ರಾಯಚೂರು: ಅನುಚಿತ ವರ್ತನೆ ತೋರಿಸಿ ಓಡಿ ಹೋದ ಯುವಕನನ್ನು ಚೇಸ್ ಮಾಡಿ ಹಿಡಿದ ಲೇಡಿ ಪಿಎಸ್ಐ ಲಾಠಿ ರುಚಿ ತೋರಿಸಿದ್ದಾರೆ.
ಜಿಲ್ಲೆಯ ಸಿರವಾರ ತಾಲೂಕಿನ ಕುರಕುಂದಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ನಟ ಸುದೀಪ್ ಬಂದಿದ್ದರು. ಈ ವೇಳೆ ಸಿರವಾರ ಠಾಣೆ ಪಿಎಸ್ಐ ಗೀತಾಂಜಲಿ ಸೇರಿದಂತೆ ಕೆಲ ಪೊಲೀಸರ ಜೊತೆ ಯುವಕ ಅನುಚಿತ ವರ್ತನೆ ತೋರಿದ್ದ. ಅಲ್ಲದೇ ಪೊಲೀಸರ ಲಾಠಿಯನ್ನು ಕಿತ್ತುಕೊಂಡು ಓಡಿಹೋಗಿದ್ದ.
- Advertisement 2
- Advertisement 3
ಓಡಿ ಹೋದ ಯುವಕನನ್ನು ಪೊಲೀಸರು ಚೇಸ್ ಮಾಡಿ ಹಿಡಿದು ಠಾಣೆಗೆ ಎಳೆದೋಯ್ದಿದ್ದಾರೆ. ಜೊತೆಗೆ ಸ್ಥಳದಲ್ಲಿದ್ದ ಪೊಲೀಸರು ಧರ್ಮದೇಟು ನೀಡಿದ್ದಾರೆ. ಸುದೀಪ್ ಆಗಮನ ವೇಳೆ ಅಭಿಮಾನಿಗಳ ನೂಕುನುಗ್ಗುಲು ಉಂಟಾಗಿದ್ದ ಹಿನ್ನೆಲೆ ಪರಿಸ್ಥಿತಿ ನಿಯಂತ್ರಿಸಲು ಲಘು ಲಾಠಿಪ್ರಹಾರ ನಡೆಸಿದರು. ಇದನ್ನೂ ಓದಿ: ತಮ್ಮದೇ ಮೂರ್ತಿ ಅನಾವರಣಕ್ಕೆ ಒಪ್ಪದ ಸುದೀಪ್