ಯಾದಗಿರಿ: ಶಾಲೆ ಬಿಟ್ಟು ಕೂಲಿ ಕೆಲಸಕ್ಕೆ ತೆರಳುತ್ತಿದ್ದ ವಿವಿಧ ಶಾಲೆಗಳ 50 ಮಕ್ಕಳನ್ನು ಇಂದು ಬೆಳಂಬೆಳಗ್ಗೆ ಮಕ್ಕಳ ಹಕ್ಕು ರಕ್ಷಣಾ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ವ್ಯಾಪ್ತಿಯಲ್ಲಿ ಈ ರಕ್ಷಣಾ ಕಾರ್ಯ ನಡೆದಿದೆ. ಕೆಂಭಾವಿ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಶಾಲೆಯನ್ನು ಬಿಡಿಸಿ ಮಕ್ಕಳನ್ನು ಹತ್ತಿ ಬಿಡಿಸುವ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಶಾಲೆ ಶಿಕ್ಷಕರು ಶಾಲಾ ಮಕ್ಕಳನ್ನು ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುವುದು ಕಾನೂನು ಬಾಹಿರ ಎಂದು ಮಕ್ಕಳ ಪೋಷಕರಿಗೆ ಎಷ್ಟು ಬಾರಿ ತಿಳಿಸಿ ಹೇಳಿದರೂ ಪ್ರಯೋಜನವಾಗಿರಲಿಲ್ಲ.
ಇಂದು ಮಕ್ಕಳ ಹಕ್ಕು ರಕ್ಷಣೆ ಅಧಿಕಾರಿಗಳು ಇಂದು ವಿವಿಧ ಗ್ರಾಮಗಳ ವ್ಯಾಪ್ತಿಯ ಜಮೀನುಗಳ ಮೇಲೆ ದಾಳಿ ಮಾಡಿ, ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಕೆಲಸಕ್ಕೆ ಹೋಗುತ್ತಿದ್ದ ಮಕ್ಕಳನ್ನು ರಕ್ಷಣೆ ಮಾಡಿ ಸುಮಾರು 15 ಆಟೋಗಳನ್ನು ಜಪ್ತಿ ಮಾಡಿದ್ದಾರೆ. ದಾಳಿ ವೇಳೆ ಕೆಲ ಮಕ್ಕಳ ಪೋಷಕರ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.