ಯಾದಗಿರಿ: ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದ ಬಾಲ ಕಾರ್ಮಿಕರನ್ನ (Child Labour) ಪೊಲೀಸರು ರಕ್ಷಣೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊಸ್ಕೇರಾ ಗ್ರಾಮದಲ್ಲಿ ನಡೆದಿದೆ.
ಗೋಗಿ ಪೊಲೀಸ್ ಠಾಣೆ (Gogi Police Station) ಪಿಎಸ್ಐ ದೇವೆಂದ್ರರೆಡ್ಡಿ ನೇತೃತ್ವದಲ್ಲಿ ಮಕ್ಕಳ ರಕ್ಷಣೆ ಮಾಡಲಾಗಿದೆ. ಓದುವ ಮಕ್ಕಳನ್ನ ಶಾಲೆ ಬಿಡಿಸಿ ಪೋಷಕರು ಕೆಲಸಕ್ಕೆ ಕರೆದುಕೊಂಡು ಹೋಗುತ್ತಿದ್ದರು. 15-20 ಮಕ್ಕಳನ್ನ ಆಟೋಗಳಲ್ಲಿ ಕೂಲಿ ಕೆಲಸಕ್ಕೆ ಕರೆದುಕೊಂಡು ಹೋಗುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ದೇವೇಂದ್ರರೆಡ್ಡಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಈ ವೇಳೆ ಮಕ್ಕಳನ್ನ ರಕ್ಷಣೆ ಮಾಡಿರುವ ಪೊಲೀಸರು, ಪೋಷಕರಿಗೆ ತಿಳುವಳಿಕೆ ಹೇಳಿ, ಬಾಲ ಕಾರ್ಮಿಕರನ್ನು ವಾಹನಗಳಲ್ಲಿ ಕೆಲಸಕ್ಕೆ ಕರೆದುಕೊಂಡು ಹೋಗದಂತೆ ಚಾಲಕರಿಗೆ ವಾರ್ನ್ ಮಾಡಿ ಕಳಿಸಿದ್ದಾರೆ.
Web Stories