ಕಲಬುರಗಿ: ಕೆಲಸದಲ್ಲಿ ವಿಪರೀತ ಒತ್ತಡ (Work Pressure) ವಿದ್ದ ಹಿನ್ನೆಲೆಯಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ (Kalaburagi) ನಗರದ ವಿಶ್ವವಿದ್ಯಾಲಯ ಆವರಣದ ಪಾಳು ಬಿದ್ದ ಗೋಡಾನ್ನಲ್ಲಿ ನಡೆದಿದೆ.
ಜ್ಯೋತಿಬಾ ಪುಲೆ ಬಡಾವಣೆಯ ನಿವಾಸಿ ಶಶಾಂಕ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಆನ್ಲೈನ್ ಎನಿಮೇಶನ್ ಕೆಲಸ ಮಾಡುತ್ತಿದ್ದನು. ಇದನ್ನೂ ಓದಿ: ಅಲ್ಖೈದಾ ಜೊತೆ ನಂಟು ಶಂಕೆ – ಶಂಕಿತ ಭಯೋತ್ಪಾದಕನ ಸೆರೆ
ಆನ್ಲೈನ್ ಎನಿಮೇಶನ್ (Online Animation) ಕೆಲಸದಲ್ಲಿ ಬಹಳಷ್ಟು ಒತ್ತಡ ಹಾಕಿಕೊಂಡಿದ್ದ ಶಶಾಂಕ್, ಈ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.