ಬೆಂಗಳೂರು: ಯುವಕನೊಬ್ಬ ಮದುವೆಯಾಗುವಂತೆ ಒತ್ತಾಯಿಸಿ ಯುವತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಗರದ ಕೆ ಆರ್ ಪುರಂ ಮಸೀದಿ ರಸ್ತೆಯಲ್ಲಿ ನಡೆದಿದೆ.
ಕಳೆದ ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ಇದಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಗ್ಮಾ ಎಂಬಾಕೆಯ ಮೇಲೆ ಆರೋಪಿ ಶಾರುಖ್ ಹಲ್ಲೆಗೆ ಮುಂದಾಗಿದ್ದಾನೆ. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?
ಯುವಕ, ಯುವತಿ ಮೇಲೆ ಲಾಂಗ್ ಬೀಸಲು ಯತ್ನಿಸಿದ್ದಾನೆ. ಈ ವೇಳೆ ಯುವತಿಯು ಮನೆ ಗೇಟ್ ಲಾಕ್ ಮಾಡಿಕೊಂಡಿದ್ದರು. ಏರಿಯಾದಲ್ಲಿ ಲಾಂಗ್ ಹಿಡಿದು ರಾಜಾರೋಷವಾಗಿ ಓಡಾಡಿದ್ದಾನೆ.
ಶಾರುಖ್ ಮನಬಂದಂತೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳ ಮೇಲೆಯೂ ಲಾಂಗ್ ಬೀಸಿದ್ದಾನೆ. ಆರೋಪಿ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ನಗ್ಮಾರವರು ಕೆ ಆರ್ ಪುರಂ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಶೌಚಾಲಯಕ್ಕೆ ಹೋಗಿ ಬರುತ್ತೇನೆಂದ ವಧು ಪ್ರೀಯಕರನ ಜೊತೆಗೆ ಎಸ್ಕೇಪ್
ಪ್ರಕರಣ ದಾಖಲಾದ ಬೆನ್ನಲ್ಲೇ ಕೆ ಆರ್ ಪುರಂ ಪೊಲೀಸರು ಆರೋಪಿ ಶಾರುಕ್ನನ್ನು ಬಂಧಿಸಿದ್ದಾರೆ.