Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇದೇ ಕೊನೆ, ನನ್ನ ಅಭಿಮಾನಿಗಳು ಯಾರೇ ಹೀಗೆ ಮಾಡ್ಕೊಂಡ್ರೆ ನಾನು ಮತ್ತೆ ಬರಲ್ಲ: ಕೈ ಮುಗಿದು ಯಶ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇದೇ ಕೊನೆ, ನನ್ನ ಅಭಿಮಾನಿಗಳು ಯಾರೇ ಹೀಗೆ ಮಾಡ್ಕೊಂಡ್ರೆ ನಾನು ಮತ್ತೆ ಬರಲ್ಲ: ಕೈ ಮುಗಿದು ಯಶ್ ಮನವಿ

Bengaluru City

ಇದೇ ಕೊನೆ, ನನ್ನ ಅಭಿಮಾನಿಗಳು ಯಾರೇ ಹೀಗೆ ಮಾಡ್ಕೊಂಡ್ರೆ ನಾನು ಮತ್ತೆ ಬರಲ್ಲ: ಕೈ ಮುಗಿದು ಯಶ್ ಮನವಿ

Public TV
Last updated: January 8, 2019 9:21 pm
Public TV
Share
3 Min Read
yash 4 main
SHARE

ಬೆಂಗಳೂರು: ಹುಟ್ಟುಹಬ್ಬದ ದಿನ ಶುಭಾಶಯ ಹೇಳಲು ಹೊಸಕೆರೆಹಳ್ಳಿಯ ನಿವಾಸಕ್ಕೆ ಆಗಮಿಸಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ರವಿಯ ಆರೋಗ್ಯವನ್ನು ನಟ ಯಶ್ ವಿಚಾರಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯಶ್, ಇದೇ ಕೊನೆ. ಇನ್ನು ಮುಂದೆ ನನ್ನ ಅಭಿಮಾನಿಗಳು ಈ ರೀತಿಯ ದುಸ್ಸಾಹಸಕ್ಕೆ ಪ್ರಯತ್ನ ಪಟ್ಟರೆ ನಾನು ಮತ್ತೆ ಬರುವುದಿಲ್ಲ ಎಂದು ಕೈ ಮುಗಿದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

yash 1

ಇವತ್ತು ಈ ಘಟನೆ ನಡೆದಾಗ ನಾನು ಮನೆಯಲ್ಲಿ ಇರಲಿಲ್ಲ. ಅಂಬರೀಶ್ ಅಣ್ಣಾ ನಮ್ಮ ಮಧ್ಯೆ ಇಲ್ಲ ಎನ್ನುವ ಕಾರಣಕ್ಕೆ ಹುಟ್ಟುಹಬ್ಬ ಆಚರಿಸುವುದಿಲ್ಲ ಎಂದು ಮೊದಲೇ ತಿಳಿಸಿದ್ದೆ. ಪ್ರತಿ ವರ್ಷ ನಾನು ಅಭಿಮಾನಿಗಳ ಜತೆ ಹುಟ್ಟು ಹಬ್ಬಗಳನ್ನು ಆಚರಿಸುತ್ತಿದ್ದೆ. ನನಗೆ ಈಗ ಸ್ವಲ್ಪ ಹೊತ್ತಿನ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ ವಿಷಯ ಗೊತ್ತಾಯಿತು. ವಿಚಾರ ಗೊತ್ತಾದ ತಕ್ಷಣವೇ ಆಸ್ಪತ್ರೆಗೆ ಬಂದೆ ಎಂದು ಹೇಳಿದರು.

