Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಗಾಳಿಪಟ 2’ ಟ್ರೇಲರ್ ಮೂಲಕ ಮತ್ತೊಮ್ಮೆ ಗೆದ್ದ ಯೋಗರಾಜ್ ಭಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಗಾಳಿಪಟ 2’ ಟ್ರೇಲರ್ ಮೂಲಕ ಮತ್ತೊಮ್ಮೆ ಗೆದ್ದ ಯೋಗರಾಜ್ ಭಟ್

Cinema

‘ಗಾಳಿಪಟ 2’ ಟ್ರೇಲರ್ ಮೂಲಕ ಮತ್ತೊಮ್ಮೆ ಗೆದ್ದ ಯೋಗರಾಜ್ ಭಟ್

Public TV
Last updated: August 3, 2022 11:28 am
Public TV
Share
3 Min Read
FotoJet 2 2
SHARE

ಯೋಗರಾಜ್ ಭಟ್ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್ ಹಾಗೂ ಪವನ್ ಕುಮಾರ್ ನಾಯಕರಾಗಿ ಅಭಿನಯಿಸಿರುವ, ರಮೇಶ್ ರೆಡ್ಡಿ ಅವರ ನಿರ್ಮಾಣದ “ಗಾಳಿಪಟ 2” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ರಮೇಶ್ ಅರವಿಂದ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ವಿತರಕರಾದ ವೆಂಕಟ್(ಕೆ.ವಿ.ಎನ್), ಸುಪ್ರೀತ್, ನಿರ್ಮಾಪಕರಾದ ಕೆ.ಮಂಜು, ಸಂಜಯ್ ಗೌಡ, ನಟ ಶ್ರೇಯಸ್ ಕೆ. ಮಂಜು ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭಕೋರಿದರು.

FotoJet 7

“ಗಾಳಿಪಟ ೨” ಚಿತ್ರದ ಟ್ರೇಲರನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಬಿಡುಗಡೆ ಮಾಡಿದರು. ಟ್ರೇಲರ್ ಸಖತಾಗಿದೆ. ಯೋಗರಾಜ್ ಭಟ್ ಹಾಗೂ ಗಣೇಶ್ ಕಾಂಬಿನೇಶನ್ ಮತ್ತೊಮ್ಮೆ ಮೋಡಿ ಮಾಡಲಿದೆ. ದಿಗಂತ್, ಪವನ್ ಹಾಗೂ ನಾಯಕಿಯರು ಎಲ್ಲರೂ ಚೆನ್ನಾಗಿ ನಟಿಸಿದ್ದಾರೆ. ಅದರಲ್ಲೂ ಪವನ್ ತುಂಬಾ ಕ್ಯೂಟಾಗಿ ಕಾಣುತ್ತಾರೆ. ಅರ್ಜುನ್ ಜನ್ಯ ಸಂಗೀತ ಸೊಗಸಾಗಿದೆ. ನನಗೆ ಅವರನ್ನು ನೋಡಿದಾಗ ಎ.ಆರ್.ರೆಹಮಾನ್ ನೆನಪಾಗುತ್ತಾರೆ.‌ ಮುಂದೆ ಅರ್ಜುನ್ ಜನ್ಯ ನಿರ್ದೇಶಿಸುತ್ತಿರುವ “45” ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ರಮೇಶ್ ರೆಡ್ಡಿ ಅವರೆ ಆ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. “ಗಾಳಿಪಟ ೨” ಭರ್ಜರಿ ಯಶಸ್ಸು ಕಾಣಲಿ ಎಂದು ಹಾರೈಸಿದರು ಶಿವರಾಜಕುಮಾರ್. ಇದನ್ನೂ ಓದಿ:ಅಫೇರ್ ಆರೋಪ ಬೆನ್ನಲ್ಲೇ ಧಿಡೀರ್ ಸಂಭಾವನೆ ಹೆಚ್ಚಿಸಿಕೊಂಡ ಪವಿತ್ರಾ ಲೋಕೇಶ್

