Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉತ್ತರ ಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ

Latest

ಉತ್ತರ ಪ್ರದೇಶದ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ

Public TV
Last updated: March 19, 2017 4:06 pm
Public TV
Share
3 Min Read
Yogi Adityanath and modi
SHARE

ಲಕ್ನೋ: ಉತ್ತರಪ್ರದೇಶದ 21 ನೇ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕಾನ್ಶಿರಾಮ್ ಸ್ಮೃತಿ  ಭವನದ ಎದುರು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ರಾಮ್ ನಾಯ್ಕ್ ಯೋಗಿ ಆದಿತ್ಯನಾಥ್ ಅವರಿಗೆ ಪ್ರಮಾಣವಚನ ಬೋಧಿಸಿದರು.

ಸಮಾರಂಭದಲ್ಲಿ ಕೇಶವ ಪ್ರಸಾದ್ ಮೌರ್ಯ ಹಾಗೂ ದಿನೇಶ್ ಶರ್ಮಾ ಉಪ ಮುಖ್ಯಮಂತ್ರಿಯಾಗಿ ಹಾಗೂ 43 ಮಂದಿ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು.

2ನೇ ಕಿರಿಯ ಸಿಎಂ: ಪ್ರಸ್ತುತ ಈಗ ಇರುವ ಮುಖ್ಯಮಂತ್ರಿಗಳಲ್ಲಿ 37 ವರ್ಷದ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ದೇಶದ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿದ್ದರೆ, 44 ವರ್ಷದ ಯೋಗಿ ಆದಿತ್ಯನಾಥ್ ಅವರು 2ನೇ ಅತಿ ಕಿರಿಯ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ.

ಗಣ್ಯರ ಉಪಸ್ಥಿತಿ: ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಗೃಹ ಸಚಿವ ರಾಜನಾಥ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ಮುಲಾಯಂ ಸಿಂಗ್ ಯಾದವ್, ಮುರಳಿ ಮನೋಹರ್ ಜೋಶಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು, ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವಿಸ್, ಮಾಜಿ ಸಿಎಂ ಅಖಿಲೇಶ್ ಯಾದವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಯಾರು ಈ ಯೋಗಿ ಆದಿತ್ಯನಾಥ್?
ಉತ್ತರಾಖಂಡದ ಪಂಚೂರು ಮೂಲದ ಯೋಗಿ ಆದಿತ್ಯನಾಥ್, ಬಿಎಸ್‍ಸ್ಸಿ ಪದವಿ ಓದಿದ್ದಾರೆ. ಪದವಿ ಪಡೆದ ಬಳಿಕ ಅವರು ಸನ್ಯಾಸ ಸ್ವೀಕರಿಸಿ ಉತ್ತರಪ್ರದೇಶದ ನೇಪಾಳ ಗಡಿಯಲ್ಲಿರುವ ಪ್ರಭಾವಿ ಗೋರಖನಾಥ ಮಠ ಸೇರಿ ಕೊಂಡಿದ್ದರು. 2014ರಿಂದ ಆ ಮಠದ ಮುಖ್ಯಸ್ಥರೂ ಆಗಿದ್ದಾರೆ. ಪಕ್ಕಾ ಹಿಂದುತ್ವವಾದಿ, ಕರ್ಮಠ ಯೋಗಿ, ಕೇಸರಿ ಕೆಂಡ ಯೋಗಿ ಆದಿತ್ಯನಾಥ್ ಹಿಂದೂ ಮಹಾಸಭಾ, ಹಿಂದೂ ಯುವ ವಾಹಿನಿಯ ಅಧ್ಯಕ್ಷರೂ ಆಗಿದ್ದಾರೆ.

ಸದಾ ಮುಸ್ಲಿಂ ವಿರುದ್ಧದ ಹೇಳಿಕೆಗಳಿಂದ ಸುದ್ದಿಯಲ್ಲಿರುವ ಯೋಗಿ ಆದಿತ್ಯನಾಥ್ ಘರ್‍ವಾಪ್ಸಿ ಕಾರ್ಯಕ್ರಮದೊಂದಿಗೆ ದೇಶಾದ್ಯಂತ ದೊಡ್ಡ ಆಂದೋಲನ ಸೃಷ್ಟಿಸಿದ್ದರು. ಉತ್ತರ ಪ್ರದೇಶದ ಹಲವೆಡೆ ಬೃಹತ್ ಗೋ ರಕ್ಷಣಾ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ಸೋಲಿಲ್ಲದ ಸರದಾರ: 1998ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಆಗ ಅವರು 26 ವರ್ಷದ ಅವರು 12ನೇ ಲೋಕಸಭೆಯ ಅತಿ ಕಿರಿಯ ಎನಿಸಿದ್ದರು. ಆದಿತ್ಯನಾಥ್ ಲೋಕಸಭೆ ಚುನಾವಣೆ ಅಖಾಡದಲ್ಲಿ 1998 ರಿಂದ 2014ರವರೆಗೂ ಸೋಲಿಲ್ಲದ ಸರದಾರನಾಗಿ ಐದು ಬಾರಿ ಸಂಸದರಾಗಿ ಗೋರಖ್‍ಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಪದವೀಧರರಾಗಿರುವ ಯೋಗಿ ರಫ್ತಿ ನದಿಯ ದಡದಲ್ಲಿರುವ ಗೋರಖ್‍ನಾಥ್ ಮಠದ ಪೀಠಾಧಿಪತಿಯೂ ಆಗಿದ್ದಾರೆ.

ಮಂತ್ರಿಯಾಗಲ್ಲ  ಎಂದಿದ್ರು: ಹೆಸರಿನಲ್ಲಿಯೇ ಯೋಗ ಪಡೆದಿರುವ ಯೋಗಿ ಆದಿತ್ಯನಾಥ್‍ಗೆ 2014ರಲ್ಲಿ ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದಾಗ ಕೇಂದ್ರ ಸಚಿವರಾಗುವಂತೆ ಸ್ವತಃ ಪ್ರಧಾನಿ ಮೋದಿ ಆಹ್ವಾನಿಸಿದಾಗ ನನಗೆ ನನ್ನ ಕ್ಷೇತ್ರದಲ್ಲಿ ಕೆಲಸ ಇದೆ ಎಂದು ಹೇಳಿ ನಯವಾಗಿ ನಿರಾಕರಿಸಿದ್ದರು. ಹೈಕಮಾಂಡ್‍ನ ಕಮಾಂಡ್‍ಗಳನ್ನ ಚಾಚೂ ತಪ್ಪದೆ ಪಾಲಿಸುವ ಯೋಗಿ ಹಲವು ಬಾರಿ ವಿವಾದ್ಮಕ ಹೇಳಿಕೆ ನೀಡಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ರು.

ಆದಿತ್ಯನಾಥ್ ಆಯ್ಕೆಗೆ ಕಾರಣಗಳೇನು..?
ಅಖಿಲೇಶ್ ಯಾದವ್ ಮತ್ತು ಮಾಯಾವತಿಯನ್ನ ಎದುರಿಸುವ ಮಾಸ್ ಲೀಡರ್ ಆಗಿದ್ದು ಹಿಂದೂಗಳ ಜೊತೆಗೆ ಯಾದವ, ದಲಿತರನ್ನ ಓಲೈಕೆ ಮಾಡುವ ಚಾಣಕ್ಷತೆಯನ್ನು ಯೋಗಿ ಹೊಂದಿದ್ದಾರೆ.

ಈಗಿನ ಹಿಂದೂ ಮತಗಳ ವೋಟ್ ಬ್ಯಾಂಕ್ ಭದ್ರಪಡಿಸಿ ಮತ್ತಷ್ಟು ಹೆಚ್ಚಿಸಿಕೊಳ್ಳುವ ಸಾಮರ್ಥ್ಯ ಯೋಗಿ ಬಳಿ ಇದ್ದು ಬಿಜೆಪಿಯಲ್ಲೇ ಉತ್ತಮ ಸಂಘಟನಾಕಾರ, ಕಾರ್ಯಚತುರಗಾರನಾಗಿದ್ದಾರೆ. ಕಳೆದ ಲೋಕಸಭಾ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಬಿಟ್ಟಿದ್ದ ಬಿಜೆಪಿ ನಾಯಕರನ್ನು ಯೋಗಿ ಒಗ್ಗುಡಿಸಿ ಪಕ್ಷವನ್ನು ಬಲ ಪಡಿಸಿದ್ದರು.

ಬಾಬ್ರಿ ಮಸೀದಿ ಧ್ವಂಸ ಬಳಿಕ ತೀವ್ರವಾಗಿ ಹಿಂದೂತ್ವ ಪ್ರತಿಪಾದನೆ ಮಾಡುತ್ತಾ ಬಂದಿರುವ ಇವರು ಉತ್ತರ ಪ್ರದೇಶದ ಪೂರ್ವಾಂಚಲ ಹಾಗೂ ಪಶ್ಚಿಮ ಭಾಗದಲ್ಲಿ ಬಿಗಿ ಹಿಡಿತವನ್ನು ಹೊಂದಿದ್ದಾರೆ. ಬಿಜೆಪಿಯ ಪ್ರಣಾಳಿಕೆಯ ಮುಖ್ಯ ಅಂಶ ರಾಮಮಂದಿರ ನಿರ್ಮಾಣಕ್ಕೆ ಹಿಂದಿನಿಂದ ಆಗ್ರಹಿಸುತ್ತಾ ಬಂದಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಗೆ ಎಲ್ಲ 80 ಕ್ಷೇತ್ರವನ್ನು ಜಯಿಸಲು ಭದ್ರಬುನಾದಿಯ ಲೆಕ್ಕಾಚಾರ ಹಾಕಿ ಬಿಜೆಪಿ ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

ಯೋಗಿ ಮೇಲೆ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ. ಚುನಾವಣೆ ವೇಳೆ ಪ್ರಧಾನಿ ಮೋದಿ, ರಾಷ್ಟ್ರಾಧ್ಯಕ್ಷ ಅಮಿತ್ ಶಾ, ರಾಜನಾಥ್ ಸಿಂಗ್ ಬಳಿಕ ಹೆಚ್ಚು ಪ್ರಚಾರವನ್ನು ಕೈಗೊಂಡಿದ್ದರು. 2014ರ ಸಾರ್ವತ್ರಿಕ ಚುನಾವಣೆ ವೇಳೆ ಮೋದಿಯನ್ನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಆಗ್ರಹಿಸಿದ್ದ ಪ್ರಮುಖ ನಾಯಕರ ಪೈಕಿ ಯೋಗಿಯೂ ಒಬ್ಬರಾಗಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ಜೊತೆ ನೇರ ಸಂಪರ್ಕ ಹೊಂದಿರುವ ಕಾರಣ ಈಗ ಯೋಗಿಗೆ ಮುಖ್ಯಮಂತ್ರಿ ಪಟ್ಟ ಒಲಿದು ಬಂದಿದೆ.

#YogiAdityanath takes charge as #UttarPradesh Chief Minister https://t.co/p5lDsbdLmu pic.twitter.com/AAVUSitgvs

— NDTV (@ndtv) March 19, 2017

PM Narendra Modi arrives at Lucknow's Smriti Upvan to attend swearing in ceremony of #YogiAdityanath as UP CM pic.twitter.com/ZglA1PfLSA

— ANI UP/Uttarakhand (@ANINewsUP) March 19, 2017

Maharashtra CM Fadnavis, Goa CM Parrikar arrive at Lucknow's Smriti Upvan to attend swearing in ceremony of UP CM designate Yogi Adityanath pic.twitter.com/LtVtSFSkdp

— ANI UP/Uttarakhand (@ANINewsUP) March 19, 2017

Amit Shah,Nitin Gadkari,Mulayam Yadav,Uma Bharti arrive at Lucknow's Smriti Upvan to attend swearing in ceremony of #YogiAdityanath as UP CM pic.twitter.com/db8iXomNtf

— ANI UP/Uttarakhand (@ANINewsUP) March 19, 2017

ಕಳೆದ 5 ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಪಡೆದ ಪತಗಳು

Yogi Adityanath vote share

Yogi Adityanath becomes Uttar Pradesh Chief Minister, leaders congratulate him at the ceremony. pic.twitter.com/BgLvQJs4Nd

— ANI (@ANI) March 19, 2017

yogi adityanath pm

C7RNh5VXkAAlLCv

Gorakhpur: BJP supporters celebrate outside Gorakhnath temple after Yogi Adityanath sworn in as Uttar Pradesh Chief Minister. pic.twitter.com/cf2Z6wZgtS

— ANI UP/Uttarakhand (@ANINewsUP) March 19, 2017

TAGGED:bjphindunarendra modiuttar pradeshYogi Adityanathಉತ್ತರ ಪ್ರದೇಶಕೇಶವ್ ಪ್ರಸಾದ್ ಮೌರ್ಯದಿನೇಶ್ ಶರ್ಮಾನರೇಂದ್ರ ಮೋದಿಬಿಜೆಪಿಯೋಗಿ ಆದಿತ್ಯನಾಥ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
33 minutes ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
54 minutes ago
HC MAHADEVAPPA
Bengaluru City

ರಾಜ್ಯದಲ್ಲಿ ಮುಂದೆ ದಲಿತ ನಾಯಕರೇ ಸಿಎಂ ಆಗಬೇಕು – ಹೈಕಮಾಂಡ್‌ಗೆ ಸಚಿವ ಮಹದೇವಪ್ಪ ಒತ್ತಾಯ

Public TV
By Public TV
2 hours ago
2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
2 hours ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
2 hours ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?