Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿನ್ನೋಟ: 2024ರಲ್ಲಿ ಆದ ಪ್ರಮುಖ ಘಟನಾವಳಿಗಳಿವು..
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿನ್ನೋಟ: 2024ರಲ್ಲಿ ಆದ ಪ್ರಮುಖ ಘಟನಾವಳಿಗಳಿವು..

Latest

ಹಿನ್ನೋಟ: 2024ರಲ್ಲಿ ಆದ ಪ್ರಮುಖ ಘಟನಾವಳಿಗಳಿವು..

Public TV
Last updated: December 31, 2024 10:13 pm
Public TV
Share
4 Min Read
WhatsApp Image 2024 12 31 at 9.33.53 PM
SHARE

2024ರ ಕೊನೆ ದಿನ ಇಂದು. ಈ ವರ್ಷದ ಅಸ್ತಮಾನವಾಗಿ 2025ರ ಉದಯಿಸುವ ಸಂದರ್ಭ. ಹಿಂದಿನ ಘಟನಾವಳಿಗಳ ಮೆಲುಕು ಹಾಕುತ್ತಾ ಮುಂದಡಿ ಇಡುವ ಸಮಯ ಬಂದಿದೆ. ಹೊಸ ವರ್ಷ ಸ್ವಾಗತಿಸುವ ಹೊತ್ತಲ್ಲಿ, ತೆರೆಗೆ ಸರಿಯುತ್ತಿರುವ ವರ್ಷದಲ್ಲಿ ಜಗತ್ತಿನಲ್ಲಾದ ಪ್ರಮುಖ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ರಾಜಕೀಯ ಪ್ರಮುಖ ಬೆಳವಣಿಗೆಗಳನ್ನು ಸ್ಮರಿಸೋಣ. 2024ರಲ್ಲಿ ಆದ ಪ್ರಮುಖ 10 ಘಟನಾವಳಿಗಳೇನು ಎಂಬುದರ ಸಂಕ್ಷಿಪ್ತ ವಿವರ ಇಲ್ಲಿದೆ.

ಅಯೋಧ್ಯೆಯಲ್ಲಿ ರಾಮನಿಗೆ ಪಟ್ಟಾಭಿಷೇಕ
ಜನವರಿ: ಬರೋಬ್ಬರಿ 500 ವರ್ಷಗಳ ಹೋರಾಟ ಮತ್ತು ದಶಕಗಳ ಕಾಯುವಿಕೆ ಕೊನೆಗೂ ಅಂತ್ಯವಾಗಿ, ಅಯೋಧ್ಯೆ ರಾಮಮಂದಿರ ಕೊನೆಗೂ ಉದ್ಘಾಟನೆಯಾಗಿ, ರಾಮಲಲ್ಲಾ ವಿಗ್ರಹಕ್ಕೆ ಪ್ರಾಣಪ್ರತಿಷ್ಠಾಪನೆ ಮಾಡಲಾಯಿತು. ಜ.22 ರಂದು ಅಯೋಧ್ಯೆಯಲ್ಲಿ ಬಾಲರಾಮನ ವಿಗ್ರಹದ ಪ್ರಾಣಪ್ರತಿಷ್ಠಾಪನೆಯಾಯಿತು. ಮೈಸೂರಿನ ಶಿಲ್ಪಿ ಅರುಣ್‌ ಯೋಗಿರಾಜ್‌ ಅವರು ಕೆತ್ತನೆ 5 ಅಡಿ ಎತ್ತರದ ಮಂದಸ್ಮಿತ ಬಾಲರಾಮ ಅಯೋಧ್ಯೆ ರಾಮಮಂದಿರದಲ್ಲಿ ಪಟ್ಟಾಭಿಷಿಕ್ತನಾದನು. ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವತೀರ್ಥಪ್ರಸನ್ನ ಶ್ರೀಗಳ ಮುಂದಾಳತ್ವದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ವಿದ್ಯುತ್‌ ದೀಪಾಲಂಕಾರದಿಂದ ಅಯೋಧ್ಯೆ ಝಗಮಗಿಸಲು ಮಂಗಳೂರಿನವರ ಸೇವೆ ಸ್ಮರಣೀಯ.

