Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರೈತರಿಗೆ ಸಂಬಂಧಪಟ್ಟ ಖಾತೆ ಕೊಟ್ಟರೆ ಅನುಭವ ಇರೋದ್ರಿಂದ ಸ್ವಲ್ಪ ಚೆನ್ನಾಗಿ ಕೆಲಸ ಮಾಡ್ತೀನಿ – ಮಾಧುಸ್ವಾಮಿ

Public TV
Last updated: August 20, 2019 11:00 am
Public TV
Share
2 Min Read
Madhuswamy
SHARE

ಬೆಂಗಳೂರು: ಸಿಎಂ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿರುವ ಮಾಧುಸ್ವಾಮಿ ಅವರು ಕಂದಾಯ ಖಾತೆ ಅಥವಾ ಗ್ರಾಮೀಣ ಅಭಿವೃದ್ಧಿ ಖಾತೆಯಲ್ಲಿ ಕೆಲಸ ಮಾಡಲು ನನಗೆ ಆಸೆ ಇದೆ. ನಾನು ಒತ್ತಾಯ ಮಾಡಲ್ಲ, ಯಾವ ಖಾತೆ ಕೊಟ್ಟರೂ ಚೆನ್ನಾಗಿ ಕೆಲಸ ಮಾಡುತ್ತೇನೆ ಎಂದು ತಮ್ಮ ಆಸೆಯನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಯಾವ ಖಾತೆ ಕೊಟ್ಟರು ಉತ್ತಮ ಕೆಲಸ ಮಾಡುತ್ತೇನೆ. ನಾನು ಹಳ್ಳಿಯಿಂದ ಬಂದವನು, ಹೀಗಾಗಿ ರೈತರಿಗೆ ಸಂಬಂಧಪಟ್ಟ ಖಾತೆ ಕೊಟ್ಟರೆ ಅನುಭವವಿರುವುದರಿಂದ ಸ್ವಲ್ಪ ಚೆನ್ನಾಗಿ ಕೆಲಸ ಮಾಡುತ್ತೆನೆ. ರೈತರಿಗೆ ಸಂಬಂಧಪಟ್ಟ ಖಾತೆಯಲ್ಲಿ ಕೆಲಸ ಮಾಡುವ ಆಸೆ ಇದೆ. ಆದರೆ ಖಾತೆ ಹಂಚಿಕೆ ಮಾಡುವವರು ನಾಯಕರು, ಅವರಿಗೆ ಏನು ಆಸೆ ಇದೆಯೋ ಗೊತ್ತಿಲ್ಲ. ಅವರ ನಿರೀಕ್ಷೆಯನ್ನು ಪೂರ್ತಿಗೊಳಿಸುವುದು ಕೂಡ ನಮ್ಮ ಕರ್ತವ್ಯ ಎಂದರು.

Madhuswamy

ನಮ್ಮ ಬದುಕಿಗೆ ಹತ್ತಿರವಾದ ಖಾತೆ ಕೊಟ್ಟರೆ ಕೆಲಸ ಮಾಡಲು ಖುಷಿಯಾಗುತ್ತದೆ. ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕೆಲಸ ಮಾಡುವ ಆಸೆ ಇದೆ. ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ಕೂಡ ದುಡಿಯುವ ಆಸೆ ಇದೆ. ಈ ಖಾತೆಗಳನ್ನು ಕೊಟ್ಟರೆ ಖುಷಿಯಿಂದ ನೋಡಿಕೊಳ್ಳುತ್ತೇನೆ. ಅದನ್ನು ಬಿಟ್ಟು ಕಾನೂನು ಖಾತೆಯನ್ನೇ ನೋಡಿಕೋ ಎಂದರೆ ಅದನ್ನೂ ಕೂಡ ಸಂತೋಷದಿಂದಲೇ ನಿಭಾಯಿಸುತ್ತೇನೆ ಎಂದು ತಮ್ಮ ಆಸೆಯನ್ನು ತಿಳಿಸಿದರು.

ನನಗೆ ಮತ್ತು ಯಡಿಯೂರಪ್ಪ ಅವರಿಗೆ ಬಹಳ ವರ್ಷದಿಂದ ಸ್ನೇಹ, ವಿಶ್ವಾಸ ಇದೆ. ಸಚಿವ ಸ್ಥಾನ ನೀಡಿರುವುದು ಅದಕ್ಕೆ ಸಂದ ಗೌರವ. ಕಳೆದ 20 ವರ್ಷದಿಂದ ನಾವಿಬ್ಬರು ಜೊತೆಯಾಗಿದ್ದೇವೆ. ಹೀಗಾಗಿ ನನ್ನ ಮೇಲೆ ಅವರಿಗೆ ಬಹಳ ವಿಶ್ವಾಸವಿದೆ. ಆದ್ದರಿಂದ ನನಗೆ ಸಚಿವ ಸ್ಥಾನ ಕೊಟ್ಟಿದ್ದಾರೆ ಎಂಬುದು ನನ್ನ ಭಾವನೆ ಎಂದು ಸಿಎಂ ಹಾಗೂ ಸಚಿವ ಸಂಪುಟದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಪ್ತನಿಗೆ ಮಂತ್ರಿಸ್ಥಾನ ಕೊಟ್ಟ ಬಿಎಸ್‍ವೈ – ಮಾಧುಸ್ವಾಮಿಗೆ ಸಚಿವ ಸ್ಥಾನ ಸಿಗಲು ಕಾರಣ ಏನು?

Amit Shah Yeddyurappa BSY

ಖಾತೆ ವಿಸ್ತರಣೆ ಮಾಡೋದು, ಕೊಡುವುದು ನಾಯಕರ ಕೆಲಸ. ಅವರು ಯಾವ ಕೆಲಸ ಕೊಡುತ್ತಾರೋ ಅದನ್ನು ಸಮರ್ಪಕವಾಗಿ ಮಾಡುವುದು ನನ್ನ ಆಕಾಂಕ್ಷೆ ಎಂದರು. ಬಳಿಕ ಹೈಕಮಾಂಡ್ ವಿಚಾರವಾಗಿ ಮಾತನಾಡಿ, ಸಚಿವ ಸಂಪುಟದ ಪಟ್ಟಿ ಮಾಡುವ ಸಮಯದಲ್ಲಿ ಕೊಂಚ ಸಮಸ್ಯೆಯಾಗುತ್ತೆ. ಆದರೆ ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿಲ್ಲ. ಎಲ್ಲಾ ರಾಷ್ಟ್ರೀಯ ಪಕ್ಷಗಳಲ್ಲೂ ಸ್ಪಲ್ಪ ಗೊಂದಲ ಇರುತ್ತದೆ. ಇಂದಿರಾ ಗಾಂಧಿ ಕಾಲದಿಂದಲೂ ಇದು ನಡೆಯುತ್ತಿದೆ. ಯಾರಿಗೆ ಸಚಿವ ಸ್ಥಾನ ಕೊಡಬೇಕು, ಹೇಗೆ ಪಕ್ಷವನ್ನು ಬೆಳೆಸಬೇಕು ಎನ್ನುವ ದೃಷ್ಟಿಯಿಂದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹೀಗಾಗಿ ಸ್ಪಲ್ಪ ತಡವಾಗಿದೆ, ಆದರೆ ಹೈಕಮಾಂಡ್ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿಲ್ಲ, ಕಿರಿಕಿರಿ ಮಾಡುತ್ತಿಲ್ಲ ಎಂದು ಹೇಳಿದರು.

ಕಂದಾಯ ಖಾತೆ ಬಗ್ಗೆ ಮಾತನಾಡಿ, ಮಿಸ್‍ಮ್ಯಾಚ್‍ಗಳು, ತಿದ್ದುಪಡಿಗಳು, ಸಾಮಾಜಿಕ ಭದ್ರತೆಗೆ ಹಣಕಾಸು ಬಿಡುಗಡೆ ಬಾಕಿ, ಪಹಣಿ ಸಮಸ್ಯೆ, ಅಕ್ರಮ, ಬರದ ಹಾವಳಿ, ನೆರೆ ಈ ಎಲ್ಲಾ ಒಳಗೊಂಡ ಖಾತೆಯಿದ್ದರೆ ಕೈತುಂಬ ಕೆಲಸ ಮಾಡಬಹುದು. ಹಿಂದಿನ ಸಚಿವರು ಆ ಖಾತೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಕೆಲವೊಂದು ಅಪೀಲ್‍ಗಳು ಮುಗಿಸಲು 5ರಿಂದ 6 ವರ್ಷಗಳ ಕಾಲ ತೆಗೆದುಕೊಂಡಿದ್ದಾರೆ. ಹಲವು ಅಪೀಲ್‍ಗಳು ಇನ್ನೂ ಬಾಕಿ ಉಳಿದಿದೆ. ಇದನ್ನು ಬಗೆಹರಿಸಲು ಪೂರ್ಣ ಅವಧಿ ಕೆಲಸ ಸಿಕ್ಕರೆ ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ. ನಾನು ಸಿಎಂ ಅವರಿಗೆ ಇದೇ ಖಾತೆ ಕೊಡಿ, ಅದೇ ಖಾತೆ ಕೊಡಿ ಎಂದು ಒತ್ತಾಯ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

TAGGED:bjpMadhuswamyrevenuetumkuruYedyurappaಪಬ್ಲಿಕ್ ಟಿವಿಬಿಜೆಪಿ ಸರ್ಕಾರಬೆಂಗಳೂರುಮಾಧುಸ್ವಾಮಿಯಡಿಯೂರಪ್ಪಸಚಿವ ಸಂಪುಟ
Share This Article
Facebook Whatsapp Whatsapp Telegram

Cinema Updates

Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
27 minutes ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
2 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
3 hours ago
dhruva sarja sudeep
ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?
4 hours ago

You Might Also Like

rohit sharma 1
Cricket

ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

Public TV
By Public TV
49 minutes ago
kerala rain
Latest

ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Public TV
By Public TV
1 hour ago
mangaluru rain deaths
Dakshina Kannada

ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

Public TV
By Public TV
2 hours ago
D.K Shivakumar
Bengaluru City

ಕರಾವಳಿ ಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪಕ್ಷದಿಂದ ಪ್ರತ್ಯೇಕ ತಂಡ: ಡಿ.ಕೆ ಶಿವಕುಮಾರ್

Public TV
By Public TV
2 hours ago
kea
Bengaluru City

ಮೇ 31ಕ್ಕೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ – ಕೆಇಎ

Public TV
By Public TV
3 hours ago
Guest Lecturer 1
Bengaluru City

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ಇಡುಗಂಟು ಸೌಲಭ್ಯ – ಸರ್ಕಾರದಿಂದ ಆದೇಶ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?