ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ಸಾವು- ಮೊಬೈಲ್‍ನಲ್ಲಿ ಕೊನೇ ಕ್ಷಣ ಸೆರೆ

Public TV
1 Min Read
UDUPI YOUNG MAN FALLS

ಉಡುಪಿ: ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು (Kolluru) ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ (Arishina Gundi Falls) ನಡೆದಿದೆ.

ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ.

ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಯುವಕ, ಜಲಪಾತ ವೀಕ್ಷಣೆಗೆ ತೆರಳಿದ್ದಾನೆ. ಈ ವೇಳೆ ಆತ ಕಾಲು ಜಾರಿ ಬಿದ್ದಿದ್ದಾನೆ. ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: ದೋಣಿ ಮುಳುಗಿ 15 ಮಂದಿ ಸಾವು, ಹಲವರು ನಾಪತ್ತೆ

ಘಟನಾ ಸ್ಥಳಕ್ಕೆ ಕೊಲ್ಲೂರು ಪಿ.ಎಸ್.ಐ ಜಯಲಕ್ಷ್ಮಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಸಂಬಂಧ ಕೊಲ್ಲೂರು ಠಾಣೆಯಲ್ಲಿ ದಾಖಲಾಗಿದೆ.

Web Stories

Share This Article