ತುಮಕೂರು: ಮೊಬೈಲ್ ಚಾರ್ಜರ್ (Mobile Charger) ಕೊಡಲಿಲ್ಲ ಎಂದು ಯುವಕ ನೇಣಿಗೆ ಶರಣಾದ ಘಟನೆ ತುಮಕೂರು (Tumakuru) ಜಿಲ್ಲೆಯ ಪಾವಗಡ (Pavagada) ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿ ಹಳ್ಳಿಯಲ್ಲಿ ನಡೆದಿದೆ.
ನಿಖಿಲ್ (18) ನೇಣಿಗೆ ಶರಣಾದ ಯುವಕ. ಮೃತ ನಿಖಿಲ್ ಆಶಾ ಕಾರ್ಯಾಕರ್ತೆಯಾಗಿರುವ ವರಲಕ್ಷ್ಮಮ್ಮ ಎಂಬವರ ಪುತ್ರನಾಗಿದ್ದು, ಪಾವಗಡ ಪಟ್ಟಣದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ. ಇದನ್ನೂ ಓದಿ: ಬೀದರ್ನಲ್ಲಿ ಸ್ವಂತ ತಂದೆಯಿಂದಲೇ 12 ವಯಸ್ಸಿನ ಮಗಳ ಮೇಲೆ ನಿರಂತರ ಅತ್ಯಾಚಾರ
ಘಟನೆಯ ಮೊದಲು ಯುವಕ ತಾಯಿಯ ಬಳಿ ನನಗೆ ಚಾರ್ಜರ್ ಕೊಡು ಎಂದಿದ್ದಾನೆ. ಈ ವೇಳೆ ತಾಯಿ ನನ್ನ ಹತ್ತಿರ ಮೊಬೈಲ್ ಚಾರ್ಜರ್ ಇಲ್ಲವೆಂದು ಹೇಳಿ ಅಲ್ಲೇ ಹತ್ತಿರದ ಮನೆಯೊಂದರಲ್ಲಿ ಹೂ ಕಟ್ಟಲು ಹೋಗಿದ್ದಾರೆ. ಇದನ್ನೂ ಓದಿ: ಉಡುಪಿ ಕೇಸಲ್ಲಿ ಸಂತ್ರಸ್ತೆ, ಆರೋಪಿಗಳ ವಿಚಾರಣೆ- ಪ್ರಕರಣಕ್ಕೆ ಕೇರಳ ಲಿಂಕ್ ಕೊಟ್ಟು ಬಿಜೆಪಿ ಪ್ರತಿಭಟನೆ
ವಾಪಸ್ ಮನೆಗೆ ಬಂದು ಬಾಗಿಲು ಬಡಿದಾಗ ನಿಖಿಲ್ ಬಾಗಿಲು ತೆಗೆಯಲಿಲ್ಲ. ಅನುಮಾನಗೊಂಡು ಸ್ಥಳೀಯರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ವೈ.ಎನ್.ಹೊಸಕೋಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗುಪ್ತಾಂಗಕ್ಕೆ ವಿಕೆಟ್ನಿಂದ ಚುಚ್ಚಿದ ಪತಿ- ಪತ್ನಿ ಸ್ಥಿತಿ ಗಂಭೀರ
Web Stories