ಕಾರವಾರ: ಯಲ್ಲಾಪುರದಲ್ಲಿ (Yallapura) ಮದುವೆಗೆ ಒಪ್ಪದ ರಂಜಿತಾಳನ್ನ ಕತ್ತುಕೊಯ್ದು ಹತ್ಯೆ ಮಾಡಿ ತಾನೂ ಆತ್ಮಹತ್ಯೆಮಾಡಿಕೊಂಡ ರಫೀಕ್ ಪ್ರಕರಣ ಮಾಸುವ ಬೆನ್ನಲ್ಲೇ ಅಂಕೋಲದಲ್ಲಿ ಪ್ರೀತಿಸಿದ (Love) ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಂಕೋಲಾ (Ankola) ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಡನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡವನು ಪವನ್ ಭಟ್ (24) ಎಂಬ ಯುವಕನಾಗಿದ್ದಾನೆ. ಇದನ್ನೂ ಓದಿ: ರೆಡ್ಡಿ ಸಂಪ್ರದಾಯದ ಪ್ರಕಾರ ಹೂಳಬೇಕು, ರಾಜಶೇಖರ್ ದೇಹವನ್ನು ಸುಟ್ಟಿದ್ದು ಯಾಕೆ: ಶ್ರೀರಾಮುಲು ಪ್ರಶ್ನೆ
ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದನು ಎನ್ನಲಾಗಿದೆ. ಈ ಸಂಬಂಧವನ್ನ ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ನಿರಾಕರಣೆಯಿಂದ ಮನನೊಂದ ಪವನ್ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಕುರಿತು ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಆರ್ಥಿಕ ಅಧಃಪತನ; ಇರಾನ್ನಲ್ಲಿ ಹಿಂಸಾಚಾರಕ್ಕೆ 35 ಬಲಿ – 1,200 ಮಂದಿ ಬಂಧನ


