ಶಾಲೆಯಲ್ಲಿ ಮಕ್ಕಳ ಮುಂದೆ ಶಿಕ್ಷಕಿ ಮೇಲೆ ಶಿಕ್ಷಕನಿಂದ ಮಾರಣಾಂತಿಕ ಹಲ್ಲೆ

Public TV
1 Min Read
Yadagiri Teacher

ಯಾದಗಿರಿ: ಶಿಕ್ಷಕನೊಬ್ಬ ಸಹ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಸರ್ಕಾರಿ ಹಿರಿಯ ಶಾಲೆಯಲ್ಲಿ ನಡೆದಿದೆ.

ಶಿಕ್ಷಕ ಸೋಮಶೇಖರ್ ರಾಠೋಡ್ ಎಂಬಾತ ಶಿಕ್ಷಕಿ ಪುಷ್ಪಾವತಿ (36) ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಹಲ್ಲೆಗೊಳಗಾದ ಶಿಕ್ಷಕಿ ಪುಷ್ಪಾವತಿ ಪ್ರಜ್ಞೆ ತಪ್ಪಿದ್ದು, ಯಾದಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ತರಗತಿ ಆರಂಭವಾಗಿ, ವಿದ್ಯಾರ್ಥಿಗಳಿಗೆ ಹಾಲು ವಿತರಣೆ ಮಾಡಿ ತರಗತಿಗಳಿಗೆ ಕಳುಹಿಸಲಾಗುತಿತ್ತು. ಈ ವೇಳೆ ಶಿಕ್ಷಕ ಪುಷ್ಪ ಅವರ ಮೇಲೆ ಹಲ್ಲೆ ನಡೆಸಿದ್ದಾನೆ.

ಶಾಲೆಯಲ್ಲೇ ಶಿಕ್ಷಕನ ವರ್ತನೆ ಕಂಡು ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರುಗಳು ಬೆಚ್ಚಿ ಬಿದ್ದಿದ್ದಾರೆ. ಸಹ ಶಿಕ್ಷಕರು ಎಷ್ಟು ಹೇಳಿದ್ರು ಅವರ ಮಾತು ಕೇಳದ ರಾಥೋಡ್ ಶಿಕ್ಷಕಿಯನ್ನು ನಿಂದಿಸಿ ಹಲ್ಲೆ ನಡೆಸಿದ್ದಾನೆ. ಶಿಕ್ಷಕ ಹಲ್ಲೆ ನಡೆಸುತ್ತಿರುವ ದೃಶ್ಯಗಳನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದೆ. ಶಿಕ್ಷಕ ರಾಥೋಡ ಹಲವು ಬಾರಿ ಈ ರೀತಿಯ ವರ್ತನೆ ತೋರಿದ್ದು, ರಾಥೋಡ್ ವಿರುದ್ಧ ಯಾದಗಿರಿ ನಗರ ಮಹಿಳಾ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Share This Article
Leave a Comment

Leave a Reply

Your email address will not be published. Required fields are marked *