ನಿನ್ನ ಅಹಂಕಾರ ನಾಲ್ಕೇ ದಿನ – ಸಂಜಯ್ ರಾವತ್ ಮನೆ ಎದುರು ಬ್ಯಾನರ್

Public TV
1 Min Read
Sanjay Raut banner

ಮುಂಬೈ: ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟಿನ ಮಧ್ಯೆ, ಮುಂಬೈನಲ್ಲಿರುವ ಶಿವಸೇನೆಯ ನಾಯಕ ಸಂಜಯ್ ರಾವತ್ ಅವರ ಮನೆಯ ಹೊರಗೆ ಬುಧವಾರ ಬ್ಯಾನರ್ ಒಂದು ಕಾಣಿಸಿಕೊಂಡಿದೆ. ಬ್ಯಾನರ್‌ನಲ್ಲಿ, ನಿನ್ನ ದುರಹಂಕಾರ ಇನ್ನು ನಾಲ್ಕೇ ದಿನ, ನಮ್ಮ ರಾಜಕೀಯ ಬರಲಿದೆ ಎಂದು ಬರೆಯಲಾಗಿದೆ.

ಈ ಪೋಸ್ಟರ್‌ನಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಬಾಳಾಸಾಹೇಬ್ ಠಾಕ್ರೆ, ಆದಿತ್ಯ ಠಾಕ್ರೆ, ಸಂಜಯ್ ರಾವತ್ ಹಾಗೂ ಇತರ ಪ್ರಮುಖರ ನಾಯಕರ ಫೊಟೋಗಳಿವೆ. ಈ ಬ್ಯಾನರ್ ಅನ್ನು ಶಿವಸೇನೆಯ ಕಾರ್ಪೊರೇಟರ್ ದೀಪಮಲಾ ಬಾಧೆ ಹಾಕಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಯ BJP ಅಭ್ಯರ್ಥಿ ದ್ರೌಪದಿ ಮುರ್ಮುಗೆ ʼZ’ ಭದ್ರತೆ

Sanjay Raut

ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ(ಎಂವಿಎ) ಮೈತ್ರಿ ಸರ್ಕಾರಕ್ಕೆ ಇದೀಗ ಸಂಕಷ್ಟ ಬಂದಿದ್ದು, ಈ ಹಿನ್ನೆಲೆ ನಿನ್ನೆಯಿಂದ ಈ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಸಂಜಯ್ ರಾವತ್ ಟ್ವೀಟ್ ಮಾಡಿ, ವಿಧಾನಸಭೆ ವಿಸರ್ಜನೆಯತ್ತ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳ ಪಯಣ ಎಂದು ಬರೆದಿದ್ದಾರೆ. ಈ ಮೂಲಕ ಶಾಸಕಾಂಗ ಸಭೆಯನ್ನು ವಿಸರ್ಜಿಸುವ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಇದನ್ನೂ ಓದಿ: ಈದ್ಗಾ ಮೈದಾನ ಮಾಲೀಕತ್ವ ನಮ್ಮದಲ್ಲ – ಉಲ್ಟಾ ಹೊಡೆದ BBMP

ಇದರ ಮಧ್ಯೆಯೇ ರಾಜ್ಯಪಾಲ ಭಗತ್ ಸಿಂಗ್ ಹಾಗೂ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಮಹಾರಾಷ್ಟ್ರದ ಸರ್ಕಾರ ಮುಂದುವರೆಯುತ್ತಾ ಅಥವಾ ಪತನಗೊಳ್ಳುತ್ತಾ ಎಂಬ ಪ್ರಶ್ನೆಗಳಿಗೆ ಶೀಘ್ರವೇ ಉತ್ತರ ಸಿಗಲಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *