Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಎಲ್ಲೋ ಜೋಗಪ್ಪ ನಿನ್ನರಮನೆ – ಅಲೆಮಾರಿಯಾದರೇ ಅಂಜನ್ ನಾಗೇಂದ್ರ?

Public TV
Last updated: February 20, 2025 2:54 pm
Public TV
Share
2 Min Read
Yello Jogappa Nin Aramane 2
SHARE

ಕಿರುತೆರೆಯಲ್ಲಿ ಸ್ಟಾರ್ ನಿರ್ದೇಶಕರೆನ್ನಿಸಿಕೊಂಡಿರುವ ಹಯವದನ ನಿರ್ದೇಶನದ ಚೊಚ್ಚಲ ಸಿನಿಮಾ `ಎಲ್ಲೋ ಜೋಗಪ್ಪ ನಿನ್ನರಮನೆ’ (Yello Jogappa Nin Aramane). ಈ ವಾರ ಅಂದರೆ, ಫೆಬ್ರವರಿ 21ರಂದು ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ ಈಗಾಗಲೇ ಟ್ರೈಲರ್ ಮೂಲಕ ಸಿನಿಮಾ ಪ್ರೇಮಿಗಳನ್ನೆಲ್ಲ ಆವರಿಸಿಕೊಂಡಿದೆ.

628A2172 scaled

ಪ್ರೇಮವೂ ಸೇರಿದಂತೆ ಬದುಕಿಗೆ ಹತ್ತಿರಾಗಿರುವ ಎಲ್ಲವನ್ನೂ ಒಳಗೊಂಡಂತೆ ಕಾಣಿಸುವ ಈ ಕಥಾನಕ ಸಿನಿಮಾ ಪ್ರೇಮಿಗಳ (Cinema Lovers) ವಲಯದಲ್ಲೊಂದು ಸಕಾರಾತ್ಮಕ ಚರ್ಚೆಯನ್ನೂ ಹುಟ್ಟುಹಾಕಿದೆ. ಈ ಚಿತ್ರ ನಾಯಕನಾಗಿ, ಭಿನ್ನ ಚಹರೆಗಗಳಿರುವ ವಿಶೇಷ ಪಾತ್ರದಲ್ಲಿ ನಟಿಸಿರುವವರು ಅಂಜನ್ ನಾಗೇಂದ್ರ. ಈ ಹಿಂದೆ ಕಂಬ್ಳಿಹುಳ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿ ಮನ ಗೆದ್ದಿದ್ದ ಅಂಜನ್ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರದಲ್ಲಿ ಸಂಕೀರ್ಣವಾದ ಪಾತ್ರವನ್ನು ಆವಾಹಿಸಿಕೊಂಡಿರೋದು ಟ್ರೈಲರ್ ಮೂಲಕವೇ ಋಜುವಾತಾಗಿದೆ.

628A1451 scaled

ಮೂಲತಃ ಹಾಸನದವರಾದ (Hassan) ಅಂಜನ್ ನಾಗೇಂದ್ರ ಎಳವೆಯಿಂದಲೇ ರಂಗಭೂಮಿಯಲ್ಲಿ ಪಳಗಿಕೊಂಡಿರುವ ನಟ. ಇವರ ತಂದೆ ನಾರಾಯಣ್ ಕೂಡಾ ರಂಗಭೂಮಿಯಲ್ಲಿ ಹೆಸರಾಗಿರುವವರು. ಪ್ರೈಮರಿ ಶಾಲಾ ದಿನಗಳಲ್ಲಿಯೇ ಬಣ್ಣ ಹಚ್ಚಿದ ಅಂಜನ್ ಪಾಲಿಗೆ ನಟನೆ ಎಂಬುದು ಕರತಲಾಮಲಕವಾಗಿತ್ತು. ವಿಶೇಷವೆಂದರೆ, ಶಾಲಾ ಕಾಲೇಜು ಹಂತದವರೆಗೂ ಸಿನಿಮಾ ನಟನಾಗಬೇಕೆಂಬ ಕನಸೇನೂ ಅವರಲ್ಲಿರಲಿಲ್ಲ. ಎಂಜಿನಿಯರಿಂಗ್ ಪದವೀಧರರಾದ ಅಂಜನ್ ಕಾಲೇಜು ವ್ಯಾಸಂಗ ನಡೆಸುತ್ತಿರುವಾಗ ಒತ್ತಾಯ ಮಾಡಿ ಸಿನಿಮಾ ಒಂದರ ಆಡಿಷನ್ನಿಗೆ ತೆರಳುವಂತತೆ ಮಾಡಿದ್ದರಂತೆ. ಆ ಕ್ಷಣದಲ್ಲಿಯೇ ಎಲ್ಲರೂ ತನ್ನೊಳಗಿನ ನಟನನ್ನು ಗುರುತಿಸುತ್ತಿದ್ದಾರೆಂಬ ಮನವರಿಕೆಯಾಗಿ, ಆ ಮೇಲಿಂದ ನಟನೆಯತ್ತ ಆಕರ್ಷಿತರಾಗಿದ್ದವರು ಅಂಜನ್.

