Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಾವಿನ ನಂತರವೂ ಮೊಮ್ಮಕ್ಕಳೊಡನೆ ಮಾತಾಡಬಹುದು: ಗೂಗಲ್‌ ಎಕ್ಸ್‌ನ ಸೆಬಾಸ್ಟಿಯನ್ ಭವಿಷ್ಯ

Public TV
Last updated: February 13, 2025 5:52 pm
Public TV
Share
3 Min Read
Sebastian Thrun
SHARE

ಬೆಂಗಳೂರು: ಮುಂದಿನ ದಿನಗಳಲ್ಲಿ ನಮ್ಮ ಸಾವಿನ ನಂತರವೂ ನಾವು ನಮ್ಮ ಮಕ್ಕಳು, ಮೊಮ್ಮಕ್ಕಳ ಜೊತೆ ಮಾತನಾಡುತ್ತಿರಬಹುದು. ಅಂತಹ ಸಾಧ್ಯತೆಯನ್ನು ಎಐ ಹೊತ್ತು ತರಲಿದೆ ಎಂದು ಗೂಗಲ್ ಎಕ್ಸ್ (Google X) ಸಂಸ್ಥೆಯ ಸ್ಥಾಪಕ ಸೆಬಾಸ್ಟಿಯನ್ ಥ್ರನ್ ಭವಿಷ್ಯ ನುಡಿದರು.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ’ದಲ್ಲಿ ನಡೆದ ‘ಪ್ರವರ್ತಕ ಎಐ: ಅಮೋಘ ಕಲ್ಪನೆಯಿಂದ ನೈಜ ಪ್ರಭಾವದವರೆಗೆ’ ಗೋಷ್ಠಿಯಲ್ಲಿ ಮಾತನಾಡಿದರು. ಎಐ ಪ್ರಗತಿಯನ್ನು ಊಹಿಸಲೂ ಸಾಧ್ಯವಾಗುತ್ತಿಲ್ಲ. ಮೂರು ವರ್ಷಕ್ಕೂ ಮೊದಲು ಚಾಟ್‌ಜಿಪಿಟಿಯನ್ನು ಯಾರೂ ಕಲ್ಪಿಸಿಕೊಂಡಿರಲಿಲ್ಲ. ಹಾಗೆಯೇ ಮುಂದಿನ ಮೂರು ವರ್ಷಗಳಲ್ಲಿ ಎಐ ಸ್ವರೂಪ ಹೇಗಿರುತ್ತದೆ ಎಂದೂ ಹೇಳಲು ಸಾಧ್ಯವಿಲ್ಲ. ಸ್ವಯಂಚಾಲಿತ ಕಾರುಗಳು ಎಷ್ಟು ಸ್ವತಂತ್ರವಾಗಿವೆ ಎಂದರೆ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ನಮ್ಮ ಸಂಪೂರ್ಣ ಸ್ವಯಂಚಾಲಿತ ‘ವೇಮೋ’ ಕಾರು ಯಾರ ಮೇಲ್ವಿಚಾರಣೆಯೂ ಇಲ್ಲದೆ ಜನರನ್ನು ಓಡಾಡಿಸುತ್ತಿದೆ. ಇದು ಮುಂದಿನ ದಿನಗಳಲ್ಲಿ ಭಾರತಕ್ಕೂ ಬರಲಿದೆ ಎಂದರು.

