Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!

Bengaluru City

ರಾಜ್ಯದಲ್ಲಿ ಮತದಾನ ಜಾಗೃತಿಗೆ ಭಟ್ಟರ ತಾಳ-ಮೇಳ..!

Public TV
Last updated: April 3, 2018 7:54 am
Public TV
Share
3 Min Read
Yogaraj Bhat 1
SHARE

– ಚುನಾವಣಾ ಗೀತೆಯ ಚಿತ್ರೀಕರಣದಲ್ಲಿ ಯೋಗರಾಜ್ ಭಟ್ ಮತ್ತು ತಂಡ ಬ್ಯುಸಿ

ಬೆಂಗಳೂರು: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ನಡೆಯುವಂತೆ ಮಾಡಲು ಮತ್ತು ಮತದಾರರನ್ನು ಜಾಗೃತಿಗೊಳಿಸುವ ಸಲುವಾಗಿ ಚುನಾವಣಾ ಆಯೋಗ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಬಹಳ ಸುಲಭವಾಗಿ ಸಾಮಾನ್ಯ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗ ಯೋಗರಾಜ್ ಭಟ್ಟರ ಗೀತೆಯ ಮೊರೆ ಹೋಗಿದೆ.

ಹೌದು. ಕನ್ನಡದ ಚಿತ್ರರಂಗದ ಜನಪ್ರಿಯ ನಿರ್ದೇಶಕ, ತಮ್ಮ ಸಾಲುಗಳ ಮೂಲಕ ಪ್ರೇಕ್ಷಕರನ್ನು ಸೆಳೆಯಬಲ್ಲ ಪ್ರಸಿದ್ಧ ಗೀತ ಸಾಹಿತಿ ಯೋಗರಾಜ್ ಭಟ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮಾಡುವಂತೆ ಪ್ರೇರೇಪಿಸಲು ಹೊಸ ಹಾಡೊಂದನ್ನು ರಚಿಸಿದ್ದಾರೆ. ಈ ಮೂಲಕ ಮೊಟ್ಟಮೊದಲ ಬಾರಿಗೆ ಕರ್ನಾಟಕ ವಿಧಾನಸಭಾ ಚುನಾವಣೆ 2018 ತನ್ನದೇ ಆದ ಗೀತೆ ಹೊಂದಿದ ಖ್ಯಾತಿಗೆ ಪಾತ್ರವಾಗಲಿದೆ.

Yogaraj Bhat 5

ಯೋಗರಾಜ್ ಭಟ್ ಬರೆದ ಈ ಚುನಾವಣಾ ಗೀತೆಗೆ ಖ್ಯಾತ ಸಂಗೀತ ನಿರ್ದೇಶಕ ವಿ. ಹರಿಕೃಷ್ಣ ಮಾಡಲಿದ್ದು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಮತ್ತು ಇತರ ಗಾಯಕರು ಹಾಡಲಿದ್ದಾರೆ. ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಈ ಹಾಡಿಗೆ ಕೊರಿಯೋಗ್ರಫಿ ಮಾಡುತ್ತಿದ್ದಾರೆ. ಈ ಚುನಾವಣಾ ಗೀತೆಯನ್ನು ಕಳೆದ ಐದು ದಿನಗಳಿಂದ ರಾಜ್ಯದಾದ್ಯಂತ ಚಿತ್ರೀಕರಿಸಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಕಂಠೀರವ ಸ್ಟೇಡಿಯಂ, ವಿಧಾನಸೌಧ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಿಸಲಾಯಿತು. ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ, ಯಕ್ಷಗಾನ ಹೀಗೆ ಕರ್ನಾಟಕದ ಸಂಸ್ಕೃತಿಯನ್ನು ಪ್ರತಿನಿಧಿಸುವ ನೂರಾರು ಸಾಂಸ್ಕೃತಿಕ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

