ಮಂಡ್ಯ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಅ.16ರಂದು ಮಂಡ್ಯ (Mandya) ಜಿಲ್ಲೆಗೆ ಆಗಮಿಸಲಿದ್ದು, ಕೆ.ಆರ್.ಪೇಟೆಯಲ್ಲಿ (K.R. Pet) ನಡೆಯುವ ಮಹಾಕುಂಭಮೇಳದಲ್ಲಿ (Maha Kumbh Mela) ಪಾಲ್ಗೊಳ್ಳಲಿದ್ದಾರೆ.
ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ಅ.13ರಿಂದ ಅ.16 ರ ವರೆಗೆ ಮಹಾಕುಂಭಮೇಳ ನಡೆಯಲಿದೆ. ಮಹಾಕುಂಭಮೇಳಕ್ಕೆ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ ನೀಡಲಾಗಿದೆ. ಇದನ್ನೂ ಓದಿ: ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಾಂಕೇತಿಕ ಚುನಾವಣೆ
- Advertisement 2
- Advertisement 3
ನಿನ್ನೆ ಲಖನೌನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದ ಕ್ರೀಡಾ ಸಚಿವ ನಾರಾಯಣಗೌಡ (Narayana Gowda) ಅವರು, ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದ್ದರು. ಆಹ್ವಾನ ಸ್ವೀಕರಿಸಿರುವ ಯೋಗಿ ಅವರು ಮಹಾಕುಂಭಮೇಳದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
- Advertisement 4
ಇದೇ ವೇಳೆ ಆದಿಚುಂಚನಗಿರಿ, ಧರ್ಮಸ್ಥಳದ ಇತಿಹಾಸ ಹಾಗೂ ನಾಥ ಪರಂಪರೆ ಬಗ್ಗೆ ನಾರಾಯಣಗೌಡರ ಜೊತೆ ಯೋಗಿ ಅವರು ಮಾತನಾಡಿ ತಿಳಿದುಕೊಂಡಿದ್ದಾರೆ. ಇದನ್ನೂ ಓದಿ: ‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ನ್ಯೂಸ್ – ಮೊದಲ ಬಾರಿಗೆ ಮಿನಿ ಎಲೆಕ್ಟ್ರಿಕ್ ಬಸ್ ಸೇವೆ