ಮಂಗಳೂರು: ತಾನು ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದು ಆರೋಪಿಸಿ ಯುವಕನೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ಹೊರವಲಯದ ಅಡ್ಯಾರು ಎಂಬಲ್ಲಿ ಈ ಘಟನೆ ನಡೆದಿದೆ. ತಾನು ರ್ಪರೀತಿಸಿದ ಹುಡುಗಿ ನನಗೆ ಮೋಸ ಮಾಡಿದ್ದಾಳೆ. ಹೀಗಾಗಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಮೊಬೈಲ್ ಟವರ್ ಏರಿ ಕುಳಿತಿದ್ದಾನೆ. ಯುವಕನನ್ನು ಗಮನಿಸಿದ ಸ್ಥಳೀಯರು ಪೊಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 2016ರಲ್ಲಿ ಡಿಕೆಶಿ ನಿಂದಿಸಿದ್ದ ಬೆಳ್ಳಾರೆಯ ಗಿರಿಧರ ರೈಗೆ 2 ವರ್ಷ ಜೈಲು
ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕದ ದಳದ ಸಿಬ್ಬಂದಿ ಯುವಕನನ್ನು ಕೆಳಗಿಳಿಸಲು ಹರಸಾಹಸ ಪಟ್ಟರು. ಕೊನೆಗೆ ಪ್ರೀತಿಸಿದ ಹುಡುಗಿಯೇ ಬಂದು ಕರೆದ ಬಳಿಕ ಯುವಕ ಮೊಬೈಲ್ ಟವರ್ನಿಂದ ಕೆಳಗಿಳಿದಿದ್ದಾನೆ. ಟವರ್ ಇಳಿದು ತನ್ನ ಪ್ರಿಯತಮೆ ಜೊತೆ ತೆರಳಿದ್ದಾನೆ.