Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!

Bengaluru City

ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!

Public TV
Last updated: April 3, 2018 7:54 am
Public TV
Share
3 Min Read
Yogaraj Bhat 1
SHARE

– ಚುನಾವಣಾ ಗೀತೆಯ ಚಿತ್ರೀಕರಣದಲ್ಲಿ ಯೋಗರಾಜ್ ಭಟ್ ಮತ್ತು ತಂಡ ಬ್ಯುಸಿ

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಡೆಯುವಂತೆ ಮಾಡಲು ಮತ್ತು ಮತದಾರರನ್ನು ಜಾಗೃತಿಗೊಳಿಸುವ ಸಲುವಾಗಿ ಚುನಾವಣಾ ಆಯೋಗ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಬಹಳ ಸುಲಭವಾಗಿ ಸಾಮಾನ್ಯ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗ ಯೋಗರಾಜ್ ಭಟ್ಟರ ಗೀತೆಯ ಮೊರೆ ಹೋಗಿದೆ.

ಹೌದು. ಕನ್ನಡದ ಚಿತ್ರರಂಗದ ಜನಪ್ರಿಯ ನಿರ್ದೇಶಕ, ತಮ್ಮ ಸಾಲುಗಳ ಮೂಲಕ ಪ್ರೇಕ್ಷಕರನ್ನು ಸೆಳೆಯಬಲ್ಲ ಪ್ರಸಿದ್ಧ ಗೀತ ಸಾಹಿತಿ ಯೋಗರಾಜ್ ಭಟ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಲು ಹೊಸ ಹಾಡೊಂದನ್ನು ರಚಿಸಿದ್ದಾರೆ. ಈ ಮೂಲಕ ಮೊಟ್ಟಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆ 2018 ತನ್ನದೇ ಆದ ಗೀತೆ ಹೊಂದಿದ ಖ್ಯಾತಿಗೆ ಪಾತ್ರವಾಗಲಿದೆ.

Yogaraj Bhat 5

ಯೋಗರಾಜ್ ಭಟ್ ಬರೆದ ಈ ಚುನಾವಣಾ ಗೀತೆಗೆ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮಾಡಲಿದ್ದು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಮತ್ತು ಇತರ ಗಾಯಕರು ಹಾಡಲಿದ್ದಾರೆ. ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಈ ಚುನಾವಣಾ ಗೀತೆಯನ್ನು ಕಳೆದ ಐದು ದಿನಗಳಿಂದ ರಾಜ್ಯದಾದ್ಯಂತ ಚಿತ್ರೀಕರಿಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಕಂಠೀರವ ಸ್ಟೇಡಿಯಂ, ವಿಧಾನಸೌಧ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಿಸಲಾಯಿತು. ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ, ಯಕ್ಷಗಾನ ಹೀಗೆ ಕರ್ನಾಟಕದ ಸಂಸ್ಕೃತಿಯನ್ನು ಪ್ರತಿನಿಧಿಸುವ ನೂರಾರು ಸಾಂಸ್ಕೃತಿಕ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

Yogaraj Bhat 4

ಇನ್ನು ಈ ಚುನಾವಣಾ ಗೀತೆಯ ಬಗ್ಗೆ ಮಾತನಾಡಿರುವ ಯೋಗರಾಜ್ ಭಟ್, `ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರ ಪ್ರಯತ್ನದಿಂದ ಈ ಗೀತೆ ಮೂಡಿಬರುತ್ತಿದೆ. ಇದರ ಹಿಂದಿನ ಕೀರ್ತಿ ಅವರಿಗೆ ಸಲ್ಲಬೇಕು. ಅವರು ಈ ಚುನಾವಣಾ ಗೀತೆ ಸಿದ್ಧಪಡಿಸಲು ಉತ್ಸಾಹ ತೋರಿಸಿದ್ದರಿಂದ ನಾವು ಮಾಡಲು ಮುಂದಾದೆವು. ಇದರ ಚಿತ್ರೀಕರಣಕ್ಕೆ ವಿಕಲಚೇತನರು, ಆದಿವಾಸಿಗಳು, ತೃತೀಯ ಲಿಂಗಿಗಳು ಮತ್ತು ಯುವ ಮತದಾರರನ್ನು ಬಳಸಿಕೊಳ್ಳುತ್ತಿದ್ದೇವೆ. ಈ ಪ್ರಾಜೆಕ್ಟ್ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಹಲವು ವರ್ಷಗಳಿಂದ ನಾನು ಸಮಾಜಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಏನಾದರೂ ಮಾಡಬೇಕೆಂಬ ಬಯಕೆ ಹೊಂದಿದ್ದಾರೆ. ಈ ಚುನಾವಣಾ ಗೀತೆ ಅದನ್ನು ಈಡೇರಿಸಿದೆ. ಈ ಗೀತೆ ವಿಶಿಷ್ಟ ಪರಿಕಲ್ಪನೆಯಾಗಿದ್ದು ಜನರಿಗೆ ನೇರ ಭಾಷಣದ ಮೂಲಕ ನೀಡಲಾಗದ ಉತ್ತೇಜನವನ್ನು ಈ ಗೀತೆ ನೀಡುತ್ತದೆ. ಗೀತೆಗಳು ಸದಾ ಗ್ರಹಿಸಲು ಸುಲಭ ಮತ್ತು ಮನಸ್ಸಿನಲ್ಲಿ ದೀರ್ಘ ಕಾಲ ಉಳಿಯುವುದರಿಂದ ಇದು ಸಾಧ್ಯವಾಗುತ್ತದೆ. ಆದ್ದರಿಂದ ಜನರು ಚಿತ್ರಗೀತೆಗಳನ್ನು ಬಹಳ ಕಾಲ ನೆನಪಿನಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಈ ಚುನಾವಣಾ ಗೀತೆ ಪ್ರತಿಯೊಬ್ಬರ ಮನದಲ್ಲೂ ಉಳಿದು ಅವರಿಗೆ ಪಾರದರ್ಶಕ ಚುನಾವಣೆಗಳ ಕುರಿತು ಅರಿವು ಮೂಡಿಸುತ್ತದೆ’ ಎಂದರು.

