Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲೋ ಜೋಗಪ್ಪ ನಿನ್ನರಮನೆ – ಅಲೆಮಾರಿಯಾದರೇ ಅಂಜನ್ ನಾಗೇಂದ್ರ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಎಲ್ಲೋ ಜೋಗಪ್ಪ ನಿನ್ನರಮನೆ – ಅಲೆಮಾರಿಯಾದರೇ ಅಂಜನ್ ನಾಗೇಂದ್ರ?

Cinema

ಎಲ್ಲೋ ಜೋಗಪ್ಪ ನಿನ್ನರಮನೆ – ಅಲೆಮಾರಿಯಾದರೇ ಅಂಜನ್ ನಾಗೇಂದ್ರ?

Public TV
Last updated: February 20, 2025 2:54 pm
Public TV
Share
2 Min Read
Yello Jogappa Nin Aramane 2
SHARE

ಕಿರುತೆರೆಯಲ್ಲಿ ಸ್ಟಾರ್ ನಿರ್ದೇಶಕರೆನ್ನಿಸಿಕೊಂಡಿರುವ ಹಯವದನ ನಿರ್ದೇಶನದ ಚೊಚ್ಚಲ ಸಿನಿಮಾ `ಎಲ್ಲೋ ಜೋಗಪ್ಪ ನಿನ್ನರಮನೆ’ (Yello Jogappa Nin Aramane). ಈ ವಾರ ಅಂದರೆ, ಫೆಬ್ರವರಿ 21ರಂದು ಬಿಡುಗಡೆಗೊಳ್ಳುತ್ತಿರುವ ಈ ಸಿನಿಮಾ ಈಗಾಗಲೇ ಟ್ರೈಲರ್ ಮೂಲಕ ಸಿನಿಮಾ ಪ್ರೇಮಿಗಳನ್ನೆಲ್ಲ ಆವರಿಸಿಕೊಂಡಿದೆ.

628A2172 scaled

ಪ್ರೇಮವೂ ಸೇರಿದಂತೆ ಬದುಕಿಗೆ ಹತ್ತಿರಾಗಿರುವ ಎಲ್ಲವನ್ನೂ ಒಳಗೊಂಡಂತೆ ಕಾಣಿಸುವ ಈ ಕಥಾನಕ ಸಿನಿಮಾ ಪ್ರೇಮಿಗಳ (Cinema Lovers) ವಲಯದಲ್ಲೊಂದು ಸಕಾರಾತ್ಮಕ ಚರ್ಚೆಯನ್ನೂ ಹುಟ್ಟುಹಾಕಿದೆ. ಈ ಚಿತ್ರ ನಾಯಕನಾಗಿ, ಭಿನ್ನ ಚಹರೆಗಗಳಿರುವ ವಿಶೇಷ ಪಾತ್ರದಲ್ಲಿ ನಟಿಸಿರುವವರು ಅಂಜನ್ ನಾಗೇಂದ್ರ. ಈ ಹಿಂದೆ ಕಂಬ್ಳಿಹುಳ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿ ಮನ ಗೆದ್ದಿದ್ದ ಅಂಜನ್ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರದಲ್ಲಿ ಸಂಕೀರ್ಣವಾದ ಪಾತ್ರವನ್ನು ಆವಾಹಿಸಿಕೊಂಡಿರೋದು ಟ್ರೈಲರ್ ಮೂಲಕವೇ ಋಜುವಾತಾಗಿದೆ.

628A1451 scaled

ಮೂಲತಃ ಹಾಸನದವರಾದ (Hassan) ಅಂಜನ್ ನಾಗೇಂದ್ರ ಎಳವೆಯಿಂದಲೇ ರಂಗಭೂಮಿಯಲ್ಲಿ ಪಳಗಿಕೊಂಡಿರುವ ನಟ. ಇವರ ತಂದೆ ನಾರಾಯಣ್ ಕೂಡಾ ರಂಗಭೂಮಿಯಲ್ಲಿ ಹೆಸರಾಗಿರುವವರು. ಪ್ರೈಮರಿ ಶಾಲಾ ದಿನಗಳಲ್ಲಿಯೇ ಬಣ್ಣ ಹಚ್ಚಿದ ಅಂಜನ್ ಪಾಲಿಗೆ ನಟನೆ ಎಂಬುದು ಕರತಲಾಮಲಕವಾಗಿತ್ತು. ವಿಶೇಷವೆಂದರೆ, ಶಾಲಾ ಕಾಲೇಜು ಹಂತದವರೆಗೂ ಸಿನಿಮಾ ನಟನಾಗಬೇಕೆಂಬ ಕನಸೇನೂ ಅವರಲ್ಲಿರಲಿಲ್ಲ. ಎಂಜಿನಿಯರಿಂಗ್ ಪದವೀಧರರಾದ ಅಂಜನ್ ಕಾಲೇಜು ವ್ಯಾಸಂಗ ನಡೆಸುತ್ತಿರುವಾಗ ಒತ್ತಾಯ ಮಾಡಿ ಸಿನಿಮಾ ಒಂದರ ಆಡಿಷನ್ನಿಗೆ ತೆರಳುವಂತತೆ ಮಾಡಿದ್ದರಂತೆ. ಆ ಕ್ಷಣದಲ್ಲಿಯೇ ಎಲ್ಲರೂ ತನ್ನೊಳಗಿನ ನಟನನ್ನು ಗುರುತಿಸುತ್ತಿದ್ದಾರೆಂಬ ಮನವರಿಕೆಯಾಗಿ, ಆ ಮೇಲಿಂದ ನಟನೆಯತ್ತ ಆಕರ್ಷಿತರಾಗಿದ್ದವರು ಅಂಜನ್.

628A5246 scaled

ಎಂಜಿನಿಯರಿಂಗ್ ಪದವಿ ಮುಗಿಸಿಕೊಂಡು ಸಿನಿಮಾ ರಂಗದತ್ತ ಹೊರಳಿಕೊಂಡಿದ್ದ ಅಂಜನ್ ಎರಡು ವರ್ಷದ ಗಡುವು ವಿಧಿಸಿಕೊಂಡಿದ್ದರಂತೆ. ಪ್ರಯತ್ನಗಳಾಚೆಗೂ ಆ ಎರಡು ವರ್ಷಗಳಲ್ಲಿ ಏನೂ ಸಾಧ್ಯವಾಗಿರಲಿಲ್ಲ. ಕಡೆಗೂ ಲಾಕ್ ಡೌನ್ ಕಾಲದಲ್ಲಿ ಕಂಬ್ಳಿಹುಳ ಚಿತ್ರದ ನಾಯಕನಾಗೋ ಅವಕಾಶ ಬಂದೊದಗಿತ್ತು. ಅದೇ ಚಿತ್ರದ ಪ್ರೀಮಿಯರ್ ಶೋಗೆ ಬಂದಿದ್ದ ಹಯವದನ ಅದಾಗಲೇ ರೆಡಿಯಾಗಿದ್ದ ಕಥೆಗೆ ಅಂಜನ್ ನಾಯಕನಾಗೋದು ಪಕ್ಕಾ ಎಂಬಂಥಾ ನಿರ್ಧಾರ ಮಾಡಿದಂತಿದ್ದರು. ಕಂಬ್ಳಿಹುಳ ಚಿತ್ರ ನೋಡಿದ ನಂತರ ಅವರೊಳಗೆ ಅಂಜನ್ ನಟನೆಯ ಕಸುವಿನ ಬಗೆಗೊಂದು ನಂಬಿಕೆ ಮೂಡಿಕೊಂಡಿತ್ತು. ಆ ನಂತರ ಕಥಾ ಎಳೆ ಹೇಳಿದ್ದ ಹಯವದನ ಅವರು ರಿಹರ್ಸಲ್ಲಿಗೂ ಅಂಜನ್‌ರನ್ನು ತಯಾರುಗೊಳಿಸಿದ್ದರು.

628A5162 scaled

ಬೇರೆಯದ್ದೇ ತೆರನಾದ ಕಥೆ ಸಿಕ್ಕಿ, ಭಿನ್ನ ಬಗೆಯ ಪಾತ್ರ ಮಾಡಬೇಕೆಂಬ ತುಡಿತ ಹೊಂದಿದ್ದ ಅಂಜನ್ ಪಾಲಿಗೆ ಎಲ್ಲೋ ಜೋಗಪ್ಪ ನಿನ್ನರಮನೆ ಚಿತ್ರದ ಮೂಲಕ ಅದು ಸಾಧ್ಯವಾಗಿದೆ. ಕುಟುಂಬ ಸಮೇತರಾಗಿ ಕೂತು ನೋಡುವಂಥಾ, ಎಲ್ಲ ವರ್ಗದ ಪ್ರೇಕ್ಷಕರಿಗೂ ಹಿಡಿಸುವಂಥಾ ಈ ಸಿನಿಮಾ ಭಾಗವಾಗಿಒರುವ ಬಗ್ಗೆ ಅಂಜನ್ ಅವರೊಳಗೊಂದು ಹೆಮ್ಮೆ ಇದೆ. ಈ ಸಿನಿಮಾ ಮೂಲಕ ನಾಯಕ ನಟನಾಗಿ ತನ್ನ ಬದುಕಿನ ದಿಕ್ಕು ಬದಲಾದೀತೆಂಬ ತುಂಬು ನಂಬಿಕೆಯೂ ಅವರಲ್ಲಿದ್ದಂತಿದೆ. ಈ ಚಿತ್ರದ ಚಿತ್ರೀಕರಣದುದ್ದಕ್ಕೂ ಭಾರತವನ್ನಿಡೀ ಸುತ್ತುವ ಅವಕಾಶ ಅವರ ಪಾಲಿಗೆ ಒದಗಿ ಬಂದಿದೆ. ಸಾಕಷ್ಟು ರಿಸ್ಕು ತೆಗೆದುಕೊಂಡು, ಅತ್ಯಂತ ನೈಜವಾಗಿ ಪಾತ್ರಕ್ಕೆ ಜೀವ ತುಂಬಿರುವ ಖುಷಿಯೂ ಅವರಲ್ಲಿದೆ.

Yello Jogappa Nin Aramane

ಇಡೀ ಭಾರತದ ಅತ್ಯಂತ ಅಪರೂಪದ, ಸುಂದರ ಲೊಕೇಷನ್ನುಗಳಲ್ಲಿ ಈ ಸಿನಿಮಾ ಚಿತ್ರೀಕರಣಗೊಂಡಿದೆ. ಟ್ರೈಲರಿನಲ್ಲಿ ಕಂಡಂಥಾ ತಾಜಾ ತಾಜಾ ದೃಶ್ಯಗಳು ಚಿತ್ರದುದ್ದಕ್ಕೂ ಪ್ರೇಕ್ಷಕರನ್ನು ಚಕಿತಗೊಳಿಸಲಿವೆ ಎಂಬ ಭರವಸೆಯೂ ಅಂಜನ್ ನಾಗೇಂದ್ರ ಅವರಲ್ಲಿದೆ. ಪವನ್ ಶಿಮಿಕೇರಿ ಮತ್ತು ಸಿಂಧು ಹಯವದನ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸೃಜನ್ ರಾಘವೇಂದ್ರ, ಚೇತನ್, ಹಯವದನ ಚಿತ್ರಕಥೆ, ವೇಣು ಹಸ್ರಾಳಿ ಸಂಭಾಷಣೆ, ನಟರಾಜು ಮದ್ದಾಲ ಛಾಯಾಗ್ರಹಣ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಶಿವಪ್ರಸಾದ್ ಸಂಗೀತ ನಿರ್ದೇಶನದೊಂದಿಗೆ ಮೂಡಿ ಬಂದಿರುವ ಈ ಚಿತ್ರ ಈ ವಾರ ಅಂದರೆ, ಫೆಬ್ರವರಿ 21ರಂದು ತೆರೆಗಾಣಲಿದೆ.

TAGGED:'ಎಲ್ಲೋ ಜೋಗಪ್ಪ ನಿನ್ನರಮನೆ'Anjan NagendraHayavadanaSanjana DossVenya raiYello Jogappa Nin Aramaneವೆನ್ಯಾ ರೈಹಯವದನ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
3 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
4 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
6 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?