AYODHYA

ಮುಸ್ಲಿಂ ರಾಷ್ಟ್ರದಲ್ಲಿ ಹಿಂದೂ ದೇವಾಲಯ
ಫೆಬ್ರವರಿ: ಮುಸ್ಲಿಂ ರಾಷ್ಟ್ರ ಸಂಯುಕ್ತ ಅರಬ್‌ ಒಕ್ಕೂಟ (UAE)ದಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಾಯಿತು. ದೇವಾಲಯ ನಿರ್ಮಾಣಕ್ಕೆ ಭೂಮಿಯನ್ನು ಯುಎಇ ಸರ್ಕಾರ ದಾನ ಮಾಡಿದೆ. BAPS ದೇವಾಲಯದ ನಿರ್ಮಾಣವನ್ನು 2019 ರಲ್ಲಿ ಪ್ರಾರಂಭಿಸಲಾಯಿತು. ಅಯೋಧ್ಯೆ ರಾಮಮಂದಿರವನ್ನು ಉದ್ಘಾಟಿಸಿದ ಕೆಲವೇ ವಾರಗಳ ನಂತರ, ದುಬೈನ ಅಬುಧಾಬಿಯಲ್ಲಿ ಸ್ಥಾಪಿತವಾದ ಹಿಂದೂ ದೇವಾಲಯವನ್ನು 2024ರ ಫೆಬ್ರವರಿ 14 ರಂದು ಉದ್ಘಾಟಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಈ ದೇವಾಲಯವನ್ನು ಉದ್ಘಾಟಿಸಿದರು.

ABUDHABI

ಬೆಂಗಳೂರು ಕೆಫೆ ಬಾಂಬ್‌ ಸ್ಫೋಟ
ಮಾರ್ಚ್‌: ಸಿಲಿಕಾನ್‌ ಸಿಟಿ ಬೆಂಗಳೂರಿನ ಜನ ಬೆಚ್ಚಿ ಬೀಳುವಂತಹ ಉಗ್ರ ಚಟುವಟಿಕೆಯೊಂದು ರಾಜಧಾನಿಯಲ್ಲಿ ನಡೆಯಿತು. ಬೆಂಗಳೂರಿನ ವೈಟ್‌ಫೀಲ್ಡ್‌ ಸಮೀಪದ ಕುಂದಲಹಳ್ಳಿಯ ‘ದಿ ರಾಮೇಶ್ವರಂ ಕೆಫೆ’ಯಲ್ಲಿ ಬಾಂಬ್‌ ಸ್ಫೋಟಿಸಲಾಯಿತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದೆ.

RAMESHWARAM CAFE

ಇಸ್ರೇಲ್‌ ಮೇಲೆ ಇರಾನ್‌ ದಾಳಿ
ಏಪ್ರಿಲ್: ಇಸ್ರೇಲ್‌ ಮೇಲೆ ಇರಾನ್‌ ಸೇನೆಯಿಂದ ಮೊದಲ ಬಾರಿ ನೇರ ದಾಳಿ ನಡೆಯಿತು. 30 ಕ್ಕೂ ಹೆಚ್ಚು ಕ್ಷಿಪಣಿಗಳು, 170 ಡ್ರೋನ್‌, 120 ಕ್ಕೂ ಹೆಚ್ಚು ಗುರಿ ನಿರ್ದೇಶಿತ ಕ್ಷಿಪಣಿಗಳಿಂದ ದಾಳಿ ನಡೆಸಲಾಯಿತು.

Israel Iran Missile Attack

ಪ್ರಜ್ವಲ್‌ ರೇವಣ್ಣ ಅರೆಸ್ಟ್‌
ಮೇ: ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹರಣ, ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪದಲ್ಲಿ ಜೆಡಿಎಸ್‌ ಸಂಸದರಾಗಿದ್ದ ಪ್ರಜ್ವಲ್‌ ರೇವಣ್ಣ ಅವರನ್ನು ಬಂಧಿಸಲಾಯಿತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್‌ ರೇವಣ್ಣ ಜರ್ಮನಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಬಳಿಕ ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಏರ್‌ಪೋರ್ಟ್‌ನಲ್ಲೇ ಎಸ್‌ಐಟಿ ತಂಡವು ಅವರನ್ನು ಬಂಧಿಸಿತ್ತು. ಆರೋಪಿ ಜೈಲಿನಲ್ಲಿದ್ದಾರೆ.

