Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸಂಸ್ಕೃತಿ ಅರಿಯಲು ಪಾಂಡಿಚೇರಿಯಿಂದ ಮುಂಬೈಗೆ ಕಾಲ್ನಡಿಗೆಯಲ್ಲಿ ಹೊರಟ ಯುವಕ, ಯುವತಿ

Public TV
Last updated: February 5, 2020 8:16 pm
Public TV
Share
2 Min Read
rmg young people
SHARE

– ಹಣ, ಮೊಬೈಲ್ ಇಲ್ಲದೇ 1400 ಕಿ.ಮೀ ಪಯಣ

ರಾಮನಗರ: ದೇಶವು ಸಾಕಷ್ಟು ವಿಭಿನ್ನ ಸಂಸ್ಕೃತಿಯನ್ನ ಒಳಗೊಂಡಿದ್ದು, ರಾಜ್ಯದಿಂದ ರಾಜ್ಯಕ್ಕೆ ಸಂಸ್ಕೃತಿ, ಕಲೆ, ಭಾಷೆಗಳು ವಿಭಿನ್ನವಾಗಿದೆ. ಇದನ್ನು ತಿಳಿಯಲು ಯುವಕ, ಯುವತಿ ಪಾಂಡೀಚೆರಿಯಿಂದ ಮುಂಬೈಗೆ ಕಾಲ್ನಡಿಗೆಯಲ್ಲಿ ಪಯಣ ಬೆಳೆಸಿದ್ದು, ಮೊಬೈಲ್ ಇಲ್ಲದೇ, ಹಣವೂ ಇಲ್ಲದೆ 70 ದಿನಗಳು 1400 ಕಿ.ಮೀ ಪಯಣ ನಡೆಸುತ್ತಿದ್ದಾರೆ.

ಉತ್ತರಾಖಂಡ್ ರಾಜ್ಯದ ಸಮಾಜ ಸೇವಕ ಅಂಕಿತ್ ದಾಸ್ ಹಾಗೂ ಮಹಾರಾಷ್ಟ್ರದ ಲೇಖಕಿ ನೈನಿಕ ಭಟ್ಯ ಕಾಲ್ನಡಿಗೆಯಲ್ಲಿ ಪಯಣ ನಡೆಸುತ್ತಿದ್ದಾರೆ. ಈಗಾಗಲೇ ನೈನಿಕ ಭಟ್ಯ ಹಾಗೂ ಅಂಕಿತ್ ದಾಸ್ 550 ಕಿ.ಮೀ ಪಯಣ ಮುಗಿಸಿದ್ದು, ತಮಿಳುನಾಡು, ಆಂಧ್ರ ಪ್ರದೇಶ ಹಾದು ಬಂದು ಕರ್ನಾಟಕ ತಲುಪಿದ್ದಾರೆ. ತಮಿಳುನಾಡು ಮತ್ತು ಆಂಧ್ರದಲ್ಲಿ ಇವರಿಗೆ ಉತ್ತಮ ಸ್ಪಂದನೆ ಜನಗಳಿಂದ ಸಿಕ್ಕಿದ್ದು, ಈಗ ಕರ್ನಾಟಕದಿಂದ ಪಯಣ ಆರಂಭ ಮಾಡಿರುವ ಜೋಡಿ ಬೆಂಗಳೂರಿನಿಂದ ಮಾಗಡಿಗೆ ಆಗಮಿಸಿ ಕುಣಿಗಲ್ ಮಾರ್ಗದ ಮೂಲಕ ಪಯಣ ಬೆಳೆಸಿದ್ದಾರೆ.