628A5246 scaled

ಎಂಜಿನಿಯರಿಂಗ್ ಪದವಿ ಮುಗಿಸಿಕೊಂಡು ಸಿನಿಮಾ ರಂಗದತ್ತ ಹೊರಳಿಕೊಂಡಿದ್ದ ಅಂಜನ್ ಎರಡು ವರ್ಷದ ಗಡುವು ವಿಧಿಸಿಕೊಂಡಿದ್ದರಂತೆ. ಪ್ರಯತ್ನಗಳಾಚೆಗೂ ಆ ಎರಡು ವರ್ಷಗಳಲ್ಲಿ ಏನೂ ಸಾಧ್ಯವಾಗಿರಲಿಲ್ಲ. ಕಡೆಗೂ ಲಾಕ್ ಡೌನ್ ಕಾಲದಲ್ಲಿ ಕಂಬ್ಳಿಹುಳ ಚಿತ್ರದ ನಾಯಕನಾಗೋ ಅವಕಾಶ ಬಂದೊದಗಿತ್ತು. ಅದೇ ಚಿತ್ರದ ಪ್ರೀಮಿಯರ್ ಶೋಗೆ ಬಂದಿದ್ದ ಹಯವದನ ಅದಾಗಲೇ ರೆಡಿಯಾಗಿದ್ದ ಕಥೆಗೆ ಅಂಜನ್ ನಾಯಕನಾಗೋದು ಪಕ್ಕಾ ಎಂಬಂಥಾ ನಿರ್ಧಾರ ಮಾಡಿದಂತಿದ್ದರು. ಕಂಬ್ಳಿಹುಳ ಚಿತ್ರ ನೋಡಿದ ನಂತರ ಅವರೊಳಗೆ ಅಂಜನ್ ನಟನೆಯ ಕಸುವಿನ ಬಗೆಗೊಂದು ನಂಬಿಕೆ ಮೂಡಿಕೊಂಡಿತ್ತು. ಆ ನಂತರ ಕಥಾ ಎಳೆ ಹೇಳಿದ್ದ ಹಯವದನ ಅವರು ರಿಹರ್ಸಲ್ಲಿಗೂ ಅಂಜನ್‌ರನ್ನು ತಯಾರುಗೊಳಿಸಿದ್ದರು.

628A5162 scaled

ಬೇರೆಯದ್ದೇ ತೆರನಾದ ಕಥೆ ಸಿಕ್ಕಿ, ಭಿನ್ನ ಬಗೆಯ ಪಾತ್ರ ಮಾಡಬೇಕೆಂಬ ತುಡಿತ ಹೊಂದಿದ್ದ ಅಂಜನ್ ಪಾಲಿಗೆ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರದ ಮೂಲಕ ಅದು ಸಾಧ್ಯವಾಗಿದೆ. ಕುಟುಂಬ ಸಮೇತರಾಗಿ ಕೂತು ನೋಡುವಂಥಾ, ಎಲ್ಲ ವರ್ಗದ ಪ್ರೇಕ್ಷಕರಿಗೂ ಹಿಡಿಸುವಂಥಾ ಈ ಸಿನಿಮಾ ಭಾಗವಾಗಿಒರುವ ಬಗ್ಗೆ ಅಂಜನ್ ಅವರೊಳಗೊಂದು ಹೆಮ್ಮೆ ಇದೆ. ಈ ಸಿನಿಮಾ ಮೂಲಕ ನಾಯಕ ನಟನಾಗಿ ತನ್ನ ಬದುಕಿನ ದಿಕ್ಕು ಬದಲಾದೀತೆಂಬ ತುಂಬು ನಂಬಿಕೆಯೂ ಅವರಲ್ಲಿದ್ದಂತಿದೆ. ಈ ಚಿತ್ರದ ಚಿತ್ರೀಕರಣದುದ್ದಕ್ಕೂ ಭಾರತವನ್ನಿಡೀ ಸುತ್ತುವ ಅವಕಾಶ ಅವರ ಪಾಲಿಗೆ ಒದಗಿ ಬಂದಿದೆ. ಸಾಕಷ್ಟು ರಿಸ್ಕು ತೆಗೆದುಕೊಂಡು, ಅತ್ಯಂತ ನೈಜವಾಗಿ ಪಾತ್ರಕ್ಕೆ ಜೀವ ತುಂಬಿರುವ ಖುಷಿಯೂ ಅವರಲ್ಲಿದೆ.

