ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ನೂತನ ಸಂಸದ ಯದುವೀರ್ ಒಡೆಯರ್ (Yaduveer Krishnadatta Chamaraja Wadiyar) ಅವರು ಇಂದು ಕೊಡಗಿನ (Kodagu) ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ (Tala Kaveri) ಹಾಗೂ ಭಾಗಮಂಡಲದ ಶ್ರೀಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಸಂಸದರಾಗಿ ಗೆಲುವು ಸಾಧಿಸಿದ ನಂತರ ಇದೇ ಮೊದಲ ಬಾರಿಗೆ ಕೊಡಗು ಜಿಲ್ಲೆಗೆ ಆಗಮಿಸಿದ ಯದುವೀರ್ ಅವರಿಗೆ ಗಡಿಭಾಗ ಕೊಪ್ಪದಲ್ಲಿ ಬಿಜೆಪಿ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನಂತರ ಸಂಸದರು ತಲಕಾವೇರಿ, ಭಾಗಮಂಡಲಕ್ಕೆ (Bhagamandala) ತೆರಳಿ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಬಿಜೆಪಿಗೆ ಮತ ಹಾಕಿದ್ದಕ್ಕೆ ಕಾಂಗ್ರೆಸ್ ಸರ್ಕಾರ ಸೇಡು ತೀರಿಸಿಕೊಳ್ತಿದೆ – ಅಶೋಕ್
ನಾಪೋಕ್ಲುವಿಗೆ ತೆರಳಿದ ಅವರು ಶ್ರೀಭಗವತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ದೇವಾಲಯದ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದರು. ತಮ್ಮ ಗೆಲುವಿಗಾಗಿ ಶ್ರಮಿಸಿದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ ಅವರು, ಜಿಲ್ಲೆಯ ಜನರ ನಿರೀಕ್ಷೆಯಂತೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವುದಾಗಿ ಭರವಸೆ ನೀಡಿದರು.
ಪಾಡಿ ಶ್ರೀಇಗ್ಗುತ್ತಪ್ಪ ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ಅವರು ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರೊಂದಿಗೆ ಸಮಾಲೋಚನೆ ನಡೆಸಿದರು. ಇದನ್ನೂ ಓದಿ: ದುರ್ಗಾದೇವಿಗೆ ಭಂಡಾರದ ನೈವೇದ್ಯ – ಮುಧೋಳ ಲೋಕಾಪುರದಲ್ಲಿ 7 ವರ್ಷಕ್ಕೊಮ್ಮೆ ನಡೆಯುತ್ತದೆ ವಿಶಿಷ್ಟ ಜಾತ್ರೆ