ಡಾಕ್ಟರ್ ಡ್ರೆಸ್ಸಿಂಗ್ ಮಾಡುವ ವೇಳೆ ಈಗಲಾದರೂ ಬರುತ್ತಾರಾ ಎಂದು ರವಿ ಕೇಳಿದ್ದರಂತೆ. ಅವರ ತಂದೆಗೆ ನಾನು ಕ್ಷಮೆ ಕೇಳಿದೆ. ಆಗ ಅವರು ಕೂಡ ನೀವೇನು ಮಾಡ್ತಿರಾ ಬಿಡಿ ಸರ್ ಎಂದಿದ್ದರು. ಇದು ಅವರ ದೊಡ್ಡತನ ಎಂದು ಹೇಳಬಹುದು. ರವಿ ತಂದೆ ತಾಯಿ ಬೆಳಗ್ಗೆ 10 ರೂಪಾಯಿ ಕೊಟ್ಟರಂತೆ. ರವಿ ಅವರ ಶೇ.70 ರಷ್ಟು ದೇಹ ಸುಟ್ಟು ಹೋಗಿದೆ. ನನಗೆ ಈ ವಿಚಾರ ಕೇಳಿ ತುಂಬಾ ಭಯ ಆಯ್ತು. ಇನ್ನು ಯಾರೇ ಅಭಿಮಾನಿಗಳು ಈ ರೀತಿ ಮಾಡಿಕೊಂಡರೆ ನಾನಂತೂ ಬರುವುದಿಲ್ಲ. ಸಿನಿಮಾ ನೋಡಿ ನಮ್ಮಿಂದ ಏನಾದರೂ ಒಳ್ಳೆಯದನ್ನು ಕಲಿತುಕೊಳ್ಳಿ. ಇಂತಹ ಘಟನೆಗಳನ್ನು ಮಾಡಿಕೊಳ್ಳಬೇಡಿ ಎಂದು ಯಶ್ ಅಭಿಮಾನಿಗಳಲ್ಲಿ ಮತ್ತೊಮ್ಮೆ ಮನವಿ ಮಾಡಿಕೊಂಡರು.

yash 3

ನಡೆದಿದ್ದು ಏನು?
ಮೂಲತಃ ಪಾವಗಡದ ಸೋಲನಾಯಕನಹಳ್ಳಿ ನಿವಾಸಿ ರವಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಪ್ರತಿ ವರ್ಷ ಯಶ್ ಹುಟ್ಟುಹಬ್ಬಕ್ಕೆ ತಪ್ಪದೇ ಬೆಂಗಳೂರಿಗೆ ಬಂದು ಶುಭಾಶಯ ಹೇಳುತ್ತಿದ್ದ. ಮನರಂಜನಾ ಕಾರ್ಯಕ್ರಮಗಳಲ್ಲಿ ಯಶ್ ನಟನೆಯ ಹಾಡುಗಳಿಗೆ ಡ್ಯಾನ್ಸ್ ಮಾಡ್ತಿದ್ದ ರವಿ ಇಂದು ತನ್ನ ಮನೆಯಲ್ಲಿ ಅಡುಗೆ ಮಾಡಿದ್ದ. ಈ ಸಮಯದಲ್ಲಿ ತಂದೆಯ ಬಳಿ 10 ರೂ. ಕೇಳಿದ್ದ. ತಂದೆ ರಘು ಅವರು ಇವತ್ತು ಹೊರಗಡೆ ಹೋಗಬೇಡ. ಬಂದ್ ಇದೆ, ಗಲಾಟೆ ಆಗಬಹುದು ಎಂದು ತಿಳಿಸಿದ್ದಾರೆ. ಆದರೂ ಯಶ್ ಮೇಲಿನ ಅಭಿಮಾನದಿಂದ ಬೆಳಗ್ಗೆ ಮನೆಯಿಂದ ಹೊರಟು ಮಧ್ಯಾಹ್ನ ಹೊಸಕೆರೆಹಳ್ಳಿಯಲ್ಲಿರುವ ನಿವಾಸಕ್ಕೆ ಬಂದಿದ್ದಾನೆ.

