Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮನದ ಕಡಲು’ ಚಿತ್ರಕ್ಕಾಗಿ ಮತ್ತೆ ‘ಮುಂಗಾರು ಮಳೆ’ ನಿರ್ಮಾಪಕನ ಜೊತೆ ಕೈಜೋಡಿಸಿದ ಯೋಗರಾಜ್‌ ಭಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಮನದ ಕಡಲು’ ಚಿತ್ರಕ್ಕಾಗಿ ಮತ್ತೆ ‘ಮುಂಗಾರು ಮಳೆ’ ನಿರ್ಮಾಪಕನ ಜೊತೆ ಕೈಜೋಡಿಸಿದ ಯೋಗರಾಜ್‌ ಭಟ್‌

Cinema

‘ಮನದ ಕಡಲು’ ಚಿತ್ರಕ್ಕಾಗಿ ಮತ್ತೆ ‘ಮುಂಗಾರು ಮಳೆ’ ನಿರ್ಮಾಪಕನ ಜೊತೆ ಕೈಜೋಡಿಸಿದ ಯೋಗರಾಜ್‌ ಭಟ್‌

Public TV
Last updated: November 28, 2024 4:11 pm
Public TV
Share
3 Min Read
yogaraj bhat
SHARE

‘ಮುಂಗಾರು ಮಳೆ’ (Mungaru Male) ಸಿನಿಮಾ ನಿರ್ಮಿಸಿದ್ದ ಇ. ಕೃಷ್ಣಪ್ಪ ಅವರು ನಿರ್ದೇಶಕ ಯೋಗರಾಜ್ ಭಟ್ (Yogaraj) ಜೊತೆ ಮತ್ತೊಮ್ಮೆ ಕೈಜೋಡಿಸಿದ್ದಾರೆ. ಹಲವು ವರ್ಷಗಳ ಬಳಿಕ ಮತ್ತೆ ಈ ಜೋಡಿ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದ ‘ಮನದ ಕಡಲು’ (Manada Kadalu) ಸಿನಿಮಾಗೆ ಯೋಗರಾಜ್‌ ಭಟ್‌ ಆಕ್ಷನ್‌ ಕಟ್‌ ಹೇಳಿದ್ದಾರೆ. ಇದನ್ನೂ ಓದಿ:ನಿಮ್ಮ ಪ್ರೀತಿಯನ್ನು ಹೃದಯದಲ್ಲಿ ಬಚ್ಚಿಟ್ಟುಕೊಳ್ಳುತ್ತೀನಿ- ರಶ್ಮಿಕಾರನ್ನು ಹೊಗಳಿದ ಅಲ್ಲು ಅರ್ಜುನ್

yogaraj bhat 1

ಈ ಸಿನಿಮಾದಲ್ಲಿ ನಟ ಸುಮುಖ (Sumukha) ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಜಿ.ಗಂಗಾಧರ್ ಈ ಚಿತ್ರದ ಸಹ ನಿರ್ಮಾಪಕರಾಗಿ ಸಾಥ್‌ ನೀಡಿದ್ದಾರೆ. ಬೆಂಗಳೂರಿನ ಅರಮನೆ ಆವರಣದಲ್ಲಿ ಬಿರುಸಿನ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರತಂಡ ಮಾಧ್ಯಮದ ಮಿತ್ರರನ್ನು ಚಿತ್ರೀಕರಣ ವೀಕ್ಷಣೆ ಹಾಗೂ ಪತ್ರಿಕಾಗೋಷ್ಠಿಗೆ ಆತ್ಮೀಯವಾಗಿ ಆಹ್ವಾನಿಸಿತ್ತು. ಚಿತ್ರದ ಶೀರ್ಷಿಕೆ ಸಹ ಇದೇ ಸಂದರ್ಭದಲ್ಲಿ ಅನಾವರಣವಾಯಿತು ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