Yogaraj Bhat 3

ಈ ಗೀತೆಯ ಬಗ್ಗೆ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಈ ಚುನಾವಣಾ ಗೀತೆ ಆಯೋಗದ ಧ್ಯೇಯ- ಒಳಗೊಳ್ಳುವ, ಸುಗಮ ಮತ್ತು ನೈತಿಕ ಚುನಾವಣೆಗಳ ಅನುಸಾರ ಇದೆ. ಈ ಯೋಜನೆ ಕುರಿತು ನಾವು ಬಹಳ ಕಾಲ ಸಂಶೋಧನೆ ನಡೆಸಿದ್ದೇವೆ. ಈ ಗೀತೆ ಜಾಗೃತ ಮತ್ತು ನೈತಿಕ ಮತದಾನವನ್ನು ಉತ್ತೇಜಿಸಲಿದೆ ಮತ್ತು ಇದು ದೊಡ್ಡ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಮತದಾನ ಮಾಡಲು ಪ್ರೇರೇಪಿಸುತ್ತದೆ. ಈ ಗೀತೆಯನ್ನು ರೇಡಿಯೊ, ಟೀವಿ, ಚಲನಚಿತ್ರಗಳು ಮತ್ತಿತರೆ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಿದ್ದೇವೆ ಎಂದರು.

ಒಟ್ಟಾರೆ ಯೋಗರಾಜ್ ಭಟ್ಟರ ಈ ಚುನಾವಣಾ ಗೀತೆಯಲ್ಲಿ ಹೊಸ ಥರದ ಧಮ್, ರಿದಮ್ ಎರಡೂ ಇದ್ದು ಭಟ್ಟರ ಇತರೆ ಗೀತೆಗಳಂತೆ ಈ ಚುನಾವಣಾ ಗೀತೆ ಕೂಡಾ ಜನಪ್ರಿಯವಾಗುವ ನಿರೀಕ್ಷೆ ಇದೆ. ಈ ಚುನಾವಣಾ ಗೀತೆ ಮತದಾರರ ಮೇಲೆ ಎಷ್ಟು ಪರಿಣಾಮ ಬೀರಲಿದೆ ಎಂಬುದು ಕೆಲ ದಿನಗಳಲ್ಲೇ ಗೊತ್ತಾಗಲಿದೆ.

Yogaraj Bhat 2

DZtCdkOXUAE T3t

 

TAGGED:election commissionImran SardariaKarnataka ElectionKarnataka Election 2018namma electionSanjeev kumarState Chief Election OfficerYogaraj Bhatಇಮ್ರಾನ್ ಸರ್ದಾರಿಯಾಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಚುನಾವಣಾ ಆಯೋಗನಮ್ಮ ಎಲೆಕ್ಷನ್ಯೋಗರಾಜ್ ಭಟ್ರಾಜ್ಯ ಮುಖ್ಯ ಚುನಾವಣಾಧಿಕಾರಿಸಂಜೀವ್ ಕುಮಾರ್
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
27 minutes ago
Karwar
Crime

JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌ – ಆರೋಪಿ ಎಸ್ಕೇಪ್‌

Public TV
By Public TV
28 minutes ago
Saifullah Kasuri
Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
By Public TV
46 minutes ago
Priyank Kharge 2
Districts

JDS ಪಾರ್ಟಿಯನ್ನೇ ಮಾರಾಟಕ್ಕಿಟ್ಟಿದ್ದಾರೆ – ಪ್ರಿಯಾಂಕ್‌ ಖರ್ಗೆ ಲೇವಡಿ

Public TV
By Public TV
51 minutes ago
gadag
Districts

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Public TV
By Public TV
1 hour ago
Assistant Professor Annapoorna
Dharwad

ಅಂಡಮಾನ್‌ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಪ್ರೊಫೆಸರ್ ಹೃದಯಾಘಾತಕ್ಕೆ ಬಲಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?