ರವಿ ಆತ್ಮಹತ್ಯೆ ಮಾಡುವ ಮುನ್ನವೇ ಯಶ್ ತಾಯಿ ಪುಷ್ಪಾ ಅವರು, ಮಗ ಮನೆಯಲ್ಲಿ ಇಲ್ಲ. ಯಶ್ ಇಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ದಯವಿಟ್ಟು ಮನೆಯಿಂದ ತೆರಳಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದರು. ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಕೆಲ ಅಭಿಮಾನಿಗಳಿಗಳು ಯಶ್ ಅವರನ್ನು ನಾವು ಇವತ್ತೆ ನೋಡಲೇಬೇಕು ಎಂದು ಹಠ ಹಿಡಿದು ಮನೆಯ ಮುಂಭಾಗದಲ್ಲಿ ಕುಳಿತಿದ್ದರು.

yash 2

ಈ ರೀತಿ ಹಠ ಹಿಡಿದ ಅಭಿಮಾನಿಗಳ ಪೈಕಿ ರವಿಯು ಯಶ್ ಅವರಿಗಾಗಿ ಕಾದು ಕುಳಿತಿದ್ದ. ಎಷ್ಟು ಹೊತ್ತಾದರೂ ಯಶ್ ಮನೆಗೆ ಬಾರದೇ ಇದ್ದ ಹಿನ್ನೆಲೆಯಲ್ಲಿ ಬೇಸರಗೊಂಡ ರವಿ ಮೈ ಮೇಲೆ ಪೆಟ್ರೋಲ್ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಷ್ಟೇ ಅಲ್ಲದೇ ಬೆಂಕಿ ಹಚ್ಚಿಕೊಂಡು ರಸ್ತೆಯಲ್ಲೇ ಓಡಾಡಿದ್ದಾನೆ. ಕೂಡಲೇ ಅಲ್ಲಿದ್ದ ಮಂದಿ ಬೆಂಕಿ ನಂದಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯಶ್ ಎಂದರೆ ಮಗ ರವಿಗೆ ಪಂಚಪ್ರಾಣ. ಪ್ರತಿವರ್ಷವೂ ನನ್ನ ಮಗ ತಪ್ಪದೇ ಯಶ್ ಮನೆಗೆ ತೆರಳಿ ಹುಟ್ಟುಹಬ್ಬದ ಶುಭಾಶಯ ಹೇಳುತ್ತಿದ್ದ. ಇಂದು ಬೆಳಗ್ಗೆ ನಾನು ಯಶ್ ಅವರನ್ನು ನೋಡಿ ಬೇಗ ಬರುತ್ತೇನೆ ಎಂದು ಹೇಳಿ ಹೋಗಿದ್ದ. ಮಧ್ಯಾಹ್ನ ಪೊಲೀಸರು ಫೋನ್ ಮಾಡಿ ರವಿ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ತಿಳಿಸಿದರು. ಕೂಡಲೇ ನಾನು ವಿಕ್ಟೋರಿಯಾ ಆಸ್ಪತ್ರೆಗೆ ದೌಡಾಯಿಸಿ ಬಂದೆ ಎಂದು ರವಿ ತಂದೆಯಾದ ರಘು ಅವರು ತಿಳಿಸಿದ್ದಾರೆ.