FotoJet 3 2

ಈ ಚಿತ್ರದ ಸಂಭಾಷಣೆಯೊಂದರಂತೆ ನೋಡುಗರಿಗೆ ಉತ್ತಮ ಮನೋರಂಜನೆ ನೀಡುವ ಚಿತ್ರ ಇದಾಗಲಿದೆ. ಯೋಗರಾಜ್ ಭಟ್ ಹಾಗೂ ಗಣೇಶ್ ಜೋಡಿಯ “ಗಾಳಿಪಟ” ಯಶಸ್ಸು ಕಂಡಿತ್ತು. “ಗಾಳಿಪಟ 2” ಸಹ ಹಾಡುಗಳ ಹಾಗೂ ಟ್ರೇಲರ್ ಮೂಲಕ ಈಗಾಗಲೇ ಗೆದ್ದಿದೆ. ಚಿತ್ರ ಕೂಡ ಭರ್ಜರಿ ಗೆಲವು ಕಾಣಲಿದೆ ಎಂದು ರಮೇಶ್ ಅರವಿಂದ್ ಹಾರೈಸಿದರು. ಎಲ್ಲರೂ ಮಾತನಾಡಿದ್ದಾರೆ. ನಾನು ಇನೇನು ಹೇಳುವುದಿದೆ. ಯೋಗರಾಜ್ ಭಟ್ಟರು ನಿರ್ದೇಶಕರಾಗಿ, ಗೀತರಚನೆಕಾರರಾಗಿ ಹಾಗೂ ಸಂಭಾಷಣೆಕಾರರಾಗೂ ಜನಪ್ರಿಯ. ಅದಕ್ಕೆ ಈ ಚಿತ್ರದ ಟ್ರೇಲರ್ ಸಾಕ್ಷಿ. ಒಳ್ಳೆಯ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರ ಸಮಾಗಮದಲ್ಲಿ ಮೂಡಿಬಂದಿರುವ ಈ ಚಿತ್ರ ಪ್ರಚಂಡ ಯಶಸ್ಸು ಕಾಣಲಿ ಎಂದರು ರಿಯಲ್ ಸ್ಟಾರ್ ಉಪೇಂದ್ರ.

FotoJet 4 2

ನನ್ನ ಹಾಗೂ ಭಟ್ಟರ ಕಾಂಬಿನೇಶನ್ ನಲ್ಲಿ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ನಾನು ಯಾವತ್ತು ಯಾವ ಚಿತ್ರದ ಕುರಿತು  ಅವರಿಗೆ ಫೋನ್ ಮಾಡಿರಲಿಲ್ಲ. ಆದರೆ ಈ ಚಿತ್ರದ ಡಬ್ಬಿಂಗ್ ಆದ ಮೇಲೆ ಫೋನ್ ಮಾಡಿ ಅದ್ಭುತ ಚಿತ್ರ ಮಾಡಿದ್ದೀರಾ ಅಂತ ಹೇಳಿ ಅಭಿನಂದನೆಗಳನ್ನು ತಿಳಿಸಿದೆ. ನಿಜಕ್ಕೂ “ಗಾಳಿಪಟ 2” ತುಂಬಾ ಚೆನ್ನಾಗಿದೆ. ನೀವೆಲ್ಲಾ ನೋಡಿ ಹಾರೈಸಿ ಎಂದರು ಗೋಲ್ಡನ್ ಸ್ಟಾರ್ ಗಣೇಶ್. ರೋಡಿನಲ್ಲಿ ಸಿಗುವ ಸಂಬಂಧ, ರಕ್ತ ಸಂಬಂಧಕ್ಕಿಂತ ಹೆಚ್ಚು ಎಂದು ನಂಬಿರುವವನು ನಾನು. ಆ ಸ್ನೇಹದಿಂದಲೇ ಹದಿನಾಲ್ಕು ವರ್ಷಗಳ ಹಿಂದೆ “ಗಾಳಿಪಟ” ಚಿತ್ರ ನಿರ್ಮಾಣವಾಯಿತು. ಈಗ “ಗಾಳಿಪಟ ೨'” ಸಹ ಅದೇ ಸ್ನೇಹದಿಂದ ನಿರ್ಮಾಣವಾಗಿದೆ. ಕರ್ನಾಟಕದ ಎಲ್ಲಾ ಸ್ನೇಹಿತರು ಆಗಸ್ಟ್‌ 12ರಂದು ಬಿಡುಗಡೆಯಾಗುತ್ತಿರುವ ನಮ್ಮ “ಗಾಳಿಪಟ ೨” ಚಿತ್ರವನ್ನು ನೋಡಿ ಗೆಲಿಸುತ್ತಾರೆ ಎಂಬ ನಂಬಿಕೆಯಿದೆ ಎಂದರು ನಿರ್ದೇಶಕ ಯೋಗರಾಜ್ ಭಟ್.

