ಬೆಂಗಳೂರು: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ (Bengaluru) ಕೊತ್ತನೂರಿನ ಕೆ.ನಾರಾಯಣಪುರದಲ್ಲಿ (K Narayanapura) ನಡೆದಿದೆ.
ಸುನೀಲ್ (28) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾ.7ರಂದು ತಡರಾತ್ರಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಯಶವಂತಪುರ ನಿವಾಸಿಯಾಗಿದ್ದ ಸುನೀಲ್ಗೆ ಡ್ರಗ್ಸ್ ಜೊತೆಗೆ ಹುಡುಗಿಯರ ಶೋಕಿ ಕೂಡ ಇತ್ತು. ತನ್ನ ಚಟಕ್ಕಾಗಿ ಮನೆಯಲ್ಲಿಯೇ ಚಿನ್ನ, ಹಣ ಕಳ್ಳತನ ಮಾಡುತ್ತಿದ್ದ. ಇದನ್ನು ಮನೆಯವರು ಪ್ರಶ್ನಿಸಿದರೇ ಸಾಯೋದಾಗಿ ಹೇಳುತ್ತಿದ್ದ. ಇದನ್ನೂ ಓದಿ: Champions Trophy Final: ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ದೇವರಿಗೆ ವಿಶೇಷ ಪೂಜೆ
Advertisement
Advertisement
ನಂತರ ಮನೆಬಿಟ್ಟು ಕೊತ್ತನೂರು ಪಿಜಿ ಸೇರಿದ್ದ ಸುನೀಲ್, ಗ್ಯಾರೇಜ್ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ. ಮಾ.7ರಂದು ರಾತ್ರಿ ಮಾಲೀಕನಿಗೆ ಸಾಯೋದಾಗಿ ಮೆಸೆಜ್ ಮಾಡಿದ್ದ. ಬಳಿಕ ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ
Advertisement