ಬೆಂಗಳೂರು: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯೋಜಿಸಿದ್ದ ಯೋಗಥಾನ್ ವಿಶ್ವದಾಖಲೆ (World Records) ಸೃಷ್ಟಿಸಿದ್ದಕ್ಕೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ (Dr. Narayana Gowda) ಸಂತಸ ವ್ಯಕ್ತಪಡಿಸಿದ್ದಾರೆ.
ಇಂದು ರಾಜ್ಯಾದ್ಯಂತ 6 ಲಕ್ಷಕ್ಕೂ ಅಧಿಕ ಜನರು ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮೂಲಕ ವಿಶ್ವದಾಖಲೆ ಬರೆಯಲಾಗಿದೆ. ಈ ಮೂಲಕ ರಾಜಸ್ಥಾನದಲ್ಲಿ 1.60 ಲಕ್ಷ ಜನರ ಮೂಲಕ ಸೃಷ್ಟಿಯಾಗಿದ್ದ ದಾಖಲೆಯನ್ನು ಕರ್ನಾಟಕ ಅಳಿಸಿ ಹಾಕಿದೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಆಡಳಿತದಲ್ಲಿ ಭರವಸೆ ಉಚಿತ, ಸಾಲ ಖಚಿತ: ಸಚಿವ ಸುನಿಲ್ ಕುಮಾರ್ ವ್ಯಂಗ್ಯ
ಭಾನುವಾರ ಬೆಳಗ್ಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಡಾ.ನಾರಾಯಣಗೌಡ ಯೋಗಥಾನ್ ಉದ್ಘಾಟಿಸಿದರು. ಗಿನ್ನಿಸ್ ದಾಖಲೆ ಸೃಷ್ಟಿ ಮಾಡುವ ಹಿನ್ನೆಲೆಯಲ್ಲಿ ಏಕಕಾಲದಲ್ಲಿ ಐದು ಲಕ್ಷ ಜನರು ಸೇರಿ ಯೋಗ ಮಾಡುವ ಗುರಿ ಹೊಂದಲಾಗಿತ್ತು. ಸರ್ಕಾರದ ಈ ಪ್ರಯತ್ನ ವ್ಯಾಪಕ ಬೆಂಬಲ ಸಿಕ್ಕಿದ್ದು, ಆರೂವರೆ ಲಕ್ಷಕ್ಕೂ ಹೆಚ್ಚು ಜನರು ಇಂದಿನ ಯೋಗಥಾನ್ನಲ್ಲಿ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ಯಶಸ್ವಿಗೊಳಿಸಿದ ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳು, ಸ್ವಯಂ ಸೇವಕರು, ಸರ್ಕಾರಿ ನೌಕರರು, ಅಧಿಕಾರಿಗಳು, ಯೋಗಪಟುಗಳು ಸೇರಿದಂತೆ ಎಲ್ಲರಿಗೂ ಅಭಿನಂದನೆಗಳನ್ನು ಸಚಿವರು ಸಲ್ಲಿಸಿದ್ದಾರೆ. ಇದನ್ನೂ ಓದಿ: ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸುವುದಿಲ್ಲ: ಬೊಮ್ಮಾಯಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k