ಮೈಸೂರು: ಹುಟ್ಟುಹಬ್ಬ ಆಚರಣೆ (Birthday Celebration) ವೇಳೆ ಗಲಾಟೆ ನಡೆದು ಅನ್ಯ ಕೋಮಿನವರಿಂದ ಯುವಕನಿಗೆ (Young Man) ಚಾಕು ಇರಿತವಾದ (Stabbing) ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ನಡೆದಿದೆ.
ಪ್ರಸಾದ್ (22) ಚಾಕು ಇರಿತಕ್ಕೊಳಗಾದ ಯುವಕ. ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪಿಸಿ, ಇಲ್ಲಿ ಹುಟ್ಟುಹಬ್ಬ ಆಚರಿಸಬೇಡಿ. ಇನ್ನು ಮುಂದೆ ನಿಮ್ಮ ಮನೆಗಳಲ್ಲಿ ಹುಟ್ಟುಹಬ್ಬ ಆಚರಿಸಿ. ಇದು ನಮ್ಮ ಸರ್ಕಾರ, ನೀವು ಹಿಂದೂಗಳು ಏನು ಮಾಡಲಾಗುವುದಿಲ್ಲ ಎಂದು ಅವಾಚ್ಯ ಶಬ್ಧಗಳಿಂದ ಕೆಲ ಯುವಕರು ನಿಂದಿಸಿದ್ದಾರೆ. ಬಳಿಕ ಗಲಾಟೆ ನಡೆದು ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ 5 ಜನರ ವಿರುದ್ಧ ಪೊಲೀಸರು ಎಫ್ಐರ್ ದಾಖಲಿಸಿದ್ದಾರೆ. ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯುವತಿಯ ಶವ ಕೆರೆಯಲ್ಲಿ ಪತ್ತೆ- ಆತ್ಮಹತ್ಯೆ ಶಂಕೆ
ಗಾಯಗೊಂಡಿರುವ ಪ್ರಸಾದ್ಗೆ ನಂಜನಗೂಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಟಿಪ್ಪರ್, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