ರಸ್ತೆ ಬದಿಯಲ್ಲಿ ಹಣ್ಣು ಮಾರುತ್ತಿದ್ದ ವೃದ್ಧೆಯ ಮೇಲೆ ಹರಿದ ಕಾರು

Public TV
1 Min Read
YGR 1

ಯಾದಗಿರಿ: ಕಾರ್ ಚಾಲಕನ ನಿರ್ಲಕ್ಷ್ಯದಿಂದ ಹಣ್ಣು ಮಾರುವ ಅಮಾಯಕ ವೃದ್ಧೆ ಮೇಲೆ ಕಾರ್ ಹರಿದ ಘಟನೆ ಯಾದಗಿರಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಜನವರಿ 25ರಂದು ಸಂಜೆ ನಗರದ ಮಹಾತ್ಮ ಗಾಂಧಿ ಶಾಲೆಯ ಆವರಣದ ಮುಂಭಾಗದಲ್ಲಿ ನಡೆದಿದೆ. ಘಟನೆಯಿಂದ ಅಂಬೇಡ್ಕರ್ ನಗರದ ನಿವಾಸಿ ವೃದ್ಧೆ ಕಲಾವತಿಗೆ ಗಂಭೀರ ಗಾಯವಾಗಿದ್ದು, ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

YGR

ನಗರದ ವಿವೇಕಾನಂದ ಕಾಲೊನಿ ನಿವಾಸಿ ಗೋಪಿನಾಥ್ ಎಂಬವರಿಗೆ ಸೇರಿದ ಕಾರ್ ಎನ್ನಲಾಗಿದೆ. ಕಾರ್ ಹರಿದ ದೃಶ್ಯ ಕಂಡು ಶಾಲಾ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯಾವಳಿ ಶಾಲೆಯಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯದ ಆಧಾರದ ಮೇಲೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

Share This Article
Leave a Comment

Leave a Reply

Your email address will not be published. Required fields are marked *