Yogaraj Bhat 4

ಇನ್ನು ಈ ಚುನಾವಣಾ ಗೀತೆಯ ಬಗ್ಗೆ ಮಾತನಾಡಿರುವ ಯೋಗರಾಜ್ ಭಟ್, `ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರ ಪ್ರಯತ್ನದಿಂದ ಈ ಗೀತೆ ಮೂಡಿಬರುತ್ತಿದೆ. ಇದರ ಹಿಂದಿನ ಕೀರ್ತಿ ಅವರಿಗೆ ಸಲ್ಲಬೇಕು. ಅವರು ಈ ಚುನಾವಣಾ ಗೀತೆ ಸಿದ್ಧಪಡಿಸಲು ಉತ್ಸಾಹ ತೋರಿಸಿದ್ದರಿಂದ ನಾವು ಮಾಡಲು ಮುಂದಾದೆವು. ಇದರ ಚಿತ್ರೀಕರಣಕ್ಕೆ ವಿಕಲಚೇತನರು, ಆದಿವಾಸಿಗಳು, ತೃತೀಯ ಲಿಂಗಿಗಳು ಮತ್ತು ಯುವ ಮತದಾರರನ್ನು ಬಳಸಿಕೊಳ್ಳುತ್ತಿದ್ದೇವೆ. ಈ ಪ್ರಾಜೆಕ್ಟ್ ನನ್ನ ಹೃದಯಕ್ಕೆ ಹತ್ತಿರವಾಗಿದೆ. ಹಲವು ವರ್ಷಗಳಿಂದ ನಾನು ಸಮಾಜಕ್ಕೆ ಮತ್ತು ಪ್ರಜಾಪ್ರಭುತ್ವಕ್ಕೆ ಏನಾದರೂ ಮಾಡಬೇಕೆಂಬ ಬಯಕೆ ಹೊಂದಿದ್ದಾರೆ. ಈ ಚುನಾವಣಾ ಗೀತೆ ಅದನ್ನು ಈಡೇರಿಸಿದೆ. ಈ ಗೀತೆ ವಿಶಿಷ್ಟ ಪರಿಕಲ್ಪನೆಯಾಗಿದ್ದು ಜನರಿಗೆ ನೇರ ಭಾಷಣದ ಮೂಲಕ ನೀಡಲಾಗದ ಉತ್ತೇಜನವನ್ನು ಈ ಗೀತೆ ನೀಡುತ್ತದೆ. ಗೀತೆಗಳು ಸದಾ ಗ್ರಹಿಸಲು ಸುಲಭ ಮತ್ತು ಮನಸ್ಸಿನಲ್ಲಿ ದೀರ್ಘ ಕಾಲ ಉಳಿಯುವುದರಿಂದ ಇದು ಸಾಧ್ಯವಾಗುತ್ತದೆ. ಆದ್ದರಿಂದ ಜನರು ಚಿತ್ರಗೀತೆಗಳನ್ನು ಬಹಳ ಕಾಲ ನೆನಪಿನಲ್ಲಿಟ್ಟುಕೊಳ್ಳಲು ಸಾಧ್ಯವಾಗುತ್ತದೆ. ಈ ಚುನಾವಣಾ ಗೀತೆ ಪ್ರತಿಯೊಬ್ಬರ ಮನದಲ್ಲೂ ಉಳಿದು ಅವರಿಗೆ ಪಾರದರ್ಶಕ ಚುನಾವಣೆಗಳ ಕುರಿತು ಅರಿವು ಮೂಡಿಸುತ್ತದೆ’ ಎಂದರು.

