Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗಿ ಸರ್ಕಾರದ ಎನ್‍ಕೌಂಟರ್ ಎಫೆಕ್ಟ್- ಸೈಕಲ್ ಶಾಪ್, ಹಣ್ಣಿನ ವ್ಯಾಪಾರ, ರಿಕ್ಷಾ ಚಾಲನೆ ಆರಂಭಿಸಿದ ರೌಡಿಶೀಟರ್ ಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಯೋಗಿ ಸರ್ಕಾರದ ಎನ್‍ಕೌಂಟರ್ ಎಫೆಕ್ಟ್- ಸೈಕಲ್ ಶಾಪ್, ಹಣ್ಣಿನ ವ್ಯಾಪಾರ, ರಿಕ್ಷಾ ಚಾಲನೆ ಆರಂಭಿಸಿದ ರೌಡಿಶೀಟರ್ ಗಳು

Crime

ಯೋಗಿ ಸರ್ಕಾರದ ಎನ್‍ಕೌಂಟರ್ ಎಫೆಕ್ಟ್- ಸೈಕಲ್ ಶಾಪ್, ಹಣ್ಣಿನ ವ್ಯಾಪಾರ, ರಿಕ್ಷಾ ಚಾಲನೆ ಆರಂಭಿಸಿದ ರೌಡಿಶೀಟರ್ ಗಳು

Public TV
Last updated: August 17, 2020 3:00 pm
Public TV
Share
3 Min Read
yogi criminals
SHARE

ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ರೌಡಿಶೀಟರ್ ಗಳು ಹಾಗೂ ಕ್ರಿಮಿನಲ್‍ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ ಪರಿಣಾಮ ಎನ್‍ಕೌಂಟರ್ ಗೆ ಹೆದರಿ ರೌಡಿಗಳು ಈಗ ತಮ್ಮ ಜೀವನವನ್ನ ಬದಲಾಯಿಸಿಕೊಳ್ಳುತ್ತಿದ್ದಾರೆ. ಕೆಲವರು ಸೈಕಲ್ ರಿಪೇರಿ ಅಂಗಡಿ, ಇನ್ನೂ ಕೆಲವರು ಹಣ್ಣಿನ ವ್ಯಾಪಾರ ನಡೆಸುತ್ತಿದ್ದರೆ ಮತ್ತೂ ಕೆಲವರು ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ.

ಲಿಸಾದಿ ಗೇಟ್ ಪೊಲೀಸ್ ಠಾಣೆಯಲ್ಲಿ ಅಖೀಲ್(35) ನ ರೌಡಿಶೀಟ್ ನಂಬರ್ 58ಎ. ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವುದರ ಜೊತೆಗೆ ಈತನ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗಿದೆ. ಆದ್ರೆ ಇತ್ತೀಚೆಗೆ ಕೆಲವು ತಿಂಗಳಿನಿಂದ ಈತ ತನ್ನ ಮನೆಯ ಬಳಿಯೇ ಪುಟ್ಟದೊಂದು ಸೈಕಲ್ ರಿಪೇರಿ ಅಂಗಡಿ ತೆರೆದಿದ್ದು, ಬೆಳಗ್ಗಿನಿಂದ ಸಂಜೆವರೆಗೆ ಅಂಗಡಿಯಲ್ಲಿ ದುಡಿಯುತ್ತಾನೆ.

