ಹುಬ್ಬಳ್ಳಿಯಲ್ಲಿ ಉಪರಾಷ್ಟ್ರಪತಿಯಿಂದ ಯೋಗಾಸನ

Public TV
1 Min Read
HBL

ಹುಬ್ಬಳ್ಳಿ: ಇಲ್ಲಿನ ರೇಲ್ವೆ ಮೈದಾನದಲ್ಲಿ ನಡೆಯುತ್ತಿರುವ ಯೋಗಗುರು ಬಾಬಾ ರಾಮ್ ದೇವ್ ಅವರ ಯೋಗ ಚಿಕಿತ್ಸೆ ಮತ್ತು ಧ್ಯಾನ ಶಿಬಿರದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಭಾಗವಹಿಸಿ ಸ್ವತಃ ತಾಡಾಸನ ಪ್ರದರ್ಶಿಸಿದರು.

ಉಪರಾಷ್ಟ್ರಪತಿಗಳ ಸಮ್ಮುಖದಲ್ಲಿ ಬಾಬಾ ರಾಮ್ ದೇವ್ ಅವರು ವೃಕ್ಷಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಮಂಡೂಕಾಸನ, ಧನುರಾಸನ, ಮರ್ಕಟಾಸನ, ಭುಜಂಗಾಸನ ಮತ್ತಿತರ ಯೋಗಾಸನಗಳನ್ನು ಪ್ರದರ್ಶಿಸಿದರು.

3c885375 870f 4fcc 9ab4 f42a778b39ad

ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಬೀದರ್ ಸಂಸದ ಭಗವಂತ ಖೂಬಾ, ವಿಆರ್‍ಎಲ್ ಸಮೂಹ ಸಂಸ್ಥೆಗಳ ಎಂ.ಡಿ ಆನಂದ್ ಸಂಕೇಶ್ವರ, ಪತಂಜಲಿ ಯೋಗ ಸಮಿತಿಯ ಭವರಲಾಲ ಆರ್ಯ ಸೇರಿದಂತೆ ಗಣ್ಯರು ವೇದಿಕೆಯಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *