Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಟದ ಮಧ್ಯೆಯೇ ಮೈದಾನ ತೊರೆದ ಬುಮ್ರಾ – ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಆಟದ ಮಧ್ಯೆಯೇ ಮೈದಾನ ತೊರೆದ ಬುಮ್ರಾ – ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ!

Cricket

ಆಟದ ಮಧ್ಯೆಯೇ ಮೈದಾನ ತೊರೆದ ಬುಮ್ರಾ – ಟೀಂ ಇಂಡಿಯಾಕ್ಕೆ ದೊಡ್ಡ ಆಘಾತ!

Public TV
Last updated: January 4, 2025 7:13 pm
Public TV
Share
3 Min Read
Jasprit Bumrah
SHARE

– ಬುಮ್ರಾ ಫಿಟ್‌ ಇಲ್ಲದಿದ್ರೆ 200 ರನ್‌ ಲೀಡ್‌ ಇದ್ರೂ ಸಾಲಲ್ಲ: ಗವಾಸ್ಕರ್‌
– ಬುಮ್ರಾ ಬೌಲಿಂಗ್‌ ಮಾಡುವ ಬಗ್ಗೆ ಭಾನುವಾರ ನಿರ್ಧಾರ

ಸಿಡ್ನಿ: ಬಾರ್ಡರ್ – ಗವಾಸ್ಕರ್ ಸರಣಿಯ ಕೊನೆಯ ಟೆಸ್ಟ್‌ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ. ಈ ನಡುವೆ ಪಂದ್ಯದ ನಾಯಕ ಜಸ್ಪ್ರೀತ್‌ ಬುಮ್ರಾ (Jasprit Bumra) ಮೈದಾನ ತೊರೆದು ಶಾಕ್‌ ಕೊಟ್ಟಿದ್ದಾರೆ.

Jasprit Bumrah has left the SCG: https://t.co/0nmjl6Qp2a pic.twitter.com/oQaygWRMyc

— cricket.com.au (@cricketcomau) January 4, 2025

ಸಿಡ್ನಿಯಲ್ಲಿ (Sydney) ನಡೆಯುತ್ತಿರುವ ಕೊನೇ ಪಂದ್ಯದಲ್ಲಿ ಭೋಜನ ವಿರಾಮದ ಬಳಿಕ ಬುಮ್ರಾ ಕೇವಲ ಒಂದೇ ಓವರ್‌ ಬೌಲಿಂಗ್‌ ಮಾಡಿದರು. ಬಳಿಕ ಸ್ಥಳೀಯ ಕಾಲಮಾನ 2 ಗಂಟೆ ಸುಮಾರಿಗೆ ಮೈದಾನ ತೊರೆದರು. ಬುಮ್ರಾ ಬದಲಿಗೆ ಪ್ರಸಿದ್ಧ್‌ ಕೃಷ್ಣ ಅವರನ್ನು ಕಣಕ್ಕಿಳಿಸಲಾಯಿತು. ಇದನ್ನೂ ಓದಿ: KSRTC Ticket Price Hike – ಬೆಂಗಳೂರಿನಿಂದ ನಿಮ್ಮ ಜಿಲ್ಲೆಗೆ ಎಷ್ಟು ದರ ಏರಿಕೆ? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

Ind vs Aus 2

ಮೈದಾನ ತೊರೆದ ಬುಮ್ರಾ ತಂಡದ ವೈದ್ಯ, ಬಿಸಿಸಿಐ ಅಧಿಕಾರಿ ಅಂಶುಮಾನ್ ಉಪಾಧ್ಯಾಯ ಮತ್ತು ಭದ್ರತಾ ಸಿಬ್ಬಂದಿ ಜೊತೆ, ಡ್ರೆಸ್ಸಿಂಗ್ ರೂಂನಿಂದ ಆಸ್ಪತ್ರೆಯ ಕಡೆಗೆ ಹೊರಟರು. ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಮಾಡಿಸಿದ ಬಳಿಕ ಪುನಃ ಡ್ರೆಸ್ಸಿಂಗ್‌ ರೂಮ್‌ಗೆ ಮರಳಿದ್ದಾರೆ. ಒಂದು ವೇಳೆ, ಗಂಭೀರ ಸಮಸ್ಯೆ ಇದ್ದರೆ, ಆಸ್ಪತ್ರೆಗೆ ದಾಖಲಿಸದೇ ಬೇರೆ ವಿಧಿಯಿಲ್ಲ ಎಂದು ವರದಿಯಾಗಿದೆ.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಸಿದ್ಧ್ ಕೃಷ್ಣ, ಬುಮ್ರಾ ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎಂದು ಬಹಿರಂಗಪಡಿಸಿದರು. ಸದ್ಯ ಅವರು 3ನೇ ದಿನದಾಟಕ್ಕೆ ಕಣಕ್ಕಿಳಿಯುತ್ತಾರಾ ಅನ್ನೋ ಅನುಮಾನವೂ ಶುರುವಾಗಿದೆ. ಈ ನಡುವೆ ಬುಮ್ರಾ ಅವರು ಬ್ಯಾಟ್‌ ಮಾಡುವ ಪರಿಸ್ಥಿತಿಯಲ್ಲಿದ್ದಾರೆ. ಆದ್ರೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ಮಾಡುವ ನಿರ್ಧಾರವನ್ನು ಭಾನುವಾರ (ಜ.5) ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

Ind vs Aus

ಸದ್ಯ ಆಸೀಸ್‌ ವಿರುದ್ಧ ನಡೆಯುತ್ತಿರುವ ಈ ಸರಣಿಯ ಕೊನೇ ಪಂದ್ಯದಲ್ಲಿ ಅತಿದೊಡ್ಡ ಜವಾಬ್ದಾರಿ ಬುಮ್ರಾ ಅವರಮೇಲಿದೆ. ಇದುವರೆಗೆ 5 ಟೆಸ್ಟ್‌ ಪಂದ್ಯದ 9 ಇನ್ನಿಂಗ್ಸ್‌ನಲ್ಲಿ 32 ವಿಕೆಟ್‌ ಪಡೆದುಕೊಂಡಿದ್ದಾರೆ. ಕೊನೇ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲೂ ಆಸೀಸ್‌ ಬ್ಯಾಟರ್‌ಗಳನ್ನ ತೀವ್ರವಾಗಿ ಕಾಡಿದರು. ಇದೀಗ ಪಂದ್ಯ ಗೆದ್ದು ಸರಣಿಯನ್ನು ಡ್ರಾಗೊಳಿಸುವ ನಿಟ್ಟಿನಲ್ಲಿ ಬುಮ್ರಾ ಅವರ ಪಾತ್ರ ಪ್ರಮುಖವಾಗಿದೆ. ಹಾಗಾಗಿ ಭಾನುವಾರ ಬುಮ್ರಾ ಅವರ ಬೌಲಿಂಗ್‌ ಬಗ್ಗೆ ನಿರ್ಧಾರವಾಗಲಿದೆ. ಇದನ್ನೂ ಓದಿ: 32 ವರ್ಷಗಳಿಂದ ಸ್ನಾನವನ್ನೇ ಮಾಡದ ಛೋಟಾ ಬಾಬಾ – ‘ಕುಂಭ ಮೇಳ’ದ ಆಕರ್ಷಣೆ ಕೇಂದ್ರಬಿಂದು ಇವರೇ!

ಸದ್ಯ ಬುಮ್ರಾ ಅವರ ಆರೋಗ್ಯದ ಬಗ್ಗೆ ಮುಖ್ಯ ಕೋಚ್ ಗೌತಂ ಗಂಭೀರ್ ಅಥವಾ ಬಿಸಿಸಿಐನಿಂದ ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಒಂದು ವೇಳೆ, 2ನೇ ಇನ್ನಿಂಗ್ಸ್ ನಲ್ಲಿ ಅವರು ಆಡಲು ಸಾಧ್ಯವಾಗದೇ ಇದ್ದರೆ, ಟೀಂ ಇಂಡಿಯಾಗೆ ಬಹುದೊಡ್ಡ ಹೊಡೆತ ಬೀಳಲಿದೆ. ಬುಮ್ರಾಗೆ ಅತಿಯಾದ ವರ್ಕ್ ಲೋಡ್ ಇದೆ ಎಂದು ನಾಯಕ ರೋಹಿತ್ ಶರ್ಮಾ ಕೂಡಾ ಹೇಳಿದ್ದರು.

Jasprit Bumrah

ಬುಮ್ರಾ ಅವರ ಅನುಪಸ್ಥಿತಿಯಲ್ಲಿ ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್ ನಲ್ಲಿ ಬುಮ್ರಾ 10 ಓವರ್ ಎಸೆದು, 2 ವಿಕೆಟ್ ಪಡೆದುಕೊಂಡಿದ್ದಾರೆ. ವೇಗಿಗಳಾದ ಸಿರಾಜ್ 16, ಪ್ರಸಿದ್ದ್ ಕೃಷ್ಣ 15 ಓವರ್ ಗಳನ್ನು ಎಸೆದಿದ್ದಾರೆ. ಇವರಿಬ್ಬರೂ, ತಲಾ ಮೂರು ವಿಕೆಟ್ ಅನ್ನು ಪಡೆದುಕೊಂಡರೆ, ನಿತೀಶ್ ಕುಮಾರ್ ರೆಡ್ಡಿ ಎರಡು ವಿಕೆಟ್ ಪಡೆದರು. ಇದನ್ನೂ ಓದಿ: BMTC Ticket Price Hike| ಮೆಜೆಸ್ಟಿಕ್‌ನಿಂದ ನಿಮ್ಮ ಏರಿಯಾಗೆ ಎಷ್ಟು ರೂ.? ಇಲ್ಲಿದೆ ಕಂಪ್ಲೀಟ್‌ ಲಿಸ್ಟ್‌

Jasprit Bumrah 1

ಬುಮ್ರಾ ಫಿಟ್‌ ಇಲ್ಲ ಅಂದ್ರೆ 200 ರನ್‌ ಕೂಡ ಸಾಲಲ್ಲ:
ಬುಮ್ರಾ ಅವರು ಮೈದಾನ ತೊರೆದ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಕ್ರಿಕೆಟಿಗ ಸುನೀಲ್‌ ಗವಾಸ್ಕರ್‌, ಬುಮ್ರಾ ಬೌಲಿಂಗ್‌ ಮಾಡಲು ಫಿಟ್‌ ಇದ್ದರೆ, 150 ರನ್‌ ಟಾರ್ಗೆಟ್‌ ಇದ್ದರೂ ಭಾರತಕ್ಕೆ ಗೆಲ್ಲುವ ಅವಕಾಶವಿದೆ. ಒಂದು ವೇಳೆ ಫಿಟ್‌ ಇಲ್ಲವಾದ್ರೆ ಭಾರತ 200 ರನ್‌ ಲೀಡ್‌ ಕಾಯ್ಡುಕೊಂಡರೂ ಸಾಕಾಗುವುದಿಲ್ಲ. ಸದ್ಯ ಭಾರತ 145 ರನ್‌ಗಳ ಮುನ್ನಡೆಯಲ್ಲಿದೆ. ಇನ್ನೂ 40 ರನ್‌ ಗಳಿಸಿ 185 ರನ್‌ ಟಾರ್ಗೆಟ್‌ ಕೊಟ್ಟರೂ ಭಾರತಕ್ಕೆ ಗೆಲ್ಲುವ ಅವಕಾಶವಿದೆ. ಆದ್ರೆ ಅದು ಬುಮ್ರಾ ಫಿಟ್‌ನೆಸ್‌ ಮೇಲೆ ನಿರ್ಧಾರವಾಗಲಿದೆ.

TAGGED:australiaBowlingjasprit bumrahsydneyTeam indiaWTC Finalಆಸ್ಟ್ರೇಲಿಯಾಜಸ್‍ಪ್ರೀತ್ ಬುಮ್ರಾಬಾರ್ಡರ್ - ಗವಾಸ್ಕರ್ ಸರಣಿಭಾರತ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

MB Patil 3
Bengaluru City

ಅಮೆಜಾನ್ ಕಂಪನಿಯ ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಎಂ.ಬಿ ಪಾಟೀಲ್

Public TV
By Public TV
12 minutes ago
bjp flag
Bengaluru City

ಒಳ ಮೀಸಲಾತಿಯಲ್ಲಿರೋ ಗೊಂದಲ ನಿವಾರಣೆ ಮಾಡಿ – ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು

Public TV
By Public TV
12 minutes ago
NAMMA METRO 5
Bengaluru City

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ – ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL

Public TV
By Public TV
27 minutes ago
Donald Trump 1
Latest

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ – 175 ಶತಕೋಟಿ ಡಾಲರ್‌ ನಷ್ಟದ ಆತಂಕ

Public TV
By Public TV
27 minutes ago
BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
54 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?