ಎ.ಐ.ನ ಆರಂಭಿಕ ದಿನಗಳಲ್ಲಿ ಇದರ ಬಗ್ಗೆ ಜನರಲ್ಲಿ ಯಾವ ಅಭಿಪ್ರಾಯವಿತ್ತು ಎಂಬ ಪ್ರಶ್ನೆಗೆ, ‘ಆರಂಭದಲ್ಲಿ ಎಐ ಕುರಿತು ಜನರಲ್ಲಿ ತುಂಬಾ ಭಯವಿತ್ತು. ಈ ತಂತ್ರಜ್ಞಾನ ಇಡೀ ಮನುಷ್ಯ ಕುಲವನ್ನು ನಾಶ ಮಾಡಿಯೇ ಬಿಡುತ್ತದೆ ಎಂಬ ಮಾತುಗಳು ಸಾಮಾನ್ಯವಾಗಿದ್ದವು. ಆದರೆ ಆ ಪರಿಸ್ಥಿತಿ ಈಗಿಲ್ಲ. ಜನರಲ್ಲಿ ಆತಂಕ ಹೋಗಿದೆ. ಎಐ ತಂತ್ರಜ್ಞಾನವನ್ನು ಜನರು ಪ್ರೀತಿಯಿಂದ ಅಪ್ಪಿಕೊಂಡಿದ್ದಾರೆ. ವ್ಯಾಪಕವಾಗಿ ಅದನ್ನು ಬಳಸುತ್ತಿದ್ದಾರೆ. ಈ ತಂತ್ರಜ್ಞಾನವನ್ನು ಆರಂಭದಲ್ಲಿ ಬರವಣಿಗೆಯ ಮುಂದಿನ ಪದ ಅಥವಾ ವಾಕ್ಯಗಳನ್ನು ಊಹಿಸಲು ಬಳಸಲಾಗುತ್ತಿತ್ತು. ಅದೀಗ ಯಾವುದೇ ವಿಚಾರದ ಬಗ್ಗೆ ಪುಟಗಟ್ಟಲೇ ಸ್ವತಂತ್ರವಾಗಿ ಬರೆಯಬಲ್ಲದಾಗಿದೆ. ಇಷ್ಟು ಅಗಾಧ ಬೆಳವಣಿಗೆಯನ್ನು ಯಾರೂ ಊಹಿಸಿರಲಿಲ್ಲ. ಹೀಗಾಗಿ ಎಐ ತಂತ್ರಜ್ಞಾನ ಅನೂಹ್ಯವಾದುದು’ ‌ಎಂದು ಅಭಿಪ್ರಾಯಪಟ್ಟರು.

ಗೂಗಲ್‌ನ ಅತಿ ಪ್ರಮುಖ ಅಂಗಸಂಸ್ಥೆಯ ನೇತೃತ್ವ ವಹಿಸಿದ್ದೀರಿ; ಗೂಗಲ್‌ನಲ್ಲಿ ನೀವು ವೈಪಲ್ಯ ನೋಡಿಲ್ಲವೇ?- ಎಂಬ ಪ್ರಶ್ನೆಗೆ, ವೈಫಲ್ಯ ಎನ್ನುವುದು ಎಲ್ಲಾ ಸಂಶೋಧನೆಗಳ ಮೂಲ. ವಿಫಲವಾಗದ ಹೊರತು ಸಫಲತೆ ಸಾಧ್ಯವಿಲ್ಲ. ಗೂಗಲ್‌ನಂತಹ ದೈತ್ಯ ಕಂಪನಿಯೂ ಹಲವು ವೈಫಲ್ಯಗಳನ್ನು ಕಂಡಿದೆ. ಗೂಗಲ್‌ ಗ್ಲ್ಯಾಸ್‌ ಎಂಬ ಆಗ್‌ಮೆಂಟೆಡ್‌ ರಿಯಾಲಿಟಿ ಸಾಧನ ಮೊಬೈಲ್‌ಗಳನ್ನೇ ಮರೆಸುತ್ತದೆ ಎಂದು ಗೂಗಲ್ ಭಾವಿಸಿತ್ತು. ಆದರೆ ಅದು ಶೋಚನೀಯವಾಗಿ ವಿಫಲವಾಯಿತು. ಉದ್ಯಮಿಗಳು ರಿಸ್ಕ್‌ಗಳಿಗೆ, ವೈಫಲ್ಯಗಳಿಗೆ ಹೆದರಬಾರದು. ಅವುಗಳೇ ಮುಂದಿನ ಸಾಧನೆಗೆ ಪ್ರೇರಣೆ ಎಂದು ನವೋದ್ಯಮಿಗಳನ್ನು ಹುರಿದುಂಬಿಸಿದರು.

ಮಹತ್ತರ ಸಂಶೋಧನೆಗಳು ದೊಡ್ಡ ತಂಡದಲ್ಲಿ ಸಂಭವಿಸುವುದಿಲ್ಲ. ಬಹುತೇಕ ಕ್ರಾಂತಿಕಾರಿ ಸಂಶೋಧನೆಗಳು ಆವಿಷ್ಕಾರಗೊಳ್ಳುವುದು ಸಣ್ಣ ತಂಡದಲ್ಲಿ. ತಂಡ ಸಣ್ಣದು, ಹೆಚ್ಚಿನ ಹಣವಿಲ್ಲ ಎಂಬ ಅಂಜಿಕೆ ತೊರೆದು ಮುನ್ನುಗ್ಗಿದರೆ ಮಾತ್ರ ಯಶಸ್ಸು ಸಾಧ್ಯ. ಇಂದಿನ ದಿನಗಳಲ್ಲಿ ಇಬ್ಬರೇ ಇದ್ದರೂ ಸಾಕು ಕಂಪನಿಯನ್ನು ಜಾಗತಿಕ ಮಟ್ಟಕ್ಕೆ ಬೆಳೆಸಬಹುದು. ಎಐ ಮತ್ತಿತರ ತಂತ್ರಜ್ಞಾನಗಳ ನೆರವಿನಿಂದ ಇದು ಸಾಧ್ಯವಾಗಿದೆ ಎಂದು ವಿವರಿಸಿದರು.

ನಿಯಂತ್ರಣದ ಹಸರಲ್ಲಿ ಮೊಗ್ಗನ್ನು ಚಿವುಟಬಾರದು
ಕಾನೂನು ನಿಯಂತ್ರಣ ಎಐ ಬೆಳವಣಿಗೆಗೆ ಅನಾನುಕೂಲವೇ ಎಂದು ನಿರೂಪಕರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನಿಯಂತ್ರಣ ಇರಬೇಕು. ಆದರೆ ಅದು ಸಂಶೋಧನೆಯ ಕತ್ತು ಹಿಸುಕುವಂತಿರಬಾರದು. ಅರಳುವ ಮುಂಚೆಯೇ ಚಿವುಟುವುದು ಸೂಕ್ತವಲ್ಲ. ದುರ್ಬಳಕೆಯಾದಾಗ ಸೂಕ್ತ ನಿಯಂತ್ರಣ ಹೇರುವುದು ಸೂಕ್ತ. ಚೀನ ಮತ್ತು ಯುರೋಪಿಯನ್‌ ಯೂನಿಯನ್‌ಗಳು ಎಐ ಸಂಶೋಧನೆ ಮೇಲೆ ಇಂಥದೇ ನಿಯಂತ್ರಣ ಹೇರುತ್ತಿವೆ. ಆದರೆ ಭಾರತ ಹಾಗಲ್ಲ. ದುರ್ಬಳಕೆಯಾಗುತ್ತಿದೆ ಎಂದಾಗ ಮಾತ್ರ ಇಲ್ಲಿನ ರಾಜಕಾರಣಿಗಳು ಮಧ್ಯಪ್ರವೇಶಿಸುತ್ತಾರೆ. ಭಾರತದ ಸಿಇಒಗಳು ತಂತ್ರಜ್ಞಾನ ಪ್ರೇಮಿಗಳು, ಬುದ್ಧಿವಂತರು. ಅದಕ್ಕೇ ಸತ್ಯ ನಾದೆಲ್ಲ ಅವರಿಗೆ ಗೂಗಲ್‌ನಂತಹ ದೈತ್ಯ ಸಂಸ್ಥೆಯನ್ನು ಮುನ್ನಡೆಸಲು ಸಾಧ್ಯವಾಗಿದೆ ಎಂದು ಭಾರತವನ್ನು ಪ್ರಶಂಸಿದರು.

