ಲಕ್ನೋ: ಎಐಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಸಮಾಜವಾದಿ ಪಕ್ಷದ ಏಜೆಂಟ್ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟೀಕಿಸುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಪ್ರತೀ ಮೂರ್ನಾಲ್ಕು ದಿನಗಳಿಗೊಮ್ಮೆ ಗಲಭೆಗಳು ನಡೆಯುತ್ತಿದ್ದವು. ಈಗ ಉತ್ತರ ಪ್ರದೇಶಕ್ಕೆ ಗಲಭೆ ಮುಕ್ತ ರಾಜ್ಯ ಎಂಬ ಹೆಸರು ಬಂದಿದೆ. ಚಾಚಾ ಜಾನ್(ಓವೈಸಿ), ಅಬ್ಬಾ ಜಾನ್(ಮುಲಾಯಂ) ಅನುಯಾಯಿಗಳೇ ಕೇಳಿ. ರಾಜ್ಯದ ಹಿತಾಸಕ್ತಿ ಬಲಿಕೊಡುವ ಗಲಭೆಗೆ ಪ್ರಚೋದನೆ ನೀಡುವಂತಹ ಕೃತ್ಯ ಎಸಗಿದರೆ ಅದರ ವಿರುದ್ಧ ನಿರ್ದಾಕ್ಷಿಣ್ಯ ಕಠಿಣ ಕ್ರಮ ಕೈಗೊಳ್ಳುವುದು ನಮಗೆ ತಿಳಿದಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಪ್ಪುಗೆ ಗಾಳ ಹಾಕಿದ್ದ ಬಿಜೆಪಿ – ಮೋದಿ ಆಹ್ವಾನವನ್ನು ನಯವಾಗಿ ತಿರಸ್ಕರಿಸಿದ್ದ ಪುನೀತ್
ಸಮಾಜವಾದಿ ಪಕ್ಷದ ಏಜೆಂಟರಾಗಿ ಗಲಭೆ ಪ್ರಚೋದಿಸುವ ಕೆಲಸದಲ್ಲಿ ಓವೈಸಿ ನಿರತರಾಗಿದ್ದಾರೆ. ಹಾಲಿ ಸರ್ಕಾರವು ಗಲಭೆಗಳಿಗೆ ಸೊಪ್ಪು ಹಾಕುತ್ತಿಲ್ಲ. ಮಾಫಿಯಾಗಳ ಮೇಲೆ ಬುಲ್ಡೋಜರ್ ಹರಿಸುತ್ತಿದೆ ಎಂಬುದನ್ನು ಅವರು ನೆನಪಿನಲ್ಲಿಡಬೇಕು’ ಎಂದು ಯೋಗಿ ಗುಡುಗಿದ್ದಾರೆ. ಕೃಷಿ ಕಾಯ್ದೆಗಳ ರೀತಿಯೇ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಯನ್ನು ಹಿಂಪಡೆಯಬೇಕು ಎಂದು ಅಸಾದುದ್ದೀನ್ ಓವೈಸಿ ಬೆಳಗ್ಗೆ ಒತ್ತಾಯಿಸಿದ್ದರು ಸರ್ಕಾರವು ಎನ್ಪಿಆರ್ ಮತ್ತು ಸಿಎಎಗಳನ್ನು ಜಾರಿಗೆ ತಂದರೆ, ನಾವು ಮತ್ತೊಂದು ‘ಶಾಹೀನ್ ಬಾಗ್’ ಸೃಷ್ಟಿಸುತ್ತೇವೆ’ ಎಂದು ಹೇಳಿದ್ದರು. ಸಿಎಎ ವಿರೋಧಿಸಿ ದೆಹಲಿ ಶಾಹೀನ್ ಬಾಗ್ ಪ್ರದೇಶದಲ್ಲಿ ಡಿಸೆಂಬರ್ 2019ರಿಂದ ಮಾರ್ಚ್ 2020ರವರೆಗೆ ಬೃಹತ್ ಹೋರಾಟ ನಡೆದಿತ್ತು ಎಂದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ನ 25 ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಅರವಿಂದ್ ಕೇಜ್ರಿವಾಲ್