yogaraj bhat 2

‘ಮುಂಗಾರು ಮಳೆ’ ನಂತರ ಇ. ಕೃಷ್ಣಪ್ಪ ರವರ ನಿರ್ಮಾಣದಲ್ಲಿ ಇನ್ನೊಂದು ಚಿತ್ರ ನಿರ್ದೇಶನ ಮಾಡುವ ಯೋಚನೆ ಇತ್ತು ಎಂದು ಮಾತನಾಡಿದ ನಿರ್ದೇಶಕ ಯೋಗರಾಜ್ ಭಟ್ ಅವರು ಕೃಷ್ಣಪ್ಪ ಅವರು ರಾಜಕೀಯದಲ್ಲಿ ಮತ್ತು ನಾನು ಬೇರೆ ಸಿನಿಮಾಗಳಲ್ಲಿ ಬ್ಯುಸಿಯಾದೆ. ಕೊರೋನ ನಂತರ ಮತ್ತೆ ಒಟ್ಟಿಗೆ ಚಿತ್ರ ಮಾಡುವುದು ಎಂದು ನಿರ್ಧಾರವಾಯಿತು. ಹೊಸಬರ ಜೊತೆಗೆ ಸಿನಿಮಾ ಮಾಡೋಣ ಎಂದು ಕೃಷ್ಣಪ್ಪ ಹೇಳಿದರು. ಹೊಸಬರ ಜೊತೆಗೆ ಸಿನಿಮಾ ಮಾಡೋದು ಸುಲಭವಲ್ಲ. ಈ ಚಿತ್ರಕ್ಕಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಅದರಲ್ಲೂ ಕರ್ನಾಟಕದ 12 ಜಿಲ್ಲೆಗಳಲ್ಲಿ ಚಿತ್ರೀಕರಣ ಮಾಡಿದ್ದೇವೆ. ಮಹಾರಾಷ್ಟ್ರದ ಮುರುಡ್‍ ಜಂಜೀರ ಎಂಬ ಸಮುದ್ರದ ಮಧ್ಯದ ಕೋಟೆಯಲ್ಲಿ ಚಿತ್ರೀಕರಣ ಮಾಡಿದ್ದೇವೆ. ಅದಕ್ಕೆ 15 ರೀತಿಯ ಪರ್ಮಿಷನ್‍ ಬೇಕು. ಅದೊಂದು ಯುದ್ಧ ಮಾಡಿದ ಅನುಭವ. ಬಿಸಿಲು, ರಣಮಳೆಯ ನಡುವೆ ಚಿತ್ರೀಕರಣ ಸುಲಭವಲ್ಲ. ಆದರೆ, ಬಹಳ ಚೆನ್ನಾಗಿ ಬಂದಿದೆ. ಇಲ್ಲಿ ರಂಗಾಯಣ ರಘು ಆದಿವಾಸಿಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಗಾಗಿ ಹೊಸ ಭಾಷೆ ಸೃಷ್ಟಿ ಮಾಡಿದ್ದೇವೆ. ರಂಗಾಯಣ ರಘು ಸಹ ಬಹಳ ಚೆನ್ನಾಗಿ ತಮ್ಮ ಪಾತ್ರವನ್ನು ನಿರ್ವಹಿಸಿದ್ದಾರೆ. ಈಗಾಗಲೇ ಶೇ. 95ರಷ್ಟು ಚಿತ್ರೀಕರಣ ಮುಗಿದಿದೆ ಎಂದರು.

rangayana raghu

ಕಥೆ ಚೆನ್ನಾಗಿರಬೇಕು. ಕನ್ನಡಿಗರು ಮೆಚ್ಚುವ ಹಾಗೆ ಮಾಡಬೇಕು. ಇದೊಂದು ಪ್ರಾಮಾಣಿಕ ಪ್ರಯತ್ನ, ಕನ್ನಡದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿವೆ. ಅವರನ್ನು ಸರಿಯಾಗಿ ಗುರುತಿಸುವ ಕೆಲಸವಾಗುತ್ತಿಲ್ಲ. ಹೊಸಬರಿಗೆ ಒಳ್ಳೆಯದಾಗಬೇಕು. ಇದು ಸಹ ‘ಮುಂಗಾರು ಮಳೆ’ ಮಟ್ಟಕ್ಕೆ ಹೋಗಬೇಕು. ಈ ಮಧ್ಯೆ ರಾಜಕಾರಣಕ್ಕೆ ಹೋಗಿದ್ದರಿಂದ ಚಿತ್ರ ಮಾಡಲು ಸಾಧ್ಯವಾಗಿರಲಿಲ್ಲ. ಯೋಗರಾಜ್‍ ಭಟ್‍ ಸಹ ಬ್ಯುಸಿಯಾಗಿದ್ದರು. ಈಗ ಅದು ಸಾಧ್ಯವಾಗಿದೆ ಎಂದರು ನಿರ್ಮಾಪಕ ಇ.ಕೃಷ್ಣಪ್ಪ.