ತನ್ನ ಏರಿಯಾದಲ್ಲಿ ಕುಖ್ಯಾತ ರೌಡಿಯಾಗಿದ್ದ ಉಮರ್ ದರಜ್ ಎಂಬಾತ ಈಗ ಹಣ್ಣಿನ ವ್ಯಾಪಾರ ಮಾಡುತ್ತಿದ್ದಾನೆ. ಕೆಲವು ತಿಂಗಳ ಹಿಂದೆ ಜೀವನ ತುಂಬಾ ಕಷ್ಟಕರವಾಗಿತ್ತು. ನನ್ನ ಜೀವ ಉಳಿಸಿಕೊಳ್ಳಲು ಒಂದು ಕಡೆಯಿಂದ ಮತ್ತೊಂದು ಕಡೆಗೆ ಓಡುತ್ತಿದ್ದೆ. ಆದ್ರೆ ನನ್ನನ್ನು ಎನ್‍ಕೌಂಟರ್ ನಲ್ಲಿ ಸಾಯಿಸುವುದಿಲ್ಲ ಎಂದು ಪೊಲೀಸರು ಭರವಸೆ ನೀಡಿದ ನಂತರ, ಹಣ್ಣಿನ ವ್ಯಾಪಾರ ಮಾಡಲು ನಿರ್ಧರಿಸಿದೆ ಎಂದು ಉಮರ್ ಪತ್ರಿಕೆಯೊಂದಕ್ಕೆ ಹೇಳಿದ್ದಾನೆ.

ಇದೇ ರೀತಿ ಇಮ್ರಾನ್ ಎಂಬಾತ ಈಗ ಗುಜರಿ ಡೀಲರ್ ಆಗಿದ್ದಾನೆ. ರವಿ ಹಾಗೂ ಹೇಮಂತ್ ಆಟೋ ರಿಕ್ಷಾ ಚಾಲಕರಾಗಿದ್ದಾರೆ. ಇನ್ನೂ ಅನೇಕ ರೌಡಿಗಳು ಅಪರಾಧಗಳನ್ನ ಬಿಟ್ಟು ಬೇರೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ.

criminal

ಪೊಲೀಸರು ಹೇಳುವ ಪ್ರಕಾರ ರೌಡಿಶೀಟರ್ ಗಳ ಈ ಮನಃಪರಿವರ್ತನೆಗೆ ಕಾರಣವೆಂದರೆ ಯೋಗಿ ಸರ್ಕಾರ ರಚನೆಯಾದ ನಂತರ ಪೊಲೀಸರು ಅಳವಡಿಸಿಕೊಂಡಿರುವ ಎನ್‍ಕೌಂಟರ್ ನಂತಹ ಕಠಿಣ ಕ್ರಮಗಳು. ಇದನ್ನೂ ಓದಿ: ನನ್ನ ಅರೆಸ್ಟ್ ಮಾಡಿ, ಎನ್‍ಕೌಂಟರ್ ನಲ್ಲಿ ಸಾಯಲು ಇಷ್ಟವಿಲ್ಲ- ಯುಪಿ ಪೊಲೀಸರಿಗೆ ಕೊಲೆ ಆರೋಪಿ ಶರಣು

Yogi Adityanath

ಕಳೆದ ವರ್ಷ ಮಾರ್ಚ್‍ನಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಪ್ರದೇಶದಲ್ಲಿ 1100ಕ್ಕೂ ಹೆಚ್ಚು ಎನ್‍ಕೌಂಟರ್ ಗಳು ನಡೆದಿದ್ದು, ಅವುಗಳಲ್ಲಿ  ಸುಮಾರು 40ಕ್ಕೂ ಹೆಚ್ಚು ಅಪರಾಧಿಗಳು ಗುಂಡೇಟಿನಿಂದು ಸಾವನ್ನಪ್ಪಿದ್ದಾರೆ. ಹಾಗೇ 2770 ಆರೋಪಿಗಳ ಬಂಧನವಾಗಿದ್ದು, 260 ಆರೋಪಿಗಳು ಗಾಯಗೊಂಡಿದ್ದಾರೆ. ಜೊತೆಗೆ ಎನ್‍ಕೌಂಟರ್ ಗಳಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದು, 277 ಸಿಬ್ಬಂದಿ ಗಾಯಗೊಂಡಿದ್ದಾರೆ.

