಮಾಡಬೇಕು. ಬರಗೂರು ರಾಮಚಂದ್ರಪ್ಪ‌ ಸಮಿತಿಯ ಪಠ್ಯಗಳನ್ನೇ ಮುಂದುವರಿಸಬೇಕು. ಹಿಂದಿನ ಬಿಜೆಪಿ ಸರ್ಕಾರ ಪರಿಷ್ಕರಣೆ ಮಾಡಿದ್ದ ಪಠ್ಯ ತೆಗೆಯಬೇಕು. ಬಿಜೆಪಿ ಬದಲಾಯಿಸಿದ್ದ ಪಠ್ಯಗಳನ್ನು ತೆಗೆದು ಪುಸ್ತಕಗಳನ್ನು ಮಕ್ಕಳಿಗೆ ವಿತರಿಸಬೇಕು. ಇಂದಿನ ಸಂದರ್ಭಕ್ಕೆ ತಕ್ಕಂತೆ ಪಠ್ಯಗಳ ಬದಲಾವಣೆಗೆ ಕೂಡಲೇ ತಜ್ಞರ ಸಮಿತಿ‌ ರಚಿಸಬೇಕು. ರಂಗಾಯಣಗಳಂಥ ಸಾಂಸ್ಕೃತಿಕ, ಸಾಹಿತ್ಯಿಕ ಸಂಸ್ಥೆಗಳಿಗೆ ಜಾತ್ಯತೀತ ವ್ಯಕ್ತಿಗಳ ನೇಮಕ ಮಾಡಬೇಕು ಎಂದು ಒತ್ತಾಯಿಸಲಾಗಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಯಾರ ಪ್ಲೆಕ್ಸ್ ಕೂಡ ಇರಬಾರದು; ನನ್ನ ಫೋಟೋ ಇರುವ ಫ್ಲೆಕ್ಸನ್ನೂ ಕಿತ್ತು ಹಾಕಿ: ಪ್ರದೀಪ್ ಈಶ್ವರ್

siddu meeting writers

ರಾಷ್ಟ್ರೀಯ ಶಿಕ್ಷಣ ನೀತಿ‌ ರದ್ದುಗೊಳಿಸಬೇಕು. ಶಾಲಾ ಮಕ್ಕಳಿಗೆ ಸಮವಸ್ತ್ರ, ಪುಸ್ತಕ, ಶೂ, ಸಾಕ್ಸ್ ಒದಗಿಸಬೇಕು. ಸೈಕಲ್ ಭಾಗ್ಯ ಮರು ಜಾರಿಗೊಳಿಸಿ, ಶಾಲಾ ಮಕ್ಕಳಿಗೆ ಸೈಕಲ್ ವಿತರಿಸಬೇಕು. ಸಾಂಸ್ಕೃತಿಕ ಪ್ರತಿಷ್ಠಾನಗಳ ಅಧ್ಯಕ್ಷರು ಹಾಗೂ ಸದಸ್ಯರನ್ನು ಕೂಡಲೇ ಬದಲಾಯಿಬೇಕು. ಬಿಜೆಪಿ ಸರ್ಕಾರ ಘೋಷಿಸಿರುವ ಪ್ರಶಸ್ತಿ, ಪುರಸ್ಕಾರಗಳನ್ನು ಕೂಡಲೇ ತಡೆಹಿಡಿಯಬೇಕು. ಸಾಂಸ್ಕೃತಿಕ ಕ್ಷೇತ್ರದ ಸಂಘ ಸಂಸ್ಥೆಗಳಿಗೆ ಹಿಂದಿನ ಸರ್ಕಾರ ನೀಡಿರುವ ಅನುದಾನಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಲಾಗಿದೆ.

ವಿಶ್ವವಿದ್ಯಾಲಯಗಳಲ್ಲಿನ ಸಿಂಡಿಕೇಟ್‌ಗಳಿಗೆ ಕೋಮುವಾದಿ ಮನಸ್ಥಿತಿಯ ವ್ಯಕ್ತಿಗಳನ್ನು ಸದಸ್ಯರನ್ನಾಗಿ ನೇಮಕ ಮಾಡಿದೆ. ಅವರನ್ನು ಕೂಡಲೇ ಬದಲಾಯಿಸಿ, ಜಾತ್ಯತೀತ ವ್ಯಕ್ತಿಗಳನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು. ಸಾಂಸ್ಕೃತಿಕ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳಿಗೆ ಸಲಹೆ ನೀಡುವ ಉದ್ದೇಶದಿಂದ ಸಾಂಸ್ಕೃತಿಕ ಕ್ಷೇತ್ರದ ಆಯ್ದ ಗಣ್ಯ ಸದಸ್ಯರನ್ನು ಒಳಗೊಂಡಂತೆ, ಮುಖ್ಯಮಂತ್ರಿಗಳ ಸಾಂಸ್ಕೃತಿಕ ಸಲಹೆಗಾರರನ್ನು ಸರ್ಕಾರ ನೇಮಿಸಬೇಕು. ಹಿಂದಿನ ಸರ್ಕಾರ ಕನ್ನಡಿಗರ ಮೇಲೆ ಹೇರಿರುವ ಎನ್‌ಇಪಿ ವ್ಯವಸ್ಥೆಯನ್ನು ಕೂಡಲೇ ತಡೆಹಿಡಿದು, ಹೊಸ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಿ ಕೊಡಬೇಕು. ಶಾಲೆಗಳಲ್ಲಿ ಬಿಸಿಯೂಟದ ಮಾದರಿಯಲ್ಲಿ ಬೆಳಗಿನ ಉಪಾಹಾರ ಒದಗಿಸಬೇಕು ಎಂದು ತಿಳಿಸಲಾಗಿದೆ. ಪ್ರಮುಖ ಬದಲಾವಣೆಗೆ ಒತ್ತಾಯಿಸಿ ಸಮಾನ ಮನಸ್ಕರ ಒಕ್ಕೂಟ ಹೆಸರಲ್ಲಿ‌ ಸಿಎಂಗೆ ಮನವಿ ಪತ್ರ ಸಲ್ಲಿಸಲಾಗಿದೆ.

TAGGED:Hijabsiddaramaiahwritersಬರಹಗಾರರುಬೆಂಗಳೂರುಸಿದ್ದರಾಮಯ್ಯಹಿಜಬ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
7 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
7 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
7 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
8 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
9 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?