ಯಾದಗಿರಿ: ಫೈಲ್ಸ್, ಕಂಪ್ಯೂಟರ್ ಕೀ ಬೋರ್ಡ್ ಹಿಡಿದು ಕಾರ್ಯನಿರ್ವಹಿಸುತ್ತಿದ್ದ ಜಿಲ್ಲೆಯ ಕಂದಾಯ ಇಲಾಖೆಯ ಸಿಬ್ಬಂದಿ ಇಂದು ಬ್ಯಾಟ್ ಹಿಡಿದು ಮೈದಾನಕ್ಕೆ ಎಂಟ್ರಿಕೊಟ್ಟರು.
ಜಿಲ್ಲೆಯ ವಿವಿಧ ತಾಲೂಕಿನ ಕಂದಾಯ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಾಗಿ ಎರಡು ದಿನಗಳ ವಾರ್ಷಿಕ ಕ್ರೀಡಾಕೂಟವನ್ನು ಯಾದಗಿರಿ ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಇಂದು ನಡೆದ ಕ್ರೀಡಾಕೂಟ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಭಾಗವಹಿಸಿ ಕ್ರಿಕೆಟ್ ಆಡುವ ಮೂಲಕ ಚಾಲನೆ ನೀಡಿದರು.
- Advertisement 2
- Advertisement 3
ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಕ್ರಿಕೆಟ್, ಕಬ್ಬಡಿ, ವಾಲಿಬಾಲ್ ಪಂದ್ಯ ಹಾಗೂ ಚೇಸ್ ಏರ್ಪಡಿಸಲಾಗಿದೆ. ಎಲ್ಲಾ ಪಂದ್ಯಾವಳಿಗಳಿಗೆ ಎಐಡಿಸಿ ಪ್ರಕಾಶ್ ರಜಪೂತ್ ಮತ್ತು ಎಸಿ ಶಂಕರಗೌಡ ಮೈಕ್ ಹಿಡಿದು ಕಾಮಂಟ್ರಿ ಹೇಳಲಿದ್ದಾರೆ.