ವಿಜಯನಗರ: ಹಮಾಸ್ ಉಗ್ರರನ್ನ ಬೆಂಬಲಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದ ಹೊಸಪೇಟೆಯ ಮುಸ್ಲಿಂ ಯುವಕನನ್ನು ಪೊಲೀಸರು (Police) ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪೊಲೀಸರು ವಶಕ್ಕೆ ಪಡೆದ ಯುವಕನನ್ನು ನವಾಜ್ ಎಂದು ಗುರುತಿಸಲಾಗಿದೆ. ಆತ ವಿಜಯನಗರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷನ ಸಂಬಂಧಿ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷ ದಸರಾಕ್ಕೆ ಅನುಮತಿ
ಯುವಕ ಹಮಾಸ್ ಉಗ್ರರನ್ನು ಬೆಂಬಲಿಸಿ ಸ್ಟೇಟಸ್ ಹಾಕಿ ಪ್ಯಾಲೆಸ್ತೀನ್ ಜಿಂದಾಬಾದ್ ಎಂದು ಬರೆದುಕೊಂಡಿದ್ದ. ಅಲ್ಲದೇ ನಾನು ಪ್ಯಾಲೆಸ್ತೀನ್ ಪರವಾಗಿದ್ದೇನೆ ಎಂದು ಬೆಂಬಲ ಸೂಚಿಸುವ ಪ್ರಚೋದನಕಾರಿ ಸ್ಟೇಟಸ್ ಹಾಕಿದ್ದ ಎಂದು ತಿಳಿದು ಬಂದಿದೆ.
ಇಸ್ರೇಲ್ ಹಾಗೂ ಹಮಾಸ್ ನಡುವಿನ ಯುದ್ಧದಲ್ಲಿ ಭಾರತ ಇಸ್ರೇಲ್ನ್ನು (Israel) ಬೆಂಬಲಿಸಿದೆ. ಇದರಿಂದ ಯುವಕನ ಪೋಸ್ಟ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು.
ಈ ಸಂಬಂಧ ಹೊಸಪೇಟೆ (Hospet) ನಗರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡು ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದನ್ನೂ ಓದಿ: ಗಂಗಾಜಲಕ್ಕೆ 18% ಜಿಎಸ್ಟಿ ವಿಧಿಸಲ್ಲ – ಖರ್ಗೆ ಆರೋಪಕ್ಕೆ CBIC ಸ್ಪಷ್ಟನೆ
Web Stories