ಹಿಂದೂ ಸಮಾಧಿಗಳ ಮೇಲೆ ಎಸ್‌ಡಿಪಿಐ ಎಂದು ಬರೆದು ವಿಕೃತಿ

Public TV
1 Min Read
kolar

ಕೋಲಾರ: ಹಿಂದೂ ರುದ್ರ ಭೂಮಿಯಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮುಳಬಾಗಿಲು ನಗರದ ಗಣಿಗುಂಟೆ ಪಾಳ್ಯದಲ್ಲಿರುವ ಬಲಿಜ ಸ್ಮಶಾನದಲ್ಲಿ ಕೆಲ ಕಿಡಿಗೇಡಿಗಳು ಸಮಾಧಿಗಳ ಮೇಲೆ ಬಣ್ಣ ಬಳಿದು ಕೃತ್ಯವೆಸಗಿದ್ದಾರೆ.

sdpi

ಸ್ಮಶಾನದಲ್ಲಿ 200 ಕ್ಕೂ ಹೆಚ್ಚು ಸಮಾಧಿಗಳಿದ್ದು, ಈ ಪೈಕಿ 30 ಕ್ಕೂ ಹೆಚ್ಚು ಸಮಾಧಿಗಳ ನಾಮಫಲಕ ಹಾಗೂ ಭಾವಚಿತ್ರಗಳ ಮೇಲೆ ಕಿಡಿಗೇಡಿಗಳು ಎಸ್‌ಡಿಪಿಐ ಎಂದು ಬರೆದು ವಿಕೃತಿ ಮೆರೆದಿದ್ದಾರೆ. ಸಮಾಧಿಗಳನ್ನು ವಿರೂಪಗೊಳಿಸಿ, ಪೂರ್ವಜರಿಗೆ ಅಗೌರವ ತೋರಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ. ಇದನ್ನೂ ಓದಿ: ನೇಗಿಲಿಗೆ ಕುದುರೆ ಕಟ್ಟಿ ಉಳುಮೆ ಮಾಡಿದ ರೈತ

kolar 1

ಘಟನೆ ಬಗ್ಗೆ ಶ್ರೀ ರಾಮ ಯುವಕ ರೈತ ಸಂಘ ಪೊಲೀಸ್ ಠಾಣೆಗೆ ದೂರು ನೀಡಿದ್ದು ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಕಲ್ಲಡ್ಕ ಪ್ರಭಾಕರ್ ಭಟ್ ಆಸ್ಪತ್ರೆಗೆ ದಾಖಲು

Share This Article
Leave a Comment

Leave a Reply

Your email address will not be published. Required fields are marked *