FotoJet 1 2

ಯೋಗರಾಜ್ ಭಟ್ ಒಳ್ಳೆಯ ಚಿತ್ರ  ಮಾಡಿ ಕೊಟ್ಟಿದ್ದಾರೆ. ಈ ಚಿತ್ರ ಇಷ್ಟು ಚೆನ್ನಾಗಿ ಬರಲು ಚಿತ್ರತಂಡ ತುಂಬಾ ಶ್ರಮಪಟ್ಟಿದೆ. ಎಲ್ಲರಿಗೂ ನನ್ನ ಧನ್ಯವಾದ. ನಮ್ಮ ಸಮಾರಂಭಕ್ಕೆ ಶಿವಣ್ಣ, ಉಪೇಂದ್ರ ಹಾಗೂ ರಮೇಶ್ ಸರ್ ಬಂದಿರುವುದು ನನಗೆ ತುಂಬಾ ಸಂತೋಷವಾಗಿದೆ. ಇವರನೆಲ್ಲಾ ನೋಡಿ ನಾನು “ಗಾಳಿಪಟ ೨” ಚಿತ್ರವನ್ನು ಮರೆತು ಬಿಟ್ಟಿದೆ.  ‌ನಮ್ಮ ಚಿತ್ರಕ್ಕೆ ಹಾರೈಸಲು ಬಂದಿರುವ ಎಲ್ಲರಿಗೂ ತುಂಬು ಹೃದಯದ ಧನ್ಯವಾದ ಎಂದರು ನಿರ್ಮಾಪಕ ರಮೇಶ್ ರೆಡ್ಡಿ. ಚಿತ್ರದಲ್ಲಿ ಅಭಿನಯಿಸಿರುವ ಪವನ್ ಕುಮಾರ್, ಶರ್ಮಿಳಾ ಮಾಂಡ್ರೆ, ನಿಶ್ವಿಕಾ, ವೈಭವಿ, ರಂಗಾಯಣ ರಘು, ಸುಧಾ ಬೆಳವಾಡಿ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ‌ಅರ್ಜುನ್ ಜನ್ಯ ಸಂಗೀತದ ಬಗ್ಗೆ , ಸಂತೋಷ್ ರೈ ಪಾತಾಜೆ ಛಾಯಾಗ್ರಹಣದ ಕುರಿತು ಹಾಗೂ ಧನು ಮಾಸ್ಟರ್ ನೃತ್ಯ ನಿರ್ದೇಶನದ ವಿವರಣೆ ನೀಡಿದರು.

Live Tv
[brid partner=56869869 player=32851 video=960834 autoplay=true]

TAGGED:DiganthGalipata 2ganeshPawan KumarsandalwoodYograj Bhattಗಣೇಶ್ಗಾಳಿಪಟ-2ದಿಗಂತ್ಪವನ್ ಕುಮಾರ್ಯೋಗರಾಜ್ ಭಟ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories

You Might Also Like

Raichur 2
Districts

ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಿದ್ದ ನುಗ್ಗೆ ಪೌಡರ್ – ಉತ್ತಮ ಫಲಿತಾಂಶ ಕಂಡ ಯೋಜನೆಗೆ ಬಜೆಟ್ ಕೊರತೆ

Public TV
By Public TV
23 seconds ago
Madhav Gadgil
Latest

ಖ್ಯಾತ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ

Public TV
By Public TV
7 minutes ago
Tiger Accused
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್‌ – ʻಶಿಕಾರಿʼ ರಾಜ ಗೋವಿಂದ ಅರೆಸ್ಟ್‌

Public TV
By Public TV
47 minutes ago
Donald Trump
Latest

ಅಮೆರಿಕದ ಉತ್ಪನ್ನಗಳನ್ನು ಮಾತ್ರ ವೆನೆಜುವೆಲಾ ಖರೀದಿಸಬೇಕು: ಟ್ರಂಪ್‌ ಕಟ್ಟಪ್ಪಣೆ

Public TV
By Public TV
1 hour ago
Chikkaballapura 1
Chikkaballapur

ಚಿಕ್ಕಬಳ್ಳಾಪುರ | ಅಣ್ಣ-ತಂಗಿಯ ಅಕ್ರಮ ಸಂಬಂಧ – ತಂಗಿ ಸಾವಿನಲ್ಲಿ ಅಂತ್ಯ

Public TV
By Public TV
1 hour ago
udp monkey fever 3
Latest

ಉತ್ತರ ಕನ್ನಡ ಜಿಲ್ಲೆಯಲ್ಲಿ ವರ್ಷದ ಮೊದಲ ಮಂಗನಕಾಯಿಲೆ ಪತ್ತೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?