ಹೊಸ ಉದ್ಯೋಗಗಳಿಗೆ ಸನ್ನದ್ಧರಾಗಿ
ಉದ್ಯೋಗ ಕ್ಷೇತ್ರದಲ್ಲಿ ಎಐ ಕುರಿತು ಒಂದು ರೀತಿಯಲ್ಲಿ ಆತಂಕ ಇದೆಯಲ್ಲಾ ಎಂಬ ಪ್ರಶ್ನೆಗೆ, ಅದು ಸಹಜವೇ. ಆದರೆ ವಾಸ್ತವದಲ್ಲಿ ಎಐ ಉದ್ಯೋಗಿಗಳ ಜೊತೆಯೇ ಸಾಗುತ್ತದೆ. ಹಾಗೆಂದು ಉದ್ಯೋಗ ನಷ್ಟವಾಗುವುದಿಲ್ಲ ಎಂದಲ್ಲ. ಈಗಿರುವ ಸುಮಾರು 60% ಉದ್ಯೋಗಗಳು ಮುಂದಿನ ದಿನಗಳಲ್ಲಿ ಇಲ್ಲವಾಗುತ್ತವೆ. ಆದರೆ ಅದೇ ವೇಳೆಗೆ ಅದಕ್ಕಿಂತ ಹೆಚ್ಚಿನ ಹೊಸ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಅದಕ್ಕೆ ಯುವ ಜನತೆ ಸಜ್ಜಾಗಬೇಕು ಎಂದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಎಐ ಭಾರಿ ಪಲ್ಲಟ ತರುವುದು ಗ್ಯಾರಂಟಿ. ಸಾರಿಗೆ, ವೈದ್ಯಕೀಯ ಕ್ಷೇತ್ರದಲ್ಲಿ ಹಾಗೂ ವೈಯಕ್ತೀಕರಿಸಿದ ಸೇವೆಗಳಲ್ಲಿ ಇದರ ಬಳಕೆ ಜಾಸ್ತಿಯಾಗಲಿದೆ. ಮುಂದಿನ ದಿನಗಳಲ್ಲಿ ನಮ್ಮ ಸಾವಿನ ನಂತರವೂ ನಾವು ನಮ್ಮ ಮಕ್ಕಳು, ಮೊಮ್ಮಕ್ಕಳ ಜೊತೆ ಮಾತನಾಡುತ್ತಿರಬಹುದು. ಡಿಜಿಟಲ್‌ ಟ್ವಿನ್‌ ಮೂಲಕ ನಾವು ಬೇರೆ ಕೆಲಸದಲ್ಲಿದ್ದೂ ಮೀಟಿಂಗ್‌ನಲ್ಲಿ ಭಾಗವಹಿಸಬಹುದು. ಇನ್ನೂ ಅನಂತ ಸಾಧ್ಯತೆಗಳನ್ನು ಎಐ ತೆರೆಯಲಿದೆ ಎಂದು ಭವಿಷ್ಯ ನುಡಿದರು. ‘ದಿ ಎಕನಾಮಿಸ್ಟ್’ನ ಗ್ರಾಫಿಕ್ ವಿವರ ವಿಭಾಗದ ಸಂಪಾದಕಿ ಮಿಚೆಲ್ ಹೆನ್ನೆಸ್ಸಿ ಸೆಬಾಸ್ಟಿಯನ್ ಗೋಷ್ಠಿ ನಿರ್ವಹಿಸಿದರು.

TAGGED:AIbengaluruGoogle XSebastian Thrunಗೂಗಲ್‌ ಎಕ್ಸ್‌ಬೆಂಗಳೂರುಸೆಬಾಸ್ಟಿಯನ್
Share This Article
Facebook Whatsapp Whatsapp Telegram

Cinema Updates

fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories
Pavithra Gowda
ಫೋಟೋಶೂಟ್ ಮೂಡ್‌ನಲ್ಲಿ ಪವಿತ್ರಾ ಗೌಡ
Cinema Latest Top Stories

You Might Also Like

male mahadeshwara 14
Chamarajanagar

ಕೋಟಿ ಒಡೆಯನಾದ ಮಾದಪ್ಪ – ಒಂದೇ ತಿಂಗಳಲ್ಲಿ ಭಕ್ತರಿಂದ 2.36 ಕೋಟಿ ಕಾಣಿಕೆ

Public TV
By Public TV
6 minutes ago
Vijayapura Locked by chain
Crime

ಹಣ ವಾಪಸ್ ಕೊಡದಿದ್ದಕ್ಕೆ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ದರ್ಪ

Public TV
By Public TV
16 minutes ago
Woman kills husband
Crime

ಮೈದುನನ ಜೊತೆ ಲವ್ವಿಡವ್ವಿ – ಪತಿ ಕೊಂದು ಆಕಸ್ಮಿಕ ಸಾವು ಅಂತ ಬಿಂಬಿಸಿದ್ದ ಮಹಿಳೆ ಬಂಧನ

Public TV
By Public TV
22 minutes ago
plane
Latest

ಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್ – ಆ.24ರವರೆಗೆ ವಿಸ್ತರಿಸಿದ ಪಾಕ್

Public TV
By Public TV
27 minutes ago
Yumuna expressway car accident
Crime

Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ

Public TV
By Public TV
1 hour ago
Anekal Youth kidnapped at gunpoint for property
Bengaluru City

ಮಾತುಕತೆಗೆ ಕರೆಸಿ ಸಿನಿಮಾ ಸ್ಟೈಲ್‌ಲ್ಲಿ ಗನ್ ತೋರಿಸಿ ಕಿಡ್ನ್ಯಾಪ್ – ಲಾಯರ್ & ಗ್ಯಾಂಗ್‍ನಿಂದ ಕೃತ್ಯ!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?