ಸುಧರ್ ಜಾವೋ ಯಾ ಊಪರ್ ಜಾವೊ: ಐಡಿಯಾ ತುಂಬಾನೇ ಸರಳವಾಗಿತ್ತು: ಸುಧರ್ ಜಾವೋ ಯಾ ಊಪರ್ ಜಾವೊ (ಸರಿ ದಾರಿಗೆ ಬನ್ನಿ ಅಥವಾ ಸಾಯಲು ತಯಾರಾಗಿ). ನಾವು ತುಂಬಾ ಸರಳವಾದ ಆಫರ್ ನೀಡಿದೆವು. ಅಪರಾಧ ಚಟುವಟಿಕೆಗಳನ್ನ ಬಿಟ್ಟು ಜೀವನಾಧಾರಕ್ಕಾಗಿ ಹಣ ಸಂಪಾದಿಸಲು ಓಳ್ಳೆ ದಾರಿಯನ್ನ ಆರಿಸಿಕೊಳ್ಳಿ. ನಿಮಗೆ ನೆರವಾಗಲು ನಾವಿದ್ದೇವೆ ಹಾಗೂ ಅದಕ್ಕೆ ಪ್ರತಿಯಾಗಿ ನೀವು ಯಾವುದೇ ಭಯವಿಲ್ಲದೆ ಘನತೆಯಿಂದ ಜೀವನ ನಡೆಸಬಹುದು ಎಂದು ರೌಡಿಶೀಟರ್ ಗಳಿಗೆ ಹೇಳಿದ್ದಾಗಿ ಮೀರತ್‍ನ ಎಸ್‍ಪಿ ಮನ್ ಸಿಂಗ್ ಚೌಹಾನ್ ಹೇಳಿದ್ದಾರೆ. ಇದನ್ನೂ ಓದಿ:ಜಾಮೀನು ಸಿಕ್ಕರೂ 5,500 ಕ್ರಿಮಿನಲ್‍ಗಳು ಯುಪಿ ಜೈಲಿನಿಂದ ಹೊರಬರುತ್ತಿಲ್ಲ!

shamli surrender

ಕೆಲವರ ವಿರುದ್ಧ ಸುಮಾರು 20 ವರ್ಷಗಳಿಂದ ಪ್ರಕರಣಗಳು ಬಾಕಿ ಇವೆ. ಕೆಲವು ಗಂಭೀರ ಪ್ರಕರಣಗಳಾಗಿದ್ದರೆ ಇನ್ನೂ ಕೆಲವು ಸಣ್ಣ ಪುಟ್ಟ ಪ್ರಕರಣಗಳು. ದೀರ್ಘ ಸಮಯದಿಂದ ಪ್ರಕರಣಗಳು ಬಾಕಿ ಇರುವ ಹಿನ್ನಲೆಯಲ್ಲಿ ಅವರು ಜೀವನದಲ್ಲಿ ನೆಲೆ ಕಂಡುಕೊಳ್ಳಲು ಸಾಧ್ಯವಾಗಿರಲಿಲ್ಲ. ಕಾನೂನಿನ ಭಯ ಹಾಗೂ ಜೀವನ ನಡೆಸಲು ಅಪರಾಧ ಚಟುವಟಿಕೆ ಮುಂದುವರಿಸದೇ ಬೇರೆ ದಾರಿ ಇಲ್ಲ ಎಂಬ ವಿಷಮ ಪರಿಸ್ಥಿತಿ ಇದಕ್ಕೆ ಕಾರಣವಾಗಿತ್ತು ಎಂದು ಚೌಹಾನ್ ವಿವರಿಸಿದ್ದಾರೆ.

ಹೀಗಾಗಿ ಮಾಧ್ಯಮಗಳು ಹಾಗೂ ಇತರೆ ಮುಲಗಳಿಂದ ಪೊಲೀಸರು ರೌಡಿಗಳು ಸಮಾಜದ ಮುಖ್ಯವಾಹಿನಿಗೆ ಹಿಂದಿರುಗುವಂತೆ ಸಂದೇಶ ರವಾನಿಸಿದ್ದರು. ಮೊದಲಿಗೆ ಸುಮಾರು 16 ಮಂದಿ ನಮ್ಮ ಬಳಿ ಬಂದರು. ಅವರ ಚಟುವಟಿಕೆಗಳ ಮೇಲೆ ಎರಡು ತಿಂಗಳವರೆಗೆ ಕಣ್ಣಿಟ್ಟ ನಂತರ ನೇರವಾಗಿ ಭೇಟಿಯಾಗುವಂತೆ ಆಹ್ವಾನಿಸಿದೆವು ಎಂದು ಚೌಹಾನ್ ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಲಿಸಾದಿ ಗೇಟ್ ಪೊಲೀಸ್ ಠಾಣೆಯಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರೌಡಿಗಳು ತಮ್ಮ ಹಿಂದಿನ ದಾರಿಯನ್ನ ಹಿಡಿಯದಂತೆ ಪ್ರಮಾಣ ಮಾಡಿಸಿ ಹಣ್ಣು ಹಾಗೂ ಸಿಹಿ ನೀಡಿ ಸನ್ಮಾನಿಸಲಾಯಿತು ಎಂದು ವರದಿಯಾಗಿದೆ.

