ಹಣ ನೀಡಲ್ಲ ಎಂದಿದ್ದಕ್ಕೆ ಬ್ಲೇಡ್‍ನಿಂದ ಪೇದೆಯ ಕುತ್ತಿಗೆ, ಕೈ-ಕಾಲು ಕೊಯ್ದ ಯುವಕರು

Public TV
1 Min Read
SMG COP

ಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಪೇದೆಯೊಬ್ಬರ ಮೇಲೆ ಮಾರಣಾಂತಿಕವಾಗಿ ಬಸ್ ನಿಲ್ದಾಣದಲ್ಲಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಕುಂಸಿ ಠಾಣೆ ಪೊಲೀಸ್ ಪೇದೆ ಮಂಜುನಾಥ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಮಂಗಳವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದಲ್ಲಿದ್ದಾಗ ಈ ಘಟನೆ ನಡೆದಿದೆ. ಇಬ್ಬರು ಯುವಕರು ಮಂಜುನಾಥ್ ಬಳಿ ಬಂದು ಹಣ ಕೇಳಿದ್ದಾರೆ. ಹಣ ನೀಡುವುದಿಲ್ಲ ಎಂದಿದ್ದಕ್ಕೆ ಕೋಪಗೊಂಡ ಯುವಕರು ಕುತ್ತಿಗೆ, ಕೈ- ಕಾಲಿಗೆ ಬ್ಲೇಡಿನಲ್ಲಿ ಕೊಯ್ದಿದ್ದಾರೆ.

SMG

ಜನ ಸೇರುತ್ತಿದ್ದಂತೆ  ಇಬ್ಬರೂ ಯುವಕರು ಸ್ಥಳದಿಂದ ಪರಾರಿ ಆಗಿದ್ದಾರೆ. ತಕ್ಷಣ ಗಾಯಗೊಂಡ ಮಂಜುನಾಥ್ ಅವರನ್ನು ಮೆಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಮಂಜುನಾಥ್ ಕುಂಸಿ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರತ್ಯಕ್ಷದರ್ಶಿಗಳು ಯುವಕರನ್ನು ಗುರುತಿಸಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಈ ಘಟನೆ ಸಂಬಂಧ ದೊಡ್ಡಪೇಟೆ ಠಾಣೆ ಪೊಲೀಸರು ಆಟೋ ಚಾಲಕ ನದೀಂ ಹಾಗೂ ನಜೀರ್ ಎಂಬ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆದರೆ ಸದ್ಯಕ್ಕೆ ಇಬ್ಬರು ಗಾಂಜಾ ನಶೆಯಲ್ಲಿದ್ದು, ಇನ್ನೂ ಯಾವುದೇ ಮಾಹಿತಿ ತಿಳಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *