Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆ ಜಾತಿ ಈ ಜಾತಿ ಬಿಟ್ಟುಬಿಡಿ, ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು, ಒಗ್ಗಟ್ಟಿನಿಂದ ಕೆಲಸ ಮಾಡೋಣ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಆ ಜಾತಿ ಈ ಜಾತಿ ಬಿಟ್ಟುಬಿಡಿ, ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು, ಒಗ್ಗಟ್ಟಿನಿಂದ ಕೆಲಸ ಮಾಡೋಣ: ವಿಜಯೇಂದ್ರ

Bengaluru City

ಆ ಜಾತಿ ಈ ಜಾತಿ ಬಿಟ್ಟುಬಿಡಿ, ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು, ಒಗ್ಗಟ್ಟಿನಿಂದ ಕೆಲಸ ಮಾಡೋಣ: ವಿಜಯೇಂದ್ರ

Public TV
Last updated: November 15, 2023 12:27 pm
Public TV
Share
3 Min Read
Yediyurappas son Vijayendra formally takes charge as Karnataka BJP president 1
SHARE

– ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟುಬಿಡಿ
– ಲೋಕಸಭೆಯಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಬೇಕು
– ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಮಾತು

ಬೆಂಗಳೂರು: ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟು ನಾನು ಭಾರತೀಯ ಜನತಾ ಪಾರ್ಟಿಯ (BJP) ಕಾರ್ಯಕರ್ತ ಅಂತ ಭಾವಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಕೆಲಸ ಮಾಡಬೇಕೆಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಕರ್ನಾಟಕ ಬಿಜೆಪಿಯ (Karnataka BJP) 11ನೇ ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ವಿಜಯೇಂದ್ರ ಅವರಿಗೆ ನಳಿನ್‌ ಕುಮಾರ್‌ ಕಟೀಲ್‌ (Nalin Kumar Kateel) ಅವರು ಪಕ್ಷದ ಬಾವುಟವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

Yediyurappas son Vijayendra formally takes charge as Karnataka BJP president 3

ಈ ವೇಳೆ ಮಾತನಾಡಿದ ಅವರು, ದೀಪಾವಳಿ (Deepavali) ಶುಭ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್‌ ಶಾ, ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್‌ ಸಂತೋಷ್ ಅವರ ಅಶೀರ್ವಾದದಿಂದ ನಾನು ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದೇನೆ. ರಾಜ್ಯದ ಲಕ್ಷಾಂತರ ಕಾರ್ಯಕರ್ತರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಆರಂಭದಲ್ಲೇ ಹೇಳಿದರು.

ನನಗೆ ಅಧ್ಯಕ್ಷ ಸ್ಥಾನ ಸಿಗುತ್ತದೆ ಎಂದು ನಾನು ನಿರೀಕ್ಷೆಯೇ ಮಾಡಿರಲಿಲ್ಲ. ಜೆಪಿ ನಡ್ಡಾ ಅವರು ನನ್ನ ಹೆಸರನ್ನು ಘೋಷಣೆ ಮಾಡಿದ ಮರುಕ್ಷಣದಿಂದ ಎಲ್ಲಾ ನಾಯಕರು ವೈಯಕ್ತಿಕವಾಗಿ ನನಗೆ ಶುಭ ಹಾರೈಸಿದ್ದಾರೆ. ಹಿರಿಯರು, ಸಂಘ ಪರಿವಾರ ನಾಯಕರ ಎಲ್ಲರ ಸೂಚನೆ, ಸಲಹೆಯನ್ನು ಪಡೆದು ಸಂಘಟನೆ ಮಾಡುತ್ತೇನೆ. ಹಗಲು ರಾತ್ರಿ ಕಾಲಿಗೆ ಚಕ್ರವನ್ನು ಕಟ್ಟಿಕೊಂಡು ಧ್ವನಿ ಎತ್ತುವ ಮೂಲಕ ರಸ್ತೆಗೆ ಇಳಿದು ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡುತ್ತೇನೆ ಎಂದು ತಿಳಿಸಿದರು.