https://www.youtube.com/watch?v=_RZyZvDggRU&feature=youtu.be

ಯಶ್ ತಾಯಿ ಪುಷ್ಪ ಪ್ರತಿಕ್ರಿಯಿಸಿ, ಅಭಿಮಾನಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನುವ ವಿಚಾರ ನನಗೆ ಗೊತ್ತೇ ಇರಲಿಲ್ಲ. ಮಾಧ್ಯಮಗಳಲ್ಲಿ ಸುದ್ದಿ ಬಂದ ಬಳಿಕ ಗೊತ್ತಾಯಿತು. ಬೆಳಗ್ಗೆ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಮನೆಗೆ ಬಂದಿದ್ದರು. ನಾನೇ ಅವರಿಗೆ ಯಶ್ ಮನೆಯಲ್ಲಿ ಇಲ್ಲ. ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದೆ. ಹೊರಗಡೆ ಇದ್ದಾಗ ಅಭಿಮಾನಿಯೊಬ್ಬ ಕೈ ಕೊಯ್ದುಕೊಳ್ಳುತ್ತೇನೆ ಅಂದಿದ್ದ. ಆ ವೇಳೆ ನಾನೇ ಬೇಡಪ್ಪ. ಯಶ್ ಮನೆಯಲ್ಲಿ ಇಲ್ಲ ಎಂದು ಮನವಿ ಮಾಡಿದ್ದೆ. ಸಾಕಷ್ಟು ಬಾರಿ ಮನವಿ ಮಾಡಿದರೂ ಅಭಿಮಾನಿಗಳು ನಿವಾಸದ ಮುಂಭಾಗದಲ್ಲೇ ಕಾಯುತ್ತಾ ಕುಳಿತಿದ್ದರು. ಈಗ ಈ ಘಟನೆ ನೋಡಿ ತುಂಬಾ ನೋವಾಗುತ್ತಿದೆ. ಅಭಿಮಾನಿಗಳು ಈ ರೀತಿ ಮಾಡಿಕೊಳ್ಳಬಾರದು ಎಂದು ಅವರು ಮಾಧ್ಯಮಗಳ ಮೂಲಕ ಮೂಲಕ ಮನವಿ ಮಾಡಿಕೊಂಡರು.

 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

 

TAGGED:kannadakannada newssuicide attemptYashಆತ್ಮಹತ್ಯೆಕನ್ನಡಪೊಲೀಸ್ಬೆಂಗಳೂರುಯಶ್ಯಶ್ ಹುಟ್ಟುಹಬ್ಬವಿಕ್ಟೋರಿಯಾ ಆಸ್ಪತ್ರೆ
Share This Article
Facebook Whatsapp Whatsapp Telegram

Cinema news

Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema

You Might Also Like

Sanju Samson 1
Cricket

ಸ್ಫೋಟಕ ಅರ್ಧಶತಕ ಸಿಡಿಸಿ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದ ಸಂಜು ಸ್ಯಾಮ್ಸನ್‌

Public TV
By Public TV
15 minutes ago
mangaluru Aadhar Card
Dakshina Kannada

ನೇತ್ರಾವತಿ ನದಿ ತಟದಲ್ಲಿ ರಾಶಿ ರಾಶಿ ಆಧಾರ್‌ಕಾರ್ಡ್ ಪತ್ತೆ

Public TV
By Public TV
34 minutes ago
internal conflict in davanagere bjp
Davanagere

ದಾವಣಗೆರೆ ಬಿಜೆಪಿಯಲ್ಲಿ ನಿಲ್ಲದ ಬಣ ಬಡಿದಾಟ – ಸಂಧಾನ ಸಭೆ ವಿಫಲ

Public TV
By Public TV
56 minutes ago
West Bengal Governor CV Ananda Bose Resigns
Latest

ಆನಂದ ಬೋಸ್ ರಾಜೀನಾಮೆ – ಪಶ್ಚಿಮ ಬಂಗಾಳಕ್ಕೆ ಆರ್.ಎನ್. ರವಿ ನೂತನ ರಾಜ್ಯಪಾಲ

Public TV
By Public TV
1 hour ago
ಬೆಂಗಳೂರು ವಿಮಾನ ನಿಲ್ದಾಣ
Bengaluru City

ಮತ್ತೆ ಬೆಂಗಳೂರು ಏರ್‌ಪೋರ್ಟ್‌ಗೆ ಜಾಗತಿಕ ಗೌರವ – ಸತತ 4ನೇ ಬಾರಿ ಪ್ರಶಸ್ತಿ

Public TV
By Public TV
2 hours ago
Nancy Grewal
Crime

ಖಲಿಸ್ತಾನಿ ಉಗ್ರರನ್ನು ಟೀಕಿಸುತ್ತಿದ್ದ ಪಂಜಾಬಿ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?