ಕೊಲೆ ಸ್ಕೆಚ್‌ಗೆ ರಾಂಗ್ ಪರ್ಸನ್ ಚೂಸ್ ಮಾಡಿದ್ದಾರೆ: ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್

Public TV
2 Min Read
anushka shetty brother gunaranjan shetty 1

ಮಂಗಳೂರು: ಕೆಲ ವಾರಗಳ ಹಿಂದೆ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸಹೋದರ ಉದ್ಯಮಿ ಗುಣರಂಜನ್ ಶೆಟ್ಟಿ ಹತ್ಯೆಗೆ ಸ್ಕೆಚ್ ಹಾಕಿದ್ದ ವಿಚಾರ ಭಾರೀ ಸುದ್ದಿಯಾಗಿತ್ತು. ಆದರೆ ಈ ಸ್ಕೆಚ್ ಯಾರು ಹಾಕಿದ್ದಾರೆ ಎಂಬುದು ಸ್ವತಃ ಗುಣರಂಜನ್ ಶೆಟ್ಟಿಗೂ ಗೊತ್ತಿರಲಿಲ್ಲ. ಹೀಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವರಿಗೆ, ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗುಣರಂಜನ್ ಶೆಟ್ಟಿ ಮನವಿ ಮಾಡಿಕೊಂಡಿದ್ದರು. ಈ ಹಿನ್ನಲೆಯಲ್ಲಿ ರಾಜ್ಯ ಗೃಹ ಇಲಾಖೆ ಈ ಪ್ರಕರಣದ ತನಿಖೆಯನ್ನು ಮಂಗಳೂರು ಪೊಲೀಸರಿಗೆ ವಹಿಸಿದ್ದು, ಮಂಗಳೂರು ಪೊಲೀಸರು ಈ ದೂರಿನ ಬಗ್ಗೆ ಹೆಚ್ಚಿನ ವಿವರಣೆ ಪಡೆಯಲು ಗುಣರಂಜನ್ ಶೆಟ್ಟಿಗೆ ನೋಟಿಸ್ ನೀಡಿ ಕರೆಸಿಕೊಂಡಿದ್ದಾರೆ.

anushka shetty brother gunaranjan shetty 2

ಪ್ರಾರಂಭದಲ್ಲಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದು, ಬಳಿಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಗುಣರಂಜನ್ ಶೆಟ್ಟಿಯಿಂದ ಹೆಚ್ಚಿನ ಮಾಹಿತಿ ಪಡೆದಿದ್ದಾರೆ. ವಿಚಾರಣೆ ಬಳಿಕ ಗುಣರಂಜನ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ಈ ಸಂಚಿನ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು. ಯಾರಾದರೂ ಹತ್ಯೆಗೆ ಸ್ಕೆಚ್ ಹಾಕಿದ್ದರೆ ಅವರು ರಾಂಗ್ ಪರ್ಸನ್ ಅನ್ನು ಚೂಸ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊರೊನಾ ಸ್ಫೋಟ – ಬೆಂಗ್ಳೂರು, ಮೈಸೂರು, ದ.ಕ ಜಿಲ್ಲೆಗಳಲ್ಲಿ ಭಾರೀ ಏರಿಕೆ

ಪ್ರಾರಂಭದಲ್ಲಿ ಮುತ್ತಪ್ಪ ರೈ ಸಂಬಂಧಿ ಮನ್ವಿತ್ ರೈ ಗುಣರಂಜನ್ ಶೆಟ್ಟಿ ಕೊಲೆಗೆ ಸ್ಕೆಚ್ ನಡೆಸಿದ್ದಾರೆ ಎಂಬ ವದಂತಿ ಹಬ್ಬಿತ್ತು. ಹೀಗಿದ್ದರೂ ಮನ್ವಿತ್ ರೈ ತಾನು ಉದ್ಯಮದ ವಿಚಾರವಾಗಿ ವಿದೇಶದಲ್ಲಿದ್ದು, ಈ ಹತ್ಯೆ ಸಂಚಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೆ ನೀಡಿದ್ದರು. ಇಂದು ಪೊಲೀಸ್ ವಿಚಾರಣೆ ಸಂದರ್ಭದಲ್ಲಿಯೂ ಗುಣರಂಜನ್ ಶೆಟ್ಟಿ ಇಂತಹ ವಿಚಾರಕ್ಕೆ, ಇಂತಹ ನಿರ್ದಿಷ್ಟ ವ್ಯಕ್ತಿಗಳಿಂದ ಸಂಚು ನಡೆದಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲವಾದರೂ ಪೊಲೀಸರು ಸಂಕ್ಷಿಪ್ತ ಮಾಹಿತಿ ಕಲೆ ಹಾಕುವ ಕಾರ್ಯ ಮಾಡಿದ್ದಾರೆ.

mangaluru police

ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪಿಟಿಷನ್ ತೆಗೆದುಕೊಂಡು ಯಾರನ್ನು ವಿಚಾರಣೆ ಮಾಡಬೇಕು ಅವರನ್ನು ವಿಚಾರಣೆ ನಡೆಸಿ, ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಅಗಲಿದ ಶ್ವಾನಕ್ಕೆ ಎಸ್‌ಪಿ ಕಚೇರಿ ಆವರಣದಲ್ಲೇ ಆಂತ್ಯಕ್ರಿಯೆ

Live Tv

Share This Article
Leave a Comment

Leave a Reply

Your email address will not be published. Required fields are marked *