 

Yediyurappas son Vijayendra formally takes charge as Karnataka BJP president 2

28ಕ್ಕೆ 28 ಲೋಕಸಭಾ ಕ್ಷೇತ್ರವನ್ನು ಗೆಲ್ಲುವುದು ಈಗ ನಮ್ಮ ಮುಂದಿರುವ ಗುರಿ. ಇದರಲ್ಲಿ ನಮ್ಮ ಸ್ವಾರ್ಥ ಇಲ್ಲ. ಒಂದು ದಿನವೂ ರಜೆ ತೆಗೆದುಕೊಳ್ಳದೇ ಭಾರತ ದೇಶವನ್ನು ಅಗ್ರಮಾನ್ಯ ದೇಶವನ್ನಾಗಿ ಮಾಡಬೇಕು ಎಂದು ಕನಸು ಕಾಣುತ್ತಿರುವ ಪ್ರಧಾನಿ ಮೋದಿ ಅವರ ಬಲವನ್ನು ಬಲಪಡಿಸಬೇಕು. ಹಿಂದೆ 20ಕ್ಕೂ ಹೆಚ್ಚು ಲೋಕಸಭಾ ಸ್ಥಾನವನ್ನು ನಾವು ಗೆಲ್ಲುತ್ತೇವೆ ಎಂದಾಗ ಯಡಿಯೂರಪ್ಪನವರನ್ನು ಹಾಸ್ಯ ಮಾಡಿದ್ದರು. ಆದರೆ ಅವರ ಅಧ್ಯಕ್ಷತೆಯಲ್ಲಿ 25 ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿತ್ತು. ಈಗ ನಾವು 28 ಕ್ಷೇತ್ರಗಳನ್ನು ಗೆಲ್ಲಲು ಕೆಲಸ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: 1 ಬಾರಿ ಬೀದಿ ನಾಯಿ ಕಚ್ಚಿದ್ರೆ ಕನಿಷ್ಟ 10 ಸಾವಿರ ಪರಿಹಾರ ಕೊಡಬೇಕು: ಹೈಕೋರ್ಟ್‌

ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ (Congress) ನಾಯಕರು ನಮ್ಮ ಸರ್ಕಾರವನ್ನು 40% ಸರ್ಕಾರ ಎಂದು ಟೀಕೆ ಮಾಡಿದರು. ಕಾಂಗ್ರೆಸ್‌ನ ಹೇಳಿದ ಸುಳ್ಳನ್ನು ಜನರು ನಂಬಿದರು.ಈಗ ಕಾಂಗ್ರೆಸ್‌ ನಾನು ಹೇಳಿದ ಆರೋಪವನ್ನು ಜಾರಿ ಮಾಡಲು ಹೊರಟಿದೆ. ಆಡಳಿತ ಪಕ್ಷದ ಶಾಸಕರು ತಲೆ ತಗ್ಗಿಸಿಕೊಂಡು ಓಡಾಡುತ್ತಿದ್ದಾರೆ. ಅವರಿಗೆ ಯಾವುದೇ ಅನುದಾನ ಸಿಗುತ್ತಿಲ್ಲ. ದಕ್ಷಿಣ ಭಾರತದ ಬಿಜೆಪಿ ಭದ್ರಕೋಟೆಯಾಗಿರುವ ಕರ್ನಾಟಕದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅರಳಿಸಲು ನಾವೆಲ್ಲರೂ ಮತ್ತೊಮ್ಮೆ ಸಂಕಲ್ಪ ತೊಟ್ಟು ಕೆಲಸ ಮಾಡಬೇಕಿದೆ ಎಂದು ಕರೆ ನೀಡಿದರು.

ಶಿಕಾರಿಪುರ ತಾಲೂಕಿನ ಜನತೆ ಆಶೀರ್ವಾದಿಂದ ಮೊದಲ ಬಾರಿಗೆ ನಾನು ಜನ ಪ್ರತಿನಿಧಿಯಾಗಿ ಆಯ್ಕೆಯಾಗಿ ಅಧ್ಯಕ್ಷ ಸ್ಥಾನವನ್ನು ಏರಿದ್ದೇನೆ. ಈ ಮಹತ್ವದ ಸ್ಥಾನ ಸಿಗಲು ಕಾರಣರಾದ ಶಿಕಾರಿಪುರದ ಮತದಾರರಿಗೆ ಮತ್ತು ಪಕ್ಷ ಸಂಘಟನೆ ಮಾಡಿದ ಹಿರಿಯರಿಗೆ ಈ ವೇಳೆ ಕೃತಜ್ಞತೆ ಸಲ್ಲಿಸಿದರು.

