ದಾವಣಗೆರೆ: ಬಂಗಾರದ ಪಾಲಿಶ್ ಮಾಡುವ ಯುವಕನೊಬ್ಬ ಟಿಪ್ಪು ಸುಲ್ತಾನ್ ಬಾಯ್ಸ್ ಎಂದು ವಾಟ್ಸಾಪ್ ಗ್ರೂಪ್ ಮಾಡಿ ದೇಶದ ಹಾಗೂ ಪ್ರಧಾನಿ ಮೋದಿ ವಿರುದ್ಧ ಅವಹೇಳನ ಮಾಡಿದ್ದು, ಈಗ ಆ ಯುವಕ ಪೊಲೀಸರ ಅಥಿತಿಯಾಗಿದ್ದಾನೆ.
ನಗರದ ಹೊಸಕ್ಯಾಂಪ್ನ ಯುವಕ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕ. ಸಿಎಎ, ಪ್ರಧಾನಿ ನರೇಂದ್ರ ಮೋದಿ ಹಾಗೂ ದೇಶದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಾನೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಯುವಕನನ್ನು ಹಿಡಿದು ಬಸವನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.
ದೇಶದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕಾನೂನು ಸುವ್ಯವಸ್ಥೆ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದಲ್ಲದೆ ಪಾಕಿಸ್ತಾನದ ಬಾವುಟವನ್ನು ಪೋಸ್ಟ್ ಮಾಡಿದ್ದಾನೆ ಎಂದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಆರೋಪಿಸಿದ್ದಾರೆ.
ಬಸವನಗರ ಪೊಲೀಸ್ ಠಾಣೆಯ ಮುಂಭಾಗ ಜನರು ಜಮಾಯಿಸಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಯುವಕನ ಮೇಲೆ ದೂರು ದಾಖಲು ಮಾಡಿದ್ದಾರೆ. ದೂರು ದಾಖಲು ಮಾಡಿಕೊಂಡ ಬಸವನಗರ ಪೊಲೀಸರು ಯುವಕನನ್ನು ಹಾಗೂ ಆತನ ಮೊಬೈಲ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ.