-ಜಾರ್ಖಂಡ್ ಮೂಲದ ಯುವತಿಯನ್ನು ವಿವಾಹವಾಗಿದ್ದ ಯುವಕ
ಮಂಡ್ಯ: 3 ದಿನಗಳ ಹಿಂದೆ ಪ್ರೀತಿಸಿದ ಹುಡುಗಿಯೊಂದಿಗೆ ಮದುವೆಯಾಗಿದ್ದ ಯುವಕ ಹೃದಯಾಘಾತದಿಂದ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ (Mandya) ಜಿಲ್ಲೆಯ ಕೆ.ಆರ್.ಪೇಟೆ (K R Pete) ಪಟ್ಟಣದಲ್ಲಿ ನಡೆದಿದೆ.
ಕೆ.ಆರ್.ಪೇಟೆ ಪುರಸಭೆ ಸದಸ್ಯ ಕೆ.ಸಿ.ಮಂಜುನಾಥ್ ಪುತ್ರ ಶಶಾಂಕ್(28) ಮೃತ ದುರ್ದೈವಿ.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಐಟಿ ಉದ್ಯೋಗಿ ಆಗಿದ್ದ ಶಶಾಂಕ್. ಜಾರ್ಖಂಡ್ (Jharkhand) ಮೂಲದ ಅಷ್ಣಾರ ಎಂಬ ಯುವತಿಯನ್ನು ಪ್ರೀತಿ ಮಾಡುತ್ತಿದ್ದರು. ಈ ವಿಚಾರವನ್ನು ಮನೆಯವರಿಗೆಲ್ಲಾ ತಿಳಿಸಿ, ಒಪ್ಪಿಗೆ ಪಡೆದು ಮಾ.2ರಂದು ಮೈಸೂರಿನ ರೆಸಾರ್ಟ್ವೊಂದರಲ್ಲಿ ಶಾಸ್ತ್ರೋಕ್ತವಾಗಿ ವಿವಾಹವಾಗಿದ್ದರು. ಇದನ್ನೂ ಓದಿ: ಬೆಂಗಳೂರಲ್ಲಿ ಕುಡಿಯುವ ನೀರು ಅನ್ಯ ಕೆಲಸಗಳಿಗೆ ಬಳಕೆ; 417 ಜನರಿಗೆ 20.85 ಲಕ್ಷ ರೂ. ದಂಡ
ಮದುವೆ ದಿನವೂ ಶಶಾಂಕ್ ಸ್ವಲ್ಪ ಜ್ವರ ಇದೆ ಎಂದು ಸ್ನೇಹಿತರೊಂದಿಗೆ ಹೇಳಿಕೊಂಡಿದ್ದರು. ಮಂಗಳವಾರ ಶಶಾಂಕ್ಗೆ ಬೆಂಗಳೂರಿನ ನಿವಾಸದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆತನನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಶಶಾಂಕ್ ಪತ್ನಿ, ತಂದೆ-ತಾಯಿ, ಸ್ನೇಹಿತರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ‘ಮಾಣಿಕ್ಯ’ ಸಿನಿಮಾ ನಟಿ ರನ್ಯಾ ರಾವ್ ಫ್ಲಾಟ್ ಮೇಲೆ ದಾಳಿ – ಕೋಟಿ ಕೋಟಿ ಮೌಲ್ಯದ ಚಿನ್ನ ವಶ