 

ಈ ವೇಳೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಆಶೀರ್ವಾದ, ಆದೇಶದಂತೆ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅಮಿತ್ ಶಾ ಅವರನ್ನು ಬೆಂಗಳೂರಿಗೆ ಕರೆಸಿ ಲಕ್ಷ ಜನರನ್ನು ಆಹ್ವಾನಿಸಿ ದೊಡ್ಡ ಸಮಾರಂಭ ಮಾಡುತ್ತೇವೆ. ವಿಜಯೇಂದ್ರ ಘೋಷಣೆ ಬಳಿಕ ಉತ್ಸಾಹ ಹೆಚ್ಚಾಗಿದೆ ಎಂದು ಹೇಳಿದರು.

ನಳಿನ್‌ ಕುಮಾರ್‌ ಕಟೀಲ್‌ ಮಾತನಾಡಿ, ನನಗೆ ಹೇಗೆ ಸಹಕಾರ, ಶಕ್ತಿಯನ್ನ ಕೊಟ್ಟಿದ್ದೀರಿ ಹಾಗೆ ವಿಜಯೇಂದ್ರ ಅವರಿಗೂ ಕೊಡಬೇಕು. ಎಲ್ಲಾ ಹಿರಿಯರ ಸಹಕಾರ ಇರುತ್ತದೆ. ಸಾಮೂಹಿಕ ನಾಯಕತ್ವದ ಮೂಲಕ ಪಕ್ಷ ಸಂಘಟನೆ ಮಾಡಬೇಕು. ವಿಜಯೇಂದ್ರಗೆ ಬೆಂಗಾವಲಾಗಿ ಜೊತೆಯಲ್ಲಿ ಇರುತ್ತೇವೆ ಎಂದು ತಿಳಿಸಿದರು.

 

TAGGED:bjpBY VijayendrakarnatakaLok Sabha electionpoliticsಕರ್ನಾಟಕಬಿಜೆಪಿಬಿವೈ ವಿಜಯೇಂದ್ರಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

bigg boss sudeep
ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Cinema Latest Main Post TV Shows
bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows
BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows

You Might Also Like

SATISH JARKIHOLI 1
Davanagere

ಈ ಅವಧಿಗೆ ಅಲ್ಲ, ಮುಂದಿನ 2028ಕ್ಕೆ ನಾನು ಸಿಎಂ ಸ್ಥಾನದ ಆಕಾಂಕ್ಷಿ – ಸತೀಶ್ ಜಾರಕಿಹೊಳಿ

Public TV
By Public TV
13 minutes ago
parappana agrahara
Bengaluru City

ಪರಪ್ಪನ ಅಗ್ರಹಾರ ಜೈಲು ಸಿಬ್ಬಂದಿ ಮೇಲೆ ಕೈದಿಗಳಿಂದ ಹಲ್ಲೆ – ಕೇಸ್‌ ದಾಖಲು

Public TV
By Public TV
24 minutes ago
Eknath Shinde Sena corporators
Latest

ಮುಂಬೈನಲ್ಲಿ ಮತ್ತೆ ರೆಸಾರ್ಟ್ ರಾಜಕೀಯ – ಶಿಂಧೆ ಸೇನಾ ಕಾರ್ಪೊರೇಟರ್‌ಗಳು ಫೈವ್‌ ಸ್ಟಾರ್ ಹೋಟೆಲ್‌ಗೆ ಸ್ಥಳಾಂತರ

Public TV
By Public TV
27 minutes ago
Money
Bengaluru City

CL-7 ಲೈಸೆನ್ಸ್‌ಗೆ ಲಂಚಕ್ಕೆ ಬೇಡಿಕೆಯಿಟ್ಟ ಕೇಸ್ – ಅಬಕಾರಿ ಡಿಸಿ, ಎಸ್ಪಿ ಸೇರಿ ಮೂವರಿಗೆ ನ್ಯಾಯಾಂಗ ಬಂಧನ

Public TV
By Public TV
55 minutes ago
Tiger
Chamarajanagar

ಚಾಮರಾಜನಗರ | ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – 10 ತಿಂಗಳ ಮರಿ ಸೆರೆ

Public TV
By Public TV
59 minutes ago
AK 47 Rifles Pistols Ammunition Found Near India Pakistan Border 1
Crime

ಭಾರತ – ಪಾಕ್ ಗಡಿಯಲ್ಲಿ 3 AK-47, 2 ಪಿಸ್ತೂಲ್‌, ಮದ್ದುಗುಂಡುಗಳು ಪತ್ತೆ – ಪೊಲೀಸರಿಂದ ತೀವ್ರ ಶೋಧ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?