sumukha 1 1

‘ಮುಂಗಾರು ಮಳೆ’ ಚಿತ್ರದಿಂದ ಇ.ಕೃಷ್ಣಪ್ಪ ಅವರ ನಿರ್ಮಾಣದ ಎಲ್ಲಾ ಚಿತ್ರಗಳಲ್ಲೂ ಸಹ ನಿರ್ಮಾಪಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಯೋಗರಾಜ್ ಭಟ್ ಅವರ ಜೊತೆಗೆ ಹದಿನೆಂಟು ವರ್ಷಗಳ ನಂತರ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ ಎನ್ನುತ್ತಾರೆ ಸಹ ನಿರ್ಮಾಪಕ ಗಂಗಾಧರ್.

rangayana raghu

ನಟ ಎಂದರೆ ಜಿಮ್‍ನಿಂದ ಬರಬೇಕು ಎಂಬಂತಾಗಿದೆ. ಅವರಿಗೆ ಭಾಷೆ-ಭಾವ ಗೊತ್ತಿರುವುದಿಲ್ಲ. ಸಿನಿಮಾಗೆ ಬೇಕಾಗಿದ್ದು ಅಭಿನಯ ಅನ್ನೋದನ್ನೇ ಅವರು ಮರೆಯುತ್ತಾರೆ. ಆದರೆ, ಸುಮುಖನಿಗೆ ಅಂಥ ಯಾವ ರೋಗ ಇಲ್ಲ. ಇವನು ಓದಿಕೊಂಡಿದ್ದಾನೆ. ಸಿನಿಮಾ ಬಗ್ಗೆ ತಿಳಿದುಕೊಂಡಿದ್ದಾನೆ. ಚೆನ್ನಾಗಿ ನಟಿಸುತ್ತಾನೆ, ಯೋಗರಾಜ್‌ ಭಟ್ ಮತ್ತು ಕೃಷ್ಣಪ್ಪ ಹೊಸಬರ ಜೊತೆಗೆ ಕೆಲಸ ಮಾಡಿದ್ದಾರೆ. ಪ್ಯಾನ್‍ ಇಂಡಿಯಾ ಸಿನಿಮಾ ಬೇಡ, ಕನ್ನಡ ಸಿನಿಮಾ ಮಾಡೋಣ ಎಂದರಂತೆ ಕೃಷ್ಣಪ್ಪ. ಹೌದು, ಎಲ್ಲರೂ ಅಲ್ಲಿಗೆ ಹೋದರೆ ಇಲ್ಲಿ ಮನೆ ನೋಡಿಕೊಳ್ಳೋದು ಯಾರು ಎಂದರು ನಟ ರಂಗಾಯಣ ರಘು.

ಯೋಗರಾಜ್‍ ಭಟ್‍ ಬಹಳ ಮುತ್ತುವರ್ಜಿಯಿಂದ ನನ್ನ ಪಾತ್ರ ಸೃಷ್ಟಿಸಿದ್ದಾರೆ. ಈ ಚಿತ್ರದಲ್ಲಿ ನಾನು 100 ವರ್ಷದ ಮುದುಕನ ಪಾತ್ರ ಮಾಡಿದ್ದೇನೆ. ವಯಸ್ಸಾಯ್ತು ಅಂತ ತಲೆ ಆಡಿಸುವ ಹಾಗಿಲ್ಲ, ಮೈ ಬಗ್ಗಿಸುವ ಹಾಗಿಲ್ಲ. ಸಾತ್ವಿಕವಾಗಿ ತನ್ನ ವಯಸ್ಸನ್ನು ಅಭಿನಯದ ಮೂಲಕ ಹೇಳುವಂತಹ ಪಾತ್ರ. ಬಹಳ ಚೆನ್ನಾಗಿದೆ ಎಂದು ನಟ ದತ್ತಣ್ಣ ತಿಳಿಸಿದರು.