Yello Jogappa Nin Aramane

ಇಡೀ ಭಾರತದ ಅತ್ಯಂತ ಅಪರೂಪದ, ಸುಂದರ ಲೊಕೇಷನ್ನುಗಳಲ್ಲಿ ಈ ಸಿನಿಮಾ ಚಿತ್ರೀಕರಣಗೊಂಡಿದೆ. ಟ್ರೈಲರಿನಲ್ಲಿ ಕಂಡಂಥಾ ತಾಜಾ ತಾಜಾ ದೃಶ್ಯಗಳು ಚಿತ್ರದುದ್ದಕ್ಕೂ ಪ್ರೇಕ್ಷಕರನ್ನು ಚಕಿತಗೊಳಿಸಲಿವೆ ಎಂಬ ಭರವಸೆಯೂ ಅಂಜನ್ ನಾಗೇಂದ್ರ ಅವರಲ್ಲಿದೆ. ಪವನ್ ಶಿಮಿಕೇರಿ ಮತ್ತು ಸಿಂಧು ಹಯವದನ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸೃಜನ್ ರಾಘವೇಂದ್ರ, ಚೇತನ್, ಹಯವದನ ಚಿತ್ರಕಥೆ, ವೇಣು ಹಸ್ರಾಳಿ ಸಂಭಾಷಣೆ, ನಟರಾಜು ಮದ್ದಾಲ ಛಾಯಾಗ್ರಹಣ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಶಿವಪ್ರಸಾದ್ ಸಂಗೀತ ನಿರ್ದೇಶನದೊಂದಿಗೆ ಮೂಡಿ ಬಂದಿರುವ ಈ ಚಿತ್ರ ಈ ವಾರ ಅಂದರೆ, ಫೆಬ್ರವರಿ 21ರಂದು ತೆರೆಗಾಣಲಿದೆ.

TAGGED:'ಎಲ್ಲೋ ಜೋಗಪ್ಪ ನಿನ್ನರಮನೆ'Anjan NagendraHayavadanaSanjana DossVenya raiYello Jogappa Nin Aramaneವೆನ್ಯಾ ರೈಹಯವದನ
Share This Article
Facebook Whatsapp Whatsapp Telegram

Cinema Updates

yash mother 1 2
ಯಶ್‌ಗಿಂತ ರಾಧಿಕಾ ಸಖತ್ ಕಿಲಾಡಿ: ಸೊಸೆ ಬಗ್ಗೆ ಮಾತಾಡಿದ ನಿರ್ಮಾಪಕಿ ಪುಷ್ಪ
7 hours ago
vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
8 hours ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
8 hours ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
9 hours ago

You Might Also Like

mumbai indians
Cricket

IPL: 121 ಕ್ಕೆ ಡೆಲ್ಲಿ ಆಲೌಟ್‌ – ಪ್ಲೇ-ಆಫ್‌ಗೆ ಮುಂಬೈ ಲಗ್ಗೆ

Public TV
By Public TV
4 hours ago
IndiGo Flight Damege
Latest

ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ಹಾನಿ – ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಎಮರ್ಜೆನ್ಸಿ

Public TV
By Public TV
4 hours ago
Narendra Modi
Latest

ಮೇ 22ಕ್ಕೆ ಬಿಕನೇರ್ ವಾಯುನೆಲೆಗೆ ಪ್ರಧಾನಿ ಮೋದಿ ಭೇಟಿ

Public TV
By Public TV
4 hours ago
Karnataka elephants to andhra pradesh
Bengaluru City

ಆಂಧ್ರಕ್ಕೆ 4 ಕುಮ್ಕಿ ಆನೆಗಳನ್ನು ಹಸ್ತಾಂತರಿಸಿದ ಕರ್ನಾಟಕ

Public TV
By Public TV
5 hours ago
m.a.saleem
Bengaluru City

ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ

Public TV
By Public TV
6 hours ago
lokayukta raid 1
Bengaluru City

NOC ನೀಡಲು 10 ಲಕ್ಷಕ್ಕೆ ಬೇಡಿಕೆ – ಬೆಂಗಳೂರಲ್ಲಿ ‘ಲೋಕಾ’ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?