ಬೆಳಗಾವಿ: ನಗರದ ಚವ್ಹಾಟ್ ಗಲ್ಲಿಯಲ್ಲಿರುವ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಪಾನಮತ್ತ ಯುವಕ ಕಲ್ಲು ಎಸೆದಿರುವ ಘಟನೆ ನಡೆದಿದೆ.
ಸತ್ಯಂ ಜೋತಿಭಾ ನಾಯಕ ಆರೋಪಿ. ಬೆಳಗಾವಿಯ ಉತ್ತರ ಮತಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಬೆನಕೆ ಅವರ ಕಚೇರಿ ಮೇಲೆ ಪಾನಮತ್ತ ಯುವಕ ನಿನ್ನೆ ತಡರಾತ್ರಿ ಕಲ್ಲು ಹೊಡೆದು ಪರಾರಿ ಆಗಿದ್ದಾನೆ. ಶಾಸಕರ ಕಚೇರಿಗೆ ಕಲ್ಲೆಸೆತ ಹಿನ್ನೆಲೆ ಶಾಸಕರ ಕಚೇರಿಯ ಗಾಜುಗಳೆಲ್ಲವೂ ಪುಡಿಪುಡಿ ಆಗಿದ್ದು, ಇತ್ತ ಶಾಸಕರ ಕಚೇರಿ ಮೇಲೆ ಕಲ್ಲು ತೂರಾಟ ಹಿನ್ನೆಲೆ ಆತಂಕ ವಾತಾವರಣ ನಿರ್ಮಾಣವಾಗಿದೆ.
ಘಟನಾ ಸ್ಥಳಕ್ಕೆ ತಕ್ಷಣ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾನಮತ್ತ ಸತ್ಯಂನಿಂದ ಶಾಸಕರ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ಕಚೇರಿ ಸುತ್ತಲೂ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಪ್ರಜಾಪ್ರಭುತ್ವದ ಹಬ್ಬ ಮಾಡಿ: ಮೋದಿ