ಈಗಿನ ಕಾಲದ ನವಯುವಕನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈಗಿನವರು ಜೀವನದಲ್ಲಿ ಏನು ಮಾಡಬೇಕು? ಎಂಬ ಗೊಂದಲದಲ್ಲಿರುತ್ತಾರೆ. ಅದು ಈ ಚಿತ್ರದಲ್ಲಿದೆ. ಇದೊಂದು ದೊಡ್ಡ ಜವಾಬ್ದಾರಿ. ಯೋಗರಾಜ್‍ ಭಟ್‍ ಅವರ ಜೊತೆಗೆ ತುಂಬಾ ಕಲಿಯೋದಿದೆ. ಪ್ರತಿದಿನ ಅವರು ಹೊಸ ಆಲೋಚನೆಯೊಂದಿಗೆ ಬರುತ್ತಾರೆ. ಹೊಸ ಪ್ರಯೋಗ ಮಾಡುತ್ತಾರೆ ಎಂದು ನಾಯಕ ಸುಮುಖ ಹೇಳಿದರು. ನಾಯಕಿಯರಾದ ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ಛಾಯಾಗ್ರಾಹಕ ಸಂತೋಷ್‍ ರೈ ಪಾತಾಜೆ, ಗೀತರಚನೆಕಾರ ಜಯಂತ್‍ ಕಾಯ್ಕಿಣಿ, ಪ್ರತಾಪ್‍ ರಾವ್‍ ಮುಂತಾದವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

TAGGED:manada kadalusumukhaYogaraj Bhatಇ. ಕೃಷ್ಣಪ್ಪಮನದ ಕಡಲುಯೋಗರಾಜ್ ಭಟ್ಸುಮುಖ
Share This Article
Facebook Whatsapp Whatsapp Telegram

Cinema news

bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows
BBK 12
ಬಿಗ್‌ಬಾಸ್ ವಿನ್ನರ್‌ಗೆ 370000000 ವೋಟ್ – ಗೆಲ್ಲೋದ್ಯಾರು?
Latest Top Stories TV Shows
Narayana Gowda
BBK 12 | ಅಶ್ವಿನಿ ಗೌಡ ಪರ ನಾರಾಯಣ ಗೌಡ, ಗಿಲ್ಲಿ ಪರ ಪ್ರವೀಣ್‌ ಶೆಟ್ಟಿ ಬ್ಯಾಟಿಂಗ್‌
Bengaluru City Cinema Districts Karnataka Latest Main Post TV Shows
Gilli Rakshita Raghu Kavya
ಬಿಗ್‌ ಬಾಸ್‌ ಸ್ಪರ್ಧಿಗಳ ಪರ ರಾಜಕೀಯ ನಾಯಕರ ಮತಯಾಚನೆ – ಯಾರಿಗೆ ಯಾರ ಬೆಂಬಲ?
Bengaluru City Cinema Districts Karnataka Latest Mandya Top Stories TV Shows Udupi

You Might Also Like

stop rape
Latest

ಮಣಿಪುರದಲ್ಲಿ 2 ವರ್ಷಗಳ ಹಿಂದೆ ಕಿಡ್ನ್ಯಾಪ್‌ ಆಗಿ ಗ್ಯಾಂಗ್‌ ರೇಪ್‌ಗೆ ಒಳಗಾಗಿದ್ದ ಕುಕಿ ಮಹಿಳೆ ಸಾವು

Public TV
By Public TV
19 minutes ago
trump maga
Latest

ಗ್ರೀನ್‌ಲ್ಯಾಂಡ್‌ ವಶಪಡಿಸಿಕೊಳ್ಳುವ ಪ್ಲ್ಯಾನ್‌ಗೆ ವಿರೋಧ – ಡೆನ್ಮಾರ್ಕ್, ಯುಕೆ, ಫ್ರಾನ್ಸ್ ಮೇಲೆ 10% ಸುಂಕ ವಿಧಿಸಿದ ಟ್ರಂಪ್‌

Public TV
By Public TV
2 hours ago
Tiger Sere
Chamarajanagar

ಚಾಮರಾಜನಗರ | ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – 10 ತಿಂಗಳ ಮರಿ ಸೆರೆ

Public TV
By Public TV
2 hours ago
karwar women suicide case psi suspend
Latest

JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌; ಕದ್ರಾ ಠಾಣೆ PSI ಅಮಾನತು

Public TV
By Public TV
3 hours ago
Young woman dies treated by nurse compounder in Chikkamagaluru
Chikkamagaluru

ಚಿಕ್ಕಮಗಳೂರು | ಮರ ಬಿದ್ದು ಗಾಯಗೊಂಡ ಯುವತಿಗೆ ನರ್ಸ್, ಕಾಂಪೌಂಡರ್‌ನಿಂದ ಚಿಕಿತ್ಸೆ – ಶಿವಮೊಗ್ಗಕ್ಕೆ ಸಾಗಿಸುವಾಗ ಸಾವು

Public TV
By Public TV
3 hours ago
Fish 65
Food

ಥಟ್ ಅಂತಾ ಮಾಡಿ ಫಿಶ್ ಕಬಾಬ್!

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?