rmg young people 1

1400 ಕಿಲೋ ಮೀಟರ್ ಪಯಣ ನಡೆಸುತ್ತಿರುವ ಅಂಕಿತ್ ದಾಸ್ ಹಾಗೂ ನೈನಿಕ ಭಟ್ಯ ಬಳಿ ನಯಾಪೈಸೆ ಹಣವಿಲ್ಲ. ಮೊಬೈಲ್ ಸಹ ಇಲ್ಲ. ಯಾವುದೇ ಮ್ಯಾಪ್ ಇಲ್ಲದೆ, 2 ಬ್ಯಾಗ್, ನೀರಿನ ಬಾಟಲಿ, ಹಾಕಿಕೊಳ್ಳಲು ಕೆಲವು ಬಟ್ಟೆಗಳು, 2 ತಟ್ಟೆಯನ್ನು ಹಿಡಿದು ಪಯಣ ಬೆಳೆಸಿದ್ದಾರೆ. ಪಯಣದ ದಾರಿಯಲ್ಲಿ ಯಾರು ಇವರಿಗೆ ಊಟ ಹಾಕುತ್ತಾರೋ ಅಲ್ಲೆ ಇವರಿಗೆ ಊಟ, ಕತ್ತಲಾದ ಮೇಲೆ ಯಾರು ಇವರಿಗೆ ಮಲಗಲು ಜಾಗ ಕೊಡುತ್ತಾರೋ ಅಲ್ಲೆ ಇವರ ನಿದ್ರೆ. ಯಾರೂ ಇವರಿಗೆ ಆಶ್ರಯ ಕೊಡದಿದ್ದರೆ ದೇವಸ್ಥಾನ, ಶಾಲೆಗಳಲ್ಲಿ ಮಲಗಿ ಬೆಳಗ್ಗೆ ಎದ್ದು ತಮ್ಮ ಪಯಣ ಆರಂಭಿಸುತ್ತಾರೆ.

ನಾವು ಪಯಣಿಸಿರುವ ಎಲ್ಲಾ ಕಡೆಯು ಸಾರ್ವಜನಿಕರು ಅತಿಥಿಗಳನ್ನು ಸ್ವಾಗತಿಸುವಂತೆ ಸ್ವಾಗತಿಸಿದ್ದು, ಪ್ರತಿ ದಿನವು 3 ಹೊತ್ತು ಊಟ ಸಿಕ್ಕಿದೆ. ಒಂದೊಂದು ದಿನ ಹೆಚ್ಚಿಗೆ ಊಟ ಸಿಕ್ಕಿ ಅದನ್ನು ನಾವು ಎತ್ತುಕೊಂಡು ಹೋದ ಪ್ರಸಂಗವು ಇದೆ ಎಂದು ಅಂಕಿತ್ ದಾಸ್ ತಿಳಿಸುತ್ತಾರೆ.

WhatsApp Image 2020 02 05 at 6.53.22 PM

ಕರ್ನಾಟಕದ ಕನ್ನಡಿಗರು ವಿಶಾಲ ಹೃದಯದವರು ಎಂಬುದನ್ನು ನಾವು ಆಗಾಗ ಕೇಳುತ್ತಿರುತ್ತೇವೆ. ಕರ್ನಾಟಕದಲ್ಲಿ ಪಯಣ ಆರಂಭಿಸಿರುವ ಅಂಕಿತ್, ನೈನಿಕ ಕರ್ನಾಟಕ ಜನತೆಯ ಪ್ರೀತಿ, ಇಲ್ಲಿನ ಸಂಸ್ಕೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪೇಪರ್, ಟಿವಿಗಳಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷಿತವಿಲ್ಲ ಎಂಬ ಸುದ್ದಿಗಳನ್ನು ಕೇಳುತ್ತಿದ್ದೆವು. ಆದರೆ ನಮಗೆ ಎಲ್ಲೂ ಕೂಡ ಅಪಾಯ ಬಂದಿಲ್ಲ. ಇಲ್ಲಿನ ಜನತೆ ನಮ್ಮನ್ನು ಪ್ರೀತಿಯಿಂದ ಕಾಣುತ್ತಿದ್ದಾರೆ. ಜನಗಳು ಈ ಪ್ರದೇಶ ಅಪಾಯಕಾರಿ ಎಂದು ಹೇಳಿದರೆ ನಾವು ಅಲ್ಲಿಗೆ ಹೋಗುವುದಿಲ್ಲ. ಎಲ್ಲಾ ಕಡೆಯೂ ನಮ್ಮನ್ನು ಪ್ರೀತಿಯಿಂದಲೇ ಕಾಣುತ್ತಿದ್ದಾರೆಂದು ನೈನಿಕ ಹೇಳಿದ್ದಾರೆ.