Yogaraj Bhat 3

ಈ ಗೀತೆಯ ಬಗ್ಗೆ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಈ ಚುನಾವಣಾ ಗೀತೆ ಆಯೋಗದ ಧ್ಯೇಯ- ಒಳಗೊಳ್ಳುವ, ಸುಗಮ ಮತ್ತು ನೈತಿಕ ಚುನಾವಣೆಗಳ ಅನುಸಾರ ಇದೆ. ಈ ಯೋಜನೆ ಕುರಿತು ನಾವು ಬಹಳ ಕಾಲ ಸಂಶೋಧನೆ ನಡೆಸಿದ್ದೇವೆ. ಈ ಗೀತೆ ಜಾಗೃತ ಮತ್ತು ನೈತಿಕ ಮತದಾನವನ್ನು ಉತ್ತೇಜಿಸಲಿದೆ ಮತ್ತು ಇದು ದೊಡ್ಡ ಸಂಖ್ಯೆಯಲ್ಲಿ ಮತದಾರರು ಆಗಮಿಸಿ ಮತದಾನ ಮಾಡಲು ಪ್ರೇರೇಪಿಸುತ್ತದೆ. ಈ ಗೀತೆಯನ್ನು ರೇಡಿಯೊ, ಟೀವಿ, ಚಲನಚಿತ್ರಗಳು ಮತ್ತಿತರೆ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಿದ್ದೇವೆ ಎಂದರು.

ಒಟ್ಟಾರೆ ಯೋಗರಾಜ್ ಭಟ್ಟರ ಈ ಚುನಾವಣಾ ಗೀತೆಯಲ್ಲಿ ಹೊಸ ಥರದ ಧಮ್, ರಿದಮ್ ಎರಡೂ ಇದ್ದು ಭಟ್ಟರ ಇತರೆ ಗೀತೆಗಳಂತೆ ಈ ಚುನಾವಣಾ ಗೀತೆ ಕೂಡಾ ಜನಪ್ರಿಯವಾಗುವ ನಿರೀಕ್ಷೆ ಇದೆ. ಈ ಚುನಾವಣಾ ಗೀತೆ ಮತದಾರರ ಮೇಲೆ ಎಷ್ಟು ಪರಿಣಾಮ ಬೀರಲಿದೆ ಎಂಬುದು ಕೆಲ ದಿನಗಳಲ್ಲೇ ಗೊತ್ತಾಗಲಿದೆ.

Yogaraj Bhat 2

DZtCdkOXUAE T3t

 

TAGGED:election commissionImran SardariaKarnataka ElectionKarnataka Election 2018namma electionSanjeev kumarState Chief Election OfficerYogaraj Bhatಇಮ್ರಾನ್ ಸರ್ದಾರಿಯಾಕರ್ನಾಟಕ ಚುನಾವಣೆಕರ್ನಾಟಕ ಚುನಾವಣೆ 2018ಚುನಾವಣಾ ಆಯೋಗನಮ್ಮ ಎಲೆಕ್ಷನ್ಯೋಗರಾಜ್ ಭಟ್ರಾಜ್ಯ ಮುಖ್ಯ ಚುನಾವಣಾಧಿಕಾರಿಸಂಜೀವ್ ಕುಮಾರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

01 16
Latest

Video | ಡಿಕೆಶಿ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕಾಫ್‌ – ಆತಂಕಕ್ಕೆ ಒಳಗಾದ ಪ್ರಯಾಣಿಕರು!

Public TV
By Public TV
5 hours ago
Petrol 4
Bagalkot

ಕೊಲ್ಲಿ ಯುದ್ಧದ ಮಧ್ಯೆ ಕರ್ನಾಟಕದಲ್ಲಿ ತೈಲಾತಂಕ – ಡ್ರಮ್, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡ ಜನ

Public TV
By Public TV
5 hours ago
IPL RCB
Bengaluru City

Breaking | 17 ಸಾವಿರ ಕೋಟಿಗೆ ಆರ್‌ಸಿಬಿ ಸೇಲ್‌

Public TV
By Public TV
5 hours ago
Kalaburagi Youth Death Due To Thunder
Districts

ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

Public TV
By Public TV
5 hours ago
Haveri Tomb Of Early Humans Found In Ranebennur
Districts

ರಾಣೇಬೆನ್ನೂರಿನಲ್ಲಿ 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ

Public TV
By Public TV
6 hours ago
Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?