ಲಕ್ನೋ: ಆಹಾರ ಪದಾರ್ಥಗಳನ್ನು ತಯಾರಿಸುವಾಗ ಉಗುಳುವುದು, ಮೂತ್ರ ಬೆರೆಸುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು, ಆಹಾರ ಕೇಂದ್ರಗಳಲ್ಲಿ ನಿರ್ವಾಹಕರು, ಮಾಲೀಕರು, ವ್ಯವಸ್ಥಾಪಕರ ಹೆಸರು ಮತ್ತು ವಿಳಾಸವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸೂಚಿಸಿದ್ದಾರೆ.
ಬಾಣಸಿಗರು ಮತ್ತು ಪರಿಚಾರಕರು ಮಾಸ್ಕ್ ಮತ್ತು ಕೈಗವಸುಗಳನ್ನು ಧರಿಸಬೇಕು. ಜೊತೆಗೆ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ 2ನೇ ಹಂತದ ಚುನಾವಣೆ- 26 ಕ್ಷೇತ್ರಗಳ 239 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
- Advertisement
ಆಹಾರ ಪದಾರ್ಥಗಳಲ್ಲಿ ಮಾನವ ತ್ಯಾಜ್ಯವನ್ನು ಬೆರೆಸುವುದು ಅಸಹ್ಯಕರವಾಗಿದೆ. ಆಹಾರ ಪದಾರ್ಥಗಳನ್ನು ಮಾನವ ತ್ಯಾಜ್ಯ ಅಥವಾ ಕೊಳಕು ಪದಾರ್ಥಗಳೊಂದಿಗೆ ಕಲಬೆರಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
- Advertisement
ಸೆ.12 ರಂದು, ಸಹರಾನ್ಪುರ ಜಿಲ್ಲೆಯ ಉಪಾಹಾರ ಗೃಹದಲ್ಲಿ ಹದಿಹರೆಯದವರು ರೊಟ್ಟಿಗಳನ್ನು ತಯಾರಿಸುವಾಗ ಉಗುಳುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಘಟನೆಗೆ ಸಂಬಂಧಿಸಿದಂತೆ ಮಾಲೀಕರ ಬಂಧನಕ್ಕೆ ಕಾರಣವಾಯಿತು. ಇದನ್ನೂ ಓದಿ: ತಿರುಮಲನ ಸನ್ನಿಧಿಗೆ 2 ಟ್ರಕ್ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಸರಬರಾಜು
ಕಳೆದ ವಾರ, ಗಾಜಿಯಾಬಾದ್ ಜಿಲ್ಲೆಯ ಜ್ಯೂಸ್ ಮಾರಾಟಗಾರನೊಬ್ಬ ಗ್ರಾಹಕರಿಗೆ ಮೂತ್ರದೊಂದಿಗೆ ಬೆರೆಸಿದ ಹಣ್ಣಿನ ರಸವನ್ನು ನೀಡಿದ್ದಕ್ಕಾಗಿ ಬಂಧಿಸಲಾಯಿತು. ಜೂನ್ನಲ್ಲಿ ನೋಯ್ಡಾದಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಉಗುಳಿನಿಂದ ಕಲುಷಿತಗೊಳಿಸಿದ ರಸವನ್ನು ಮಾರಾಟ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು.