Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!

Bengaluru City

ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!

Public TV
Last updated: April 3, 2018 7:54 am
Public TV
Share
3 Min Read
Yogaraj Bhat 1
SHARE

– ಚುನಾವಣಾ ಗೀತೆಯ ಚಿತ್ರೀಕರಣದಲ್ಲಿ ಯೋಗರಾಜ್ ಭಟ್ ಮತ್ತು ತಂಡ ಬ್ಯುಸಿ

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಡೆಯುವಂತೆ ಮಾಡಲು ಮತ್ತು ಮತದಾರರನ್ನು ಜಾಗೃತಿಗೊಳಿಸುವ ಸಲುವಾಗಿ ಚುನಾವಣಾ ಆಯೋಗ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಬಹಳ ಸುಲಭವಾಗಿ ಸಾಮಾನ್ಯ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗ ಯೋಗರಾಜ್ ಭಟ್ಟರ ಗೀತೆಯ ಮೊರೆ ಹೋಗಿದೆ.

ಹೌದು. ಕನ್ನಡದ ಚಿತ್ರರಂಗದ ಜನಪ್ರಿಯ ನಿರ್ದೇಶಕ, ತಮ್ಮ ಸಾಲುಗಳ ಮೂಲಕ ಪ್ರೇಕ್ಷಕರನ್ನು ಸೆಳೆಯಬಲ್ಲ ಪ್ರಸಿದ್ಧ ಗೀತ ಸಾಹಿತಿ ಯೋಗರಾಜ್ ಭಟ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಲು ಹೊಸ ಹಾಡೊಂದನ್ನು ರಚಿಸಿದ್ದಾರೆ. ಈ ಮೂಲಕ ಮೊಟ್ಟಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆ 2018 ತನ್ನದೇ ಆದ ಗೀತೆ ಹೊಂದಿದ ಖ್ಯಾತಿಗೆ ಪಾತ್ರವಾಗಲಿದೆ.

Yogaraj Bhat 5

ಯೋಗರಾಜ್ ಭಟ್ ಬರೆದ ಈ ಚುನಾವಣಾ ಗೀತೆಗೆ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮಾಡಲಿದ್ದು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಮತ್ತು ಇತರ ಗಾಯಕರು ಹಾಡಲಿದ್ದಾರೆ. ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಈ ಚುನಾವಣಾ ಗೀತೆಯನ್ನು ಕಳೆದ ಐದು ದಿನಗಳಿಂದ ರಾಜ್ಯದಾದ್ಯಂತ ಚಿತ್ರೀಕರಿಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಕಂಠೀರವ ಸ್ಟೇಡಿಯಂ, ವಿಧಾನಸೌಧ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಿಸಲಾಯಿತು. ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ, ಯಕ್ಷಗಾನ ಹೀಗೆ ಕರ್ನಾಟಕದ ಸಂಸ್ಕೃತಿಯನ್ನು ಪ್ರತಿನಿಧಿಸುವ ನೂರಾರು ಸಾಂಸ್ಕೃತಿಕ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

Yogaraj Bhat 4

ಇನ್ನು ಈ ಚುನಾವಣಾ ಗೀತೆಯ ಬಗ್ಗೆ ಮಾತನಾಡಿರುವ ಯೋಗರಾಜ್ ಭಟ್, `ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರ ಪ್ರಯತ್ನದಿಂದ ಈ ಗೀತೆ ಮೂಡಿಬರುತ್ತಿದೆ. ಇದರ ಹಿಂದಿನ ಕೀರ್ತಿ ಅವರಿಗೆ ಸಲ್ಲಬೇಕು. ಅವರು ಈ ಚುನಾವಣಾ ಗೀತೆ ಸಿದ್ಧಪಡಿಸಲು ಉತ್ಸಾಹ ತೋರಿಸಿದ್ದರಿಂದ ನಾವು ಮಾಡಲು ಮುಂದಾದೆವು. ಇದರ ಚಿತ್ರೀಕರಣಕ್ಕೆ ವಿಕಲಚೇತನರು, ಆದಿವಾಸಿಗಳು, ತೃತೀಯ ಲಿಂಗಿಗಳು ಮತ್ತು ಯುವ ಮತದಾರರನ್ನು ಬಳಸಿಕೊಳ್ಳುತ್ತಿದ್ದೇವೆ. ಈ ಪ್ರಾಜೆಕ್ಟ್ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಹಲವು ವರ್ಷಗಳಿಂದ ನಾನು ಸಮಾಜಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಏನಾದರೂ ಮಾಡಬೇಕೆಂಬ ಬಯಕೆ ಹೊಂದಿದ್ದಾರೆ. ಈ ಚುನಾವಣಾ ಗೀತೆ ಅದನ್ನು ಈಡೇರಿಸಿದೆ. ಈ ಗೀತೆ ವಿಶಿಷ್ಟ ಪರಿಕಲ್ಪನೆಯಾಗಿದ್ದು ಜನರಿಗೆ ನೇರ ಭಾಷಣದ ಮೂಲಕ ನೀಡಲಾಗದ ಉತ್ತೇಜನವನ್ನು ಈ ಗೀತೆ ನೀಡುತ್ತದೆ. ಗೀತೆಗಳು ಸದಾ ಗ್ರಹಿಸಲು ಸುಲಭ ಮತ್ತು ಮನಸ್ಸಿನಲ್ಲಿ ದೀರ್ಘ ಕಾಲ ಉಳಿಯುವುದರಿಂದ ಇದು ಸಾಧ್ಯವಾಗುತ್ತದೆ. ಆದ್ದರಿಂದ ಜನರು ಚಿತ್ರಗೀತೆಗಳನ್ನು ಬಹಳ ಕಾಲ ನೆನಪಿನಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಈ ಚುನಾವಣಾ ಗೀತೆ ಪ್ರತಿಯೊಬ್ಬರ ಮನದಲ್ಲೂ ಉಳಿದು ಅವರಿಗೆ ಪಾರದರ್ಶಕ ಚುನಾವಣೆಗಳ ಕುರಿತು ಅರಿವು ಮೂಡಿಸುತ್ತದೆ’ ಎಂದರು.

Yogaraj Bhat 3

ಈ ಗೀತೆಯ ಬಗ್ಗೆ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಈ ಚುನಾವಣಾ ಗೀತೆ ಆಯೋಗದ ಧ್ಯೇಯ- ಒಳಗೊಳ್ಳುವ, ಸುಗಮ ಮತ್ತು ನೈತಿಕ ಚುನಾವಣೆಗಳ ಅನುಸಾರ ಇದೆ. ಈ ಯೋಜನೆ ಕುರಿತು ನಾವು ಬಹಳ ಕಾಲ ಸಂಶೋಧನೆ ನಡೆಸಿದ್ದೇವೆ. ಈ ಗೀತೆ ಜಾಗೃತ ಮತ್ತು ನೈತಿಕ ಮತದಾನವನ್ನು ಉತ್ತೇಜಿಸಲಿದೆ ಮತ್ತು ಇದು ದೊಡ್ಡ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಮತದಾನ ಮಾಡಲು ಪ್ರೇರೇಪಿಸುತ್ತದೆ. ಈ ಗೀತೆಯನ್ನು ರೇಡಿಯೊ, ಟೀವಿ, ಚಲನಚಿತ್ರಗಳು ಮತ್ತಿತರೆ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಿದ್ದೇವೆ ಎಂದರು.

ಒಟ್ಟಾರೆ ಯೋಗರಾಜ್ ಭಟ್ಟರ ಈ ಚುನಾವಣಾ ಗೀತೆಯಲ್ಲಿ ಹೊಸ ಥರದ ಧಮ್, ರಿದಮ್ ಎರಡೂ ಇದ್ದು ಭಟ್ಟರ ಇತರೆ ಗೀತೆಗಳಂತೆ ಈ ಚುನಾವಣಾ ಗೀತೆ ಕೂಡಾ ಜನಪ್ರಿಯವಾಗುವ ನಿರೀಕ್ಷೆ ಇದೆ. ಈ ಚುನಾವಣಾ ಗೀತೆ ಮತದಾರರ ಮೇಲೆ ಎಷ್ಟು ಪರಿಣಾಮ ಬೀರಲಿದೆ ಎಂಬುದು ಕೆಲ ದಿನಗಳಲ್ಲೇ ಗೊತ್ತಾಗಲಿದೆ.

Yogaraj Bhat 2

DZtCdkOXUAE T3t

 

TAGGED:election commissionImran SardariaKarnataka ElectionKarnataka Election 2018namma electionSanjeev kumarState Chief Election OfficerYogaraj Bhatಇಮ್ರಾನ್ ಸರ್ದಾರಿಯಾಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಚುನಾವಣಾ ಆಯೋಗನಮ್ಮ ಎಲೆಕ್ಷನ್ಯೋಗರಾಜ್ ಭಟ್ರಾಜ್ಯ ಮುಖ್ಯ ಚುನಾವಣಾಧಿಕಾರಿಸಂಜೀವ್ ಕುಮಾರ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
20 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
37 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
53 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
1 hour ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?