ಮೈಸೂರು: ವರುಣಾ (Varuna) ಕ್ಷೇತ್ರದ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಭಾಗಿಯಾಗಿದ್ದಾರೆ. ಸದ್ಯ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಅವರು ಸರ್ಕಾರಿ (Government) ಕಾರ್ಯಕ್ರಮ ಉದ್ಘಾಟಿಸಿದ್ದಾರೆ.
ವರುಣಾ ಕ್ಷೇತ್ರವನ್ನು ಸಿಎಂ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿದ್ದಾರೆ. ಆದರೆ ಕ್ಷೇತ್ರದ ತುಂಬಲ ಗ್ರಾಮದಲ್ಲಿ ನಡೆದ ನೂತನ ಹಾಲಿನ ಡೈರಿ ಮೇಲ್ಛಾವಣಿ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕ ಯತೀಂದ್ರ ಅವರು ಪಾಲ್ಗೊಂಡಿದ್ದರು. ಬಳಿಕ ಕೆಂಪಯ್ಯನಹುಂಡಿ ಗ್ರಾಮದಲ್ಲಿ ನೂತನ ಸಂಜೀವಿನಿ ಕಟ್ಟಡ ಉದ್ಘಾಟನೆಯಲ್ಲೂ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಮುಖ ತೊಳೆಯಲು, ಬಟ್ಟೆ ಬದಲಿಸಲೂ ಅವಕಾಶ ಕೊಡಲಿಲ್ಲ: ಪೊಲೀಸರ ನಡೆಗೆ ಬಿಜೆಪಿ ಕಾರ್ಯಕರ್ತೆ ಆಕ್ರೋಶ
ಕಾರ್ಯಕ್ರಮದಲ್ಲಿ ಭಾಗಿಯಾದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸೇಬಿನ ಹಾರ ಹಾಕಿ ಜನರು ಅದ್ದೂರಿ ಸ್ವಾಗತ ಕೋರಿದ್ದಾರೆ. ಇದೇ ವೇಳೆ ಅವರಿಗೆ ಅಹವಾಲು ನೀಡಲು ಸಾರ್ವಜನಿಕರು ಮುಗಿಬಿದ್ದಿದ್ದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಗಿಡ, ಮರ ಬೆಳೆಸೋದು ಕಡ್ಡಾಯ – ಆರೋಗ್ಯ ಇಲಾಖೆ ಆದೇಶ
Web Stories