ಮುಂದೆಯೂ ಅವರ ಮೇಲೆ ನಾವು ಕಣ್ಣಿಟ್ಟಿರುತ್ತೇವೆ. ಅದರ ಜೊತೆಗೆ ರೌಡಿಶೀಟರ್ ಪಟ್ಟಿಯಿಂದ ಅವರ ಹೆಸರನ್ನ ತೆಗೆಯಬಹುದೆಂಬ ಉದ್ದೇಶದಿಂದ ಇತ್ಯರ್ಥವಾಗದೆ ಉಳಿದ ಪ್ರಕರಣಗಳನ್ನ ತೆಗೆದುಹಾಕಲು ಎಲ್ಲಾ ರೀತಿಯ ಸಹಾಯ ಮಾಡುವ ಭರವಸೆ ನೀಡಿದ್ದೇವೆ ಎಂದು ಚೌಹಾನ್ ಹೇಳಿದ್ದಾರೆ.

TAGGED:CriminalsencounterpoliceRowdysheetersuttarpradeshYogi Adityanathಉತ್ತರಪ್ರದೇಶಎನ್‍ಕೌಂಟರ್ಪಬ್ಲಿಕ್ ಟಿವಿಯೋಗಿ ಆದಿತ್ಯನಾಥ್ರೌಡಿಶೀಟರ್
Share This Article
Facebook Whatsapp Whatsapp Telegram

Cinema news

Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National
Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood

You Might Also Like

abdul jabbar d.k.shivakumar
Bengaluru City

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Public TV
By Public TV
3 minutes ago
Hassan
Districts

ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು – ಅಪಘಾತದಿಂದ ಬ್ರೈನ್ ಡೆಡ್ ಆಗಿದ್ದ ಯುವತಿಯ ಅಂಗಾಂಗ ದಾನ

Public TV
By Public TV
8 minutes ago
Israel targets Hezbollah
Latest

ಹೆಜ್ಬೊಲ್ಲಾ ಭದ್ರಕೋಟೆ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ – 11 ಮಂದಿ ಸಾವು

Public TV
By Public TV
32 minutes ago
IPL Nitish Rana confronts umpire as Tristan Stubbs denied glove change
Cricket

IPL 2026 – ಚೆನ್ನೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಸೋಲಿಗೆ ಅಂಪೈರ್ ನಿರ್ಣಯ ಕಾರಣವಾಯ್ತಾ?

Public TV
By Public TV
57 minutes ago
Tyavarekoppa Hippopotamus Shivamogga
Districts

ಪಶುವೈದ್ಯೆ ಕೊಂದಿದ್ದ ನೀರಾನೆಗೆ ಬಹು ಅಂಗಾಂಗ ವೈಫಲ್ಯ – ಮರಿ ಗರ್ಭದಲ್ಲೇ ಸಾವು

Public TV
By Public TV
2 hours ago
murder case
Bengaluru City

ಪ್ರೀತಿಸಿದವಳ ಕಿಡ್ನ್ಯಾಪ್ ಮಾಡಿ ಅತ್ತೆಗೆ ಚಾಕು ಇರಿತ ಕೇಸ್ – ಚಿಕಿತ್ಸೆ ಫಲಿಸದೇ ಮಹಿಳೆ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?