ಮೈಸೂರು: ಯದುವಂಶಕ್ಕೆ ಉತ್ತರಾಧಿಕಾರಿ ಬಂದ ಖುಷಿಯಲ್ಲಿರುವ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಅರಮನೆಯ ಕೋಟೆಗೆ ಹೊಂದಿಕೊಂಡಿರುವ ಕೋಟೆ ಮಾರಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕೋಟೆ ಮಾರಮ್ಮನಿಗೆ ಹಾಲೆರೆಯುವ ಮೂಲಕ ಯದುವೀರ್ ಅವರು ವಿಶೇಷ ಪೂಜೆ ಸಲ್ಲಿಸಿದರು. ದೇವರ ಆಶೀರ್ವಾದದಿಂದ ಯದುವಂಶಕ್ಕೆ ಉತ್ತರಾಧಿಕಾರಿ ಸಿಕ್ಕಿದ್ದಾನೆ. ಈ ಸಂಭ್ರಮದ ಜೊತೆಗೆ ರಾಜ್ಯದ ಜನತೆಗೆ ದೇವಿ ಒಳ್ಳೆಯದು ಮಾಡಲಿ ಎಂದು ಪ್ರಾರ್ಥಿಸಲು ಕೋಟೆ ಮಾರಮ್ಮನ ದೇವಾಲಯಕ್ಕೆ ಭೇಟಿ ನೀಡಿದ್ದೇನೆ ಎಂದು ಯುದುವೀರ್ ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಯದುವೀರ್ ಎಲ್ಲ ದೇವಾಲಯಗಳಿಗೂ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಯದುವಂಶದ ಸಂಪ್ರದಾಯದಂತೆ ಅರಮನೆಯಲ್ಲೇ ಯುವರಾಜನ ನಾಮಕರಣ- ಯದುವೀರ್ ಒಡೆಯರ್