Prajwal Revanna 4

ಮತ್ತೆ ಮೋದಿ ಸರ್ಕಾರ ಅಧಿಕಾರಕ್ಕೆ
ಜೂನ್: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು, ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರಿತು. ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿ ದಾಖಲೆ ಬರೆದರು. ಬಿಜೆಪಿ ಸ್ಥಾನ ಗಳಿಕೆ ಕೊಂಚ ಕುಸಿತವಾಗಿ ಎನ್‌ಡಿಎಗೆ 295, ಇಂಡಿಯಾ ಕೂಟಕ್ಕೆ 230 ಸ್ಥಾನ ಸಿಕ್ಕಿತು. 10 ವರ್ಷಗಳ ಬಳಿಕ ಕಾಂಗ್ರೆಸ್ಸಿಗೆ ಅಧಿಕೃತ ಪ್ರತಿಪಕ್ಷ ಸ್ಥಾನ ಸಿಕ್ಕಿತು.

Narendra Modi 3

 

ಸ್ಟಾರ್‌ ನಟ ದರ್ಶನ್‌ ಅರೆಸ್ಟ್
ಜುಲೈ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್‌, ಪವಿತ್ರಾಗೌಡ ಸೇರಿ 17 ಮಂದಿ ಬಂಧನಕ್ಕೆ ಒಳಗಾದರು. ನಟ ದರ್ಶನ್‌ಗೆ 6 ತಿಂಗಳ ಬಳಿಕ ಜಾಮೀನು ಸಿಕ್ಕಿತು. ಈ ಅವಧಿಯಲ್ಲಿ ಜೈಲಿನಲ್ಲಿ ರಾಜಾತಿಥ್ಯ ವಿವಾದ, ಬೆನ್ನುನೋವಿನಂತಹ ಅನೇಕ ಸಮಸ್ಯೆಗಳನ್ನು ನಟ ಎದುರಿಸಿದರು.

darshan ballari jail 2
ವಯನಾಡು ಭೂಕುಸಿತ ದುರಂತ: ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಗುಡ್ಡ ಕುಸಿತವಾಗಿ 200 ಕ್ಕೂ ಅಧಿಕ ಮಂದಿ ಸಾವಿಗೀಡಾದರು. ಮಣ್ಣಿನಲ್ಲಿ ಊರಿಗೆ ಊರೇ ಕೊಚ್ಚಿ ಹೋಗಿ ದುರಂತ ಸಂಭವಿಸಿತು.

Wayanad Landslide Houses washed away town partially swept off Chooralmala Mundakkai Meppadi News

ಬಾಂಗ್ಲಾದಲ್ಲಿ ಕ್ಷಿಪ್ರಕ್ರಾಂತಿ; ಪ್ರಧಾನಿ ನಿವಾಸದ ಮೇಲೆ ದಾಳಿ
ಆಗಸ್ಟ್‌: ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಹೋರಾಟ ಜೋರಾಗಿ ಹಿಂಸಾರೂಪ ತಳೆಯಿತು. ದೇಶದ ಜನತೆ ಪ್ರಧಾನಿಗಳ ನಿವಾಸದ ಮೇಲೆ ಮುತ್ತಿಗೆ ಹಾಕಿದರು. ಜನರ ಪ್ರತಿಭಟನೆಯಿಂದ ಬೆಚ್ಚಿದ ಪ್ರಧಾನಿ ಶೇಖ್‌ ಹಸೀನಾ ಪಲಾಯನ ಮಾಡಿದರು. ಬಾಂಗ್ಲಾ ಬಿಟ್ಟು ಭಾರತದಲ್ಲಿ ಆಶ್ರಯ ಪಡೆದರು. ಹಿಂಸಾಚಾರಕ್ಕೆ ನೂರಾರು ಮಂದಿ ಬಲಿಯಾದರು. ಹಿಂದೂ ನರಮೇಧ ಕೂಡ ನಡೆದು ಸಂಚಲನ ಮೂಡಿಸಿತು.

Bangladesh 5

ತಿರುಪತಿ ಲಡ್ಡು ವಿವಾದ
ಸೆಪ್ಟೆಂಬರ್: ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದ ತಯಾರಿಕೆಗೆ ಪ್ರಾಣಿ ಕೊಬ್ಬನ್ನು ಬಳಸಲಾಗುತ್ತಿದೆ ಎಂಬ ಆರೋಪ ದೇಶಾದ್ಯಂತ ಸಂಚಲನ ಮೂಡಿಸಿತು. ‘ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬನ್ನು ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಸಲಾಗುತ್ತಿತ್ತು’ ಎಂದು ಸಿಎಂ ಚಂದ್ರಬಾಬು ನಾಯ್ಡು ನೀಡಿದ ಹೇಳಿಕೆ ವಿವಾದದ ಕಿಡಿ ಹೊತ್ತಿಸಿತು.

Tirupati Laddu

ಇಸ್ರೇಲ್‌-ಪ್ಯಾಲೆಸ್ತೀನ್‌ ಸಂಘರ್ಷ
ಅಕ್ಟೋಬರ್: ಹಮಾಸ್‌ ಬಂಡುಕೋರರು ಇಸ್ರೇಲ್‌ ಮೇಲೆ ನಡೆಸಿದ ದಾಳಿಗೆ ಪ್ರತಿಕಾರವಾಗಿ ಇಸ್ರೇಲ್‌ ದಾಳಿ ನಡೆಸಿತು.‌ ಪ್ಯಾಲೆಸ್ತೀನ್‌, ಲೆಬನಾನ್‌ ಮೇಲೆ ದಾಳಿ ಇಸ್ರೇಲ್‌ ದಾಳಿ ಮಾಡಿತು. ಇದರ ಬೆನ್ನಲ್ಲೇ ಇರಾನ್‌ ಕೂಡ ಇಸ್ರೇಲ್‌ ಮೇಲೆ ದಾಳಿ ಮಾಡಿತು. ಹೀಗೆ, ಮಧ್ಯಪ್ರಾಚ್ಯ ಸಂಘರ್ಷ ನಡೆಯಿತು.

Israel Palestine War

ಅಮೆರಿಕ ಅಧ್ಯಕ್ಷಗಾದಿಗೆ ಮತ್ತೆ ಟ್ರಂಪ್‌
ನವೆಂಬರ್: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ಭರ್ಜರಿ ಜಯಗಳಿಸಿದರು. ದೊಡ್ಡಣಗೆ ಮತ್ತೆ ಅಧ್ಯಕ್ಷರಾಗಿ ರಿಪಬ್ಲಿಕನ್‌ ಪಕ್ಷದ ಟ್ರಂಪ್ ಆಯ್ಕೆಯಾದರು. ಇವರ ವಿರುದ್ಧ ಸ್ಪರ್ಧಿಸಿದ್ದ ಡೆಮಾಕ್ರಟಿಕ್‌ ಪಕ್ಷದ ಕಮಲಾ ಹ್ಯಾರಿಸ್‌ ಹೀನಾಯ ಸೋಲನುಭವಿಸಿದರು.

Donald Trump 2

ದಕ್ಷಿಣ ಕೊರಿಯಾ ವಿಮಾನ ದುರಂತ
ಡಿಸೆಂಬರ್‌: ದಕ್ಷಿಣ ಕೊರಿಯಾದಲ್ಲಿ ವಿಮಾನ ದುರಂತವೊಂದು ಸಂಭವಿಸಿ 179 ಮಂದಿ ದಾರುಣ ಸಾವಿಗೀಡಾದರು. ಮುವಾನ್‌ ಏರ್‌ಪೋರ್ಟ್‌ನಲ್ಲಿ ರನ್‌ವೇನಿಂದ ಪಕ್ಕಕ್ಕೆ ಜಾರಿದ ವಿಮಾನವು ಕಾಂಕ್ರಿಟ್‌ ಗೋಡೆಗೆ ಡಿಕ್ಕಿ ಹೊಡೆಯಿತು. ತಕ್ಷಣ ಹೊತ್ತಿಕೊಂಡ ಬೆಂಕಿಯಿಂದ 181 ಪ್ರಯಾಣಿಕರ ಪೈಕಿ, 179 ಮಂದಿ ಜೀವ ಕಳೆದುಕೊಂಡರು. ಇಬ್ಬರು ಮಾತ್ರ ಬದುಕುಳಿದಿದ್ದಾರೆ.

Plane With 181 People Veers Off Runway Crashes In South Korea 29 Dead

TAGGED:indiaMajor IncidentsworldYear Ender 2024
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
4 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
4 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
5 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
5 hours ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
5 hours ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?