ಅಂಕಿತ್ ಅವರು ತಮ್ಮ ಗೆಳತಿ ಪ್ರಿಯಾನ್ಷಾರವರಿಗೆ ತಾವು ಹೋಗುವ ಸ್ಥಳದಿಂದ ಬೇರೆಯವರ ಮೊಬೈಲ್‍ನಿಂದ ವಾಟ್ಸಾಪ್ ಮೂಲಕ ಎಲ್ಲಿ ಇದ್ದೇವೆಂದು ತಿಳಿಸುತ್ತಾರೆ. ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ ಹೋಗಲು ಬೇರೆಯವರ ಮೊಬೈಲ್​ನಲ್ಲಿ ರೂಟ್ ಮ್ಯಾಪ್‍ನ್ನು ನೋಡಿ ಪಯಣ ಬೆಳೆಸುತ್ತಿರುವುದು ವಿಶೇಷವಾಗಿದೆ.

rmg young people 2

ಇದರ ಜೊತೆಗೆ ತಾವು ಹೋಗುವ ಸ್ಥಳಗಳ ಸಂಸ್ಕೃತಿ, ವಿಶೇಷತೆಗಳ ಚಿತ್ರಗಳನ್ನು ಸೆರೆಹಿಡಿದು ಡೈರಿಯಲ್ಲಿ ಮಾಹಿತಿ ದಾಖಲಿಸಿಕೊಳ್ತಿದ್ದಾರೆ. ಇವರ ಜೊತೆ ಇರುವ ಸಾರ್ವಜನಿಕರ ಫೋಟೋಗಳನ್ನು ಬೇರೆಯವರ ಮೊಬೈಲ್‌ನಿಂದ ವಾಟ್ಸಾಪ್ ಮಾಡಿಸಿಕೊಂಡು ಪಯಣ ಮುಂದುವರೆಸಿದ್ದಾರೆ. ಇಂಗ್ಲೀಷ್, ಹಿಂದಿ ಬಿಟ್ಟರೆ ಇವರಿಗೆ ಬೇರೆ ಭಾಷೆ ಗೊತ್ತಿಲ್ಲ. ಕರ್ನಾಟಕಕ್ಕೆ ಬಂದಿರುವ ನೈನಿಕ ಭಟ್ಯ ಸ್ವಲ್ಪ ಸ್ವಲ್ಪ ಕನ್ನಡವನ್ನು ಕಲಿತು ಜನಗಳ ಜೊತೆ ಸಂಪರ್ಕ ಮಾಡಿ ತಮ್ಮ ಉದ್ದೇಶವನ್ನು ತಿಳಿಸಿ, ಊಟ ಮತ್ತು ಮಲಗಲು ಆಶ್ರಯ ಪಡೆಯುತ್ತಿದ್ದಾರೆ. ಆದರೆ ಕೆಲವೇ ದಿನಗಳಿಂದ ಕರ್ನಾಟಕದ ಸಂಪರ್ಕವನ್ನು ಹೊಂದಿರುವ ನೈನಿಕ ಭಟ್ಯ ಕನ್ನಡ ಕಲಿತಿರುವುದು ಹೆಮ್ಮೆಯ ವಿಚಾರವಾಗಿದೆ.

TAGGED:culturekarnatakamumbaiPondicherryPublic TVramanagarayoung womanyouthಕಾಲ್ನಡಿಗೆಪಬ್ಲಿಕ್ ಟಿವಿಪಾಂಡೀಚೆರಿಮುಂಬೈಯುವಕಯುವತಿರಾಮನಗರಸಂಸ್ಕೃತಿ
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
15 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
15 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
18 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
19 hours ago

You Might Also Like

Yadagiri chemical water
Chamarajanagar

ಚಾಮರಾಜನಗರ | ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ

Public TV
By Public TV
1 minute ago
military
Latest

ಮಣಿಪುರದ ಚಾಂದೆಲ್‌ನಲ್ಲಿ ಎನ್‌ಕೌಂಟರ್‌ – 10 ಉಗ್ರರನ್ನು ಹತ್ಯೆ ಮಾಡಿದ ಭಾರತೀಯ ಸೇನೆ

Public TV
By Public TV
16 minutes ago
mutton curry 3
Bengaluru City

ಸಿಂಪಲ್ಲಾಗಿ ಮಟನ್ ಕರಿ ಮಾಡಿ ನಾಲಿಗೆ ಚಪ್ಪರಿಸಿ!

Public TV
By Public TV
43 minutes ago
Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
9 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
9 hours ago
big bulletin 14 may 2025 part 1
Big Bulletin

ಬಿಗ್‌ ಬುಲೆಟಿನ್‌ 14 May 